AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಮಹಿಳೆಗೆ ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ FIR ದಾಖಲು

ಬೆಂಗಳೂರು: ವಿದೇಶಿ ಮೂಲದ ವಿವಾಹಿತೆಯಿಂದ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗು ಹಲ್ಲೆ ಮಾಡಿದ್ದಾಗಿ ಆರೋಪಿಸಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪತಿ ವಿಕ್ರಂ ಮಾಡಾ ವಿರುದ್ಧ ಪತ್ನಿ ಚಿಲಿ ದೇಶದ ಕಾರ್ಲಾ ಮಾರ್ಟೂಸ್ ಬ್ರಾವೂ ದೂರು ನೀಡಿದ್ದಾಳೆ. ಭರತನಾಟ್ಯ, ಕಥಕ್ ಕಲಿಯಲು 2017ರಲ್ಲಿ ಕಾರ್ಲಾ ಮಾರ್ಟೂಸ್ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಹೈದರಾಬಾದ್ ಮೂಲದ ವಿಕ್ರಂ ಮಾಡ ಜತೆ ಪ್ರೇಮಾಂಕುರವಾಗಿತ್ತು. 2018ರ ಜುಲೈನಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು. ಮದುವೆ ಬಳಿಕ ಜೆ.ಪಿ.ನಗರದ ಪುಟ್ಟೇನಹಳ್ಳಿಯಲ್ಲಿ […]

ವಿದೇಶಿ ಮಹಿಳೆಗೆ ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ FIR ದಾಖಲು
ಸಾಧು ಶ್ರೀನಾಥ್​
|

Updated on:Jan 25, 2020 | 2:01 PM

Share

ಬೆಂಗಳೂರು: ವಿದೇಶಿ ಮೂಲದ ವಿವಾಹಿತೆಯಿಂದ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗು ಹಲ್ಲೆ ಮಾಡಿದ್ದಾಗಿ ಆರೋಪಿಸಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪತಿ ವಿಕ್ರಂ ಮಾಡಾ ವಿರುದ್ಧ ಪತ್ನಿ ಚಿಲಿ ದೇಶದ ಕಾರ್ಲಾ ಮಾರ್ಟೂಸ್ ಬ್ರಾವೂ ದೂರು ನೀಡಿದ್ದಾಳೆ.

ಭರತನಾಟ್ಯ, ಕಥಕ್ ಕಲಿಯಲು 2017ರಲ್ಲಿ ಕಾರ್ಲಾ ಮಾರ್ಟೂಸ್ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಹೈದರಾಬಾದ್ ಮೂಲದ ವಿಕ್ರಂ ಮಾಡ ಜತೆ ಪ್ರೇಮಾಂಕುರವಾಗಿತ್ತು. 2018ರ ಜುಲೈನಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು. ಮದುವೆ ಬಳಿಕ ಜೆ.ಪಿ.ನಗರದ ಪುಟ್ಟೇನಹಳ್ಳಿಯಲ್ಲಿ ವಾಸವಾಗಿದ್ದರು. 2019ರಲ್ಲಿ ದಂಪತಿ ಚಿಲಿ ದೇಶಕ್ಕೆ ಹೋಗಿ ಬಂದಿದ್ರು. ಆ ಬಳಿಕ ಪತ್ನಿ ಮನೆಯ ಸ್ಥಿತಿಗತಿ ಕಂಡು ಹಣಕ್ಕಾಗಿ ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ಕಾರ್ಲಾ ಆರೋಪಿಸಿದ್ದಾರೆ.

ತನ್ನನ್ನು ಅನುಮಾನಿಸಿ ವಿಕ್ರಂ ಮಾಡಾ ಕಿರುಕುಳ ನೀಡುತ್ತಿದ್ದಾನೆ. ವಿಚ್ಛೇದನ ನೀಡಲು ಪರಸ್ಪರ ನಿರ್ಧರಿಸಿ ಮಾತನಾಡಲು ತೆರಳಿದ್ದಾಗ ಹಲ್ಲೆ ಮಾಡಿರುವುದಾಗಿ ಆರೋಪಿಸಿ ಪತಿ ವಿಕ್ರಂ ಮಾಡಾ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಎಫ್​ಐಆರ್ ದಾಖಲಿಸಿಕೊಂಡಿರುವ ಬಸವನಗುಡಿ ಮಹಿಳಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Published On - 11:59 am, Sat, 25 January 20

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!