ಕೊರೊನಾ ಇದ್ರೂ ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ, ನಾಲ್ವರು ಅರೆಸ್ಟ್​! ಎಲ್ಲಿ?

ಚಿತ್ರದುರ್ಗ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಕೆಲವೊಂದು ಕಡೆ ದುಷ್ಕರ್ಮಿಗಳು ಬಾರ್​ಗಳಿಗೇ ಕನ್ನ ಹಾಕಿ ಮದ್ಯವನ್ನು ದೋಚಿದ್ದಾರೆ. ಆದ್ರೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದ ಬಳಿ ಆ್ಯಂಬುಲೆನ್ಸ್‌ನಲ್ಲಿ ಕಿಡಿಗೇಡಿಗಳು ಮದ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ ಮಾಡಿ ಓಮಿನಿ ವ್ಯಾನ್​ಗೆ ಎಣ್ಣೆಯನ್ನ ಶಿಫ್ಟ್​ ಮಾಡುವ ವೇಳೆ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಾಲಕ ಸುಬಾನ್, ಲ್ಯಾಬ್ ಟೆಕ್ನೀಷಿಯನ್ ಸಂತೋಷ, ಶಿವಗಂಗಾ ಗ್ರಾಮದ […]

ಕೊರೊನಾ ಇದ್ರೂ ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ, ನಾಲ್ವರು ಅರೆಸ್ಟ್​!  ಎಲ್ಲಿ?
ಸಾಧು ಶ್ರೀನಾಥ್​

Updated on: Apr 21, 2020 | 3:54 PM

ಚಿತ್ರದುರ್ಗ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಕೆಲವೊಂದು ಕಡೆ ದುಷ್ಕರ್ಮಿಗಳು ಬಾರ್​ಗಳಿಗೇ ಕನ್ನ ಹಾಕಿ ಮದ್ಯವನ್ನು ದೋಚಿದ್ದಾರೆ. ಆದ್ರೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದ ಬಳಿ ಆ್ಯಂಬುಲೆನ್ಸ್‌ನಲ್ಲಿ ಕಿಡಿಗೇಡಿಗಳು ಮದ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಾರೆ.

ಆ್ಯಂಬುಲೆನ್ಸ್‌ನಲ್ಲಿ ಮದ್ಯ ಸಾಗಾಟ ಮಾಡಿ ಓಮಿನಿ ವ್ಯಾನ್​ಗೆ ಎಣ್ಣೆಯನ್ನ ಶಿಫ್ಟ್​ ಮಾಡುವ ವೇಳೆ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಾಲಕ ಸುಬಾನ್, ಲ್ಯಾಬ್ ಟೆಕ್ನೀಷಿಯನ್ ಸಂತೋಷ, ಶಿವಗಂಗಾ ಗ್ರಾಮದ ಜೀವನ್, ಗಿರೀಶ ಬಂಧಿತರು. ಆ್ಯಂಬುಲೆನ್ಸ್​ನಲ್ಲಿದ್ದ್ದ 14 ಬಾಕ್ಸ್ ಮದ್ಯವನ್ನು ಪೊಲೀಸರು ಜಪ್ತಿ ಮಾಡಿದ್ದು, ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Published On - 1:43 pm, Tue, 21 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us