AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖೋಟಾನೋಟು ಚಲಾವಣೆಗೆ ಯತ್ನಿಸ್ತಿದ್ದ ಆರೋಪಿಗಳು ಸಿಐಡಿ ಬಲೆಗೆ.. ಬೆಂಗಳೂರಿನಲ್ಲಿ ನಾಲ್ವರು ಅರೆಸ್ಟ್

ದೊಡ್ಡತೋಗುರು ಗ್ರಾಮದ ಸೆಲೆಬ್ರೆಟಿ ಲೇಔಟ್ ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ಖೋಟಾನೋಟು ಸಾಗಟ ಮಾಡುತ್ತಿದ್ದ ವೇಳೆ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರಿನ ಪರಿಶೀಲನೆ ನಡೆಸಿ ಪೊಲೀಸರು ಬಂಧಿತರ ಬಳಿ ಇದ್ದ 6.80 ಲಕ್ಷ ಮೌಲ್ಯದ 2 ಸಾವಿರ ಮುಖಬೆಲೆಯ 340 ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಖೋಟಾನೋಟು ಚಲಾವಣೆಗೆ ಯತ್ನಿಸ್ತಿದ್ದ ಆರೋಪಿಗಳು ಸಿಐಡಿ ಬಲೆಗೆ.. ಬೆಂಗಳೂರಿನಲ್ಲಿ ನಾಲ್ವರು ಅರೆಸ್ಟ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Mar 01, 2021 | 8:02 AM

Share

ಬೆಂಗಳೂರು: ಖೋಟಾನೋಟು ಚಲಾವಣೆಗೆ ಯತ್ನಿಸ್ತಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಸೆರೆ ಹಿಡಿಯಲಾಗಿದೆ. ಸಿಐಡಿ ಪೊಲೀಸರು ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವ, ನಾಗೇಂದ್ರ, ಪ್ರಕಾಶ್, ಲಕ್ಷ್ಮಣ ಬಂಧಿತ ಆರೋಪಿಗಳು. ಬಂಧಿತ ನಾಲ್ವರು ಆರೋಪಿಗಳು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ನಿವಾಸಿಗಳು.

ದೊಡ್ಡತೋಗುರು ಗ್ರಾಮದ ಸೆಲೆಬ್ರೆಟಿ ಲೇಔಟ್ ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ಖೋಟಾನೋಟು ಸಾಗಟ ಮಾಡುತ್ತಿದ್ದ ವೇಳೆ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರಿನ ಪರಿಶೀಲನೆ ನಡೆಸಿ ಪೊಲೀಸರು ಬಂಧಿತರ ಬಳಿ ಇದ್ದ 6.80 ಲಕ್ಷ ಮೌಲ್ಯದ 2 ಸಾವಿರ ಮುಖಬೆಲೆಯ 340 ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ FIR ದಾಖಲಾಗಿದೆ. ಕೇಸ್ ದಾಖಲಿಸಿ ಖೋಟಾನೋಟಿನ ಜಾಲವನ್ನು ಪತ್ತೆ ಹಚ್ಚಲು ಸಿಐಡಿ ಪೊಲೀಸರು ಮುಂದಾಗಿದ್ದು ಶೋಧ ಶುರು ಮಾಡಿದ್ದಾರೆ.

ಇನ್ನು ಇದೇ ರೀತಿ ಕೆಲ ತಿಂಗಳ ಹಿಂದೆ ನಕಲಿ ನೋಟ್​​ ಮುದ್ರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೂರ್ಯಸಿಟಿ ಪೊಲೀಸರು ಅರೆಸ್ಟ್​ ಮಾಡಿದ್ದರು. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಹಾಗೂ ನರೇಶ್ ಬಂಧಿತ ಆರೋಪಿಗಳು. ಬಂಧಿತರಿಂದ ನೋಟ್​ಪ್ರಿಂಟ್​ ಮಷಿನ್ ಹಾಗೂ 6 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿತ್ತು. 100, 200, 500 ಮುಖಬೆಲೆಯ ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿತ್ತು.

ಕಲರ್ ಮಷಿನ್ ಮೂಲಕ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ವಂಚಕರು ಸಂತೆ ಸೇರಿದಂತೆ ಅಂಗಡಿಗಳಲ್ಲಿ ಇದನ್ನು ಬಳಸುತ್ತಿದ್ದರು. ಅಂತೆಯೇ, ಈ ಸಲ ಸಂತೆ ಅಂಗಡಿಗಳಿಗೆ ನೋಟು ನೀಡುತ್ತಿದ್ದಾಗ ಆರೋಪಿಗಳು ಅಂದರ್ ಆಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೂರ್ಯನಗರ ಠಾಣೆಯ ಪೊಲೀಸರು ಇಬ್ಬರನ್ನು ಅರೆಸ್ಟ್​ ಮಾಡಿದ್ದರು.

ಇದನ್ನೂ ಓದಿ:ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ