AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stale food at KSCA: ಆರ್​​ಸಿಬಿ ಪಂದ್ಯದ ವೇಳೆ ಹಳಸಿದ ಆಹಾರ ಸರಬರಾಜು – ಕೆಎಸ್‌ಸಿಎ ವಿರುದ್ಧ ಎಫ್‌ಐಆರ್ ದಾಖಲು

FIR against KSCA: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಐಪಿಎಲ್ ಪಂದ್ಯ ನೋಡಲು ಹೋಗಿದ್ದ 23 ವರ್ಷದ ಯುವಕ ಚೈತನ್ಯ ಎಂಬುವರು ತಮಗೆ ನೀಡಲಾದ ಆಹಾರ ಹಳಸಿತ್ತು ಎಂದು ದೂರು ದಾಖಲಿಸಿದ್ದಾರೆ.

Stale food at KSCA:  ಆರ್​​ಸಿಬಿ ಪಂದ್ಯದ ವೇಳೆ ಹಳಸಿದ ಆಹಾರ ಸರಬರಾಜು - ಕೆಎಸ್‌ಸಿಎ ವಿರುದ್ಧ ಎಫ್‌ಐಆರ್ ದಾಖಲು
ಆರ್​​ಸಿಬಿ ಪಂದ್ಯದ ವೇಳೆ ಹಳಸಿದ ಆಹಾರ ಸರಬರಾಜು: ಎಫ್‌ಐಆರ್ ದಾಖಲು
ಸಾಧು ಶ್ರೀನಾಥ್​
|

Updated on:May 16, 2024 | 5:00 PM

Share

ಕಳೆದ ಭಾನುವಾರ ಮೇ 12 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಟಿ20 ಕ್ರಿಕೆಟ್ ಪಂದ್ಯದ ವೇಳೆ ಪ್ರೇಕ್ಷಕರಿಗೆ ಹಳಸಿದ ಆಹಾರವನ್ನು ಬಡಿಸಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಡಳಿತ ಮಂಡಳಿ ( Karnataka State Cricket Association -KSCA Management) ಮತ್ತು ಕ್ಯಾಂಟೀನ್ ಮ್ಯಾನೇಜರ್ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಐಪಿಎಲ್ ಪಂದ್ಯ (RCB vs Delhi Capitals IPL match) ನೋಡಲು ಹೋಗಿದ್ದ 23 ವರ್ಷದ ಯುವಕ ಚೈತನ್ಯ ಎಂಬುವರು ತಮಗೆ ನೀಡಲಾದ ಆಹಾರ ಹಳಸಿತ್ತು ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ (Cubbon Park police station) ದೂರು ದಾಖಲಿಸಿದ್ದಾರೆ.

ಕತಾರ್ ಏರ್‌ವೇಸ್ ಫ್ಯಾನ್ಸ್ ಟೆರೇಸ್ ಸ್ಟ್ಯಾಂಡ್‌ನಿಂದ ತನ್ನ ಸ್ನೇಹಿತ ಗೌತಮ್ ಅವರೊಂದಿಗೆ ಕ್ರೀಡಾಂಗಣದಲ್ಲಿ ಪಂದ್ಯವನ್ನು ವೀಕ್ಷಿಸಿದ್ದ 23 ವರ್ಷದ ಚೈತನ್ಯ ಅವರು ದೂರು ದಾಖಲಿಸಿದ್ದಾರೆ ಎಂದು indiatoday.in ವರದಿ ಮಾಡಿದೆ.

ಪಂದ್ಯದ ವೇಳೆ ಚೈತನ್ಯ ಅವರು ಸ್ಟ್ಯಾಂಡ್‌ ಸಮೀಪದಲ್ಲಿದ್ದ ಕ್ಯಾಂಟೀನ್‌ನಿಂದ ಆಹಾರ ಸೇವಿಸಿದ್ದಾರೆ. ಘೀ ರೈಸ್​​, ಇಡ್ಲಿ, ಚನ್ನಾ ಮಸಾಲ, ಕಟ್ಲೆಟ್, ರಾಯ್ತಾ, ಒಣ ಜಾಮೂನ್ ತಿಂದರು. ತಿಂದ ಸ್ವಲ್ಪ ಸಮಯದ ನಂತರ ಚೈತನ್ಯಗೆ ಹೊಟ್ಟೆನೋವು ಕಾಣಿಸಿಕೊಂಡಿತು.

Also Read: RCB vs CSK​ ಪಂದ್ಯ ರದ್ದತಿ ನಿರ್ಧರಿಸುವ ನಿಯಮಗಳಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ

ನಂತರ ಚೈತನ್ಯ ಕುಳಿತಲ್ಲೇ ಕುಸಿದು ಬಿದ್ದಿದ್ದಾರೆ. ಕ್ರೀಡಾಂಗಣದ ಸಿಬ್ಬಂದಿಯ ನೆರವಿನೊಂದಿಗೆ ಕ್ರೀಡಾಂಗಣದ ಹೊರಗೆ ಆಂಬುಲೆನ್ಸ್‌ನಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು.

ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಚೈತನ್ಯ ಅವರನ್ನು ಪರೀಕ್ಷಿಸಿ ಫುಡ್ ಪಾಯ್ಸನಿಂಗ್ ನಿಂದ ಬಳಲುತ್ತಿರುವುದನ್ನು ದೃಢಪಟ್ಟಿದ್ದಾರೆ. ಚೈತನ್ಯ ಅವರ ಆರೋಗ್ಯ ಹದಗೆಡಲು ಕ್ಯಾಂಟೀನ್‌ನಲ್ಲಿ ನೀಡಲಾದ ಆಹಾರ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: IPL 2024: RCB ಗೆಲ್ಲಲ್ಲ, ಪ್ಲೇಆಫ್​ ಪ್ರವೇಶಿಸಲ್ಲ ಎಂದ ಐವರು ಮಾಜಿ ಕ್ರಿಕೆಟಿಗರು

Published On - 4:47 pm, Thu, 16 May 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ