AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಗೇಮ್ ಪಾಸ್​ವರ್ಡ್​ ಕೊಟ್ಟಿಲ್ಲವೆಂದು ಯುವಕನ ಕೊಂದು, ಸುಟ್ಟು ಹಾಕಿದ ಸ್ನೇಹಿತರು

ಕ್ಷುಲ್ಲಕ ವಿಚಾರ ಯುವಕನನ್ನೇ ಬಲಿ ತೆಗೆದುಕೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಆನ್‌ಲೈನ್ ಮೊಬೈಲ್ ಗೇಮ್‌ನ (ಫ್ರೀ ಫೈರ್) ಪಾಸ್‌ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಯುವಕನನ್ನು ಅವನ ನಾಲ್ವರು ಸ್ನೇಹಿತರು ಕೊಲೆ ಮಾಡಿದ್ದಾರೆ. ನಂತರ ಅವರ ದೇಹವನ್ನು ಸ್ನೇಹಿತರು ಸುಟ್ಟು ಹಾಕಿ ಕಾಡಿನಲ್ಲಿ ಎಸೆದಿರುವ ಮಾಹಿತಿ ಲಭ್ಯವಾಗಿದೆ.

ಆನ್​ಲೈನ್ ಗೇಮ್ ಪಾಸ್​ವರ್ಡ್​ ಕೊಟ್ಟಿಲ್ಲವೆಂದು ಯುವಕನ ಕೊಂದು, ಸುಟ್ಟು ಹಾಕಿದ ಸ್ನೇಹಿತರು
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on:Jan 19, 2024 | 10:36 AM

Share

ಕ್ಷುಲ್ಲಕ ವಿಚಾರ ಯುವಕನನ್ನೇ ಬಲಿ ತೆಗೆದುಕೊಂಡಿರುವ ಘಟನೆ ಪಶ್ಚಿಮ ಬಂಗಾಳ(West Bengal)ದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಆನ್‌ಲೈನ್ ಮೊಬೈಲ್ ಗೇಮ್‌ನ (ಫ್ರೀ ಫೈರ್) ಪಾಸ್‌ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಯುವಕನನ್ನು ಅವನ ನಾಲ್ವರು ಸ್ನೇಹಿತರು ಕೊಲೆ ಮಾಡಿದ್ದಾರೆ. ನಂತರ ಅವರ ದೇಹವನ್ನು ಸ್ನೇಹಿತರು ಸುಟ್ಟು ಹಾಕಿ ಕಾಡಿನಲ್ಲಿ ಎಸೆದಿರುವ ಮಾಹಿತಿ ಲಭ್ಯವಾಗಿದೆ.

ಕಳೆದ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಪಾಪೈ ದಾಸ್ (18) ಶವ ಜನವರಿ 15 ರಂದು ಕಾಡಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ತಾಯಿ ಪೂರ್ಣಿಮಾ ದಾಸ್ ಪೊಲೀಸರಿಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಲಾಗಿತ್ತು. ಈ ಐವರು ಕ್ವಾರ್ಟರ್ಸ್​ ಒಂದರಲ್ಲಿ ಆನ್​ಲೈನ್​ ಆಟಗಳನ್ನು ಆಡುತ್ತಿದ್ದರು. ಯುವಕ ಸಜೆ 8 ಗಂಟೆಗೆ ಮನೆಯಿಂದ ಹೊರ ಹೋದವನು ವಾಪಸ್ ಬಂದಿರಲಿಲ್ಲ. ಆತನನ್ನು ಕೊಂದ ಸ್ನೇಹಿತರು ತಮ್ಮ ಬೈಕ್​ಗಳಿಂದ ಪೆಟ್ರೋಲ್ ತೆಗೆದು ಯುವಕನನ್ನು ಸುಟ್ಟುಹಾಕಿದ್ದಾರೆ.

ಮತ್ತಷ್ಟು ಓದಿ: ಹೈದರಾಬಾದ್: ತಲೆ ಕಡಿದು ಬರ್ಬರವಾಗಿ ಪತ್ನಿಯ ಹತ್ಯೆ ಮಾಡಿದ ಆಟೋ ಡ್ರೈವರ್

ಕೊಲೆಯಲ್ಲಿ ಭಾಗಿಯಾಗಿದ್ದ ನಾಲ್ವರು ಅಪ್ರಾಪ್ತ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ನಾಳೆ ಜಿಲ್ಲಾ ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:28 am, Fri, 19 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ