AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖೋಟಾನೋಟು ಚಲಾವಣೆಗೆ ಯತ್ನಿಸ್ತಿದ್ದ ಆರೋಪಿಗಳು ಸಿಐಡಿ ಬಲೆಗೆ.. ಬೆಂಗಳೂರಿನಲ್ಲಿ ನಾಲ್ವರು ಅರೆಸ್ಟ್

ದೊಡ್ಡತೋಗುರು ಗ್ರಾಮದ ಸೆಲೆಬ್ರೆಟಿ ಲೇಔಟ್ ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ಖೋಟಾನೋಟು ಸಾಗಟ ಮಾಡುತ್ತಿದ್ದ ವೇಳೆ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರಿನ ಪರಿಶೀಲನೆ ನಡೆಸಿ ಪೊಲೀಸರು ಬಂಧಿತರ ಬಳಿ ಇದ್ದ 6.80 ಲಕ್ಷ ಮೌಲ್ಯದ 2 ಸಾವಿರ ಮುಖಬೆಲೆಯ 340 ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಖೋಟಾನೋಟು ಚಲಾವಣೆಗೆ ಯತ್ನಿಸ್ತಿದ್ದ ಆರೋಪಿಗಳು ಸಿಐಡಿ ಬಲೆಗೆ.. ಬೆಂಗಳೂರಿನಲ್ಲಿ ನಾಲ್ವರು ಅರೆಸ್ಟ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Mar 01, 2021 | 8:02 AM

Share

ಬೆಂಗಳೂರು: ಖೋಟಾನೋಟು ಚಲಾವಣೆಗೆ ಯತ್ನಿಸ್ತಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಸೆರೆ ಹಿಡಿಯಲಾಗಿದೆ. ಸಿಐಡಿ ಪೊಲೀಸರು ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವ, ನಾಗೇಂದ್ರ, ಪ್ರಕಾಶ್, ಲಕ್ಷ್ಮಣ ಬಂಧಿತ ಆರೋಪಿಗಳು. ಬಂಧಿತ ನಾಲ್ವರು ಆರೋಪಿಗಳು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ನಿವಾಸಿಗಳು.

ದೊಡ್ಡತೋಗುರು ಗ್ರಾಮದ ಸೆಲೆಬ್ರೆಟಿ ಲೇಔಟ್ ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ಖೋಟಾನೋಟು ಸಾಗಟ ಮಾಡುತ್ತಿದ್ದ ವೇಳೆ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರಿನ ಪರಿಶೀಲನೆ ನಡೆಸಿ ಪೊಲೀಸರು ಬಂಧಿತರ ಬಳಿ ಇದ್ದ 6.80 ಲಕ್ಷ ಮೌಲ್ಯದ 2 ಸಾವಿರ ಮುಖಬೆಲೆಯ 340 ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ FIR ದಾಖಲಾಗಿದೆ. ಕೇಸ್ ದಾಖಲಿಸಿ ಖೋಟಾನೋಟಿನ ಜಾಲವನ್ನು ಪತ್ತೆ ಹಚ್ಚಲು ಸಿಐಡಿ ಪೊಲೀಸರು ಮುಂದಾಗಿದ್ದು ಶೋಧ ಶುರು ಮಾಡಿದ್ದಾರೆ.

ಇನ್ನು ಇದೇ ರೀತಿ ಕೆಲ ತಿಂಗಳ ಹಿಂದೆ ನಕಲಿ ನೋಟ್​​ ಮುದ್ರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೂರ್ಯಸಿಟಿ ಪೊಲೀಸರು ಅರೆಸ್ಟ್​ ಮಾಡಿದ್ದರು. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಹಾಗೂ ನರೇಶ್ ಬಂಧಿತ ಆರೋಪಿಗಳು. ಬಂಧಿತರಿಂದ ನೋಟ್​ಪ್ರಿಂಟ್​ ಮಷಿನ್ ಹಾಗೂ 6 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿತ್ತು. 100, 200, 500 ಮುಖಬೆಲೆಯ ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿತ್ತು.

ಕಲರ್ ಮಷಿನ್ ಮೂಲಕ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ವಂಚಕರು ಸಂತೆ ಸೇರಿದಂತೆ ಅಂಗಡಿಗಳಲ್ಲಿ ಇದನ್ನು ಬಳಸುತ್ತಿದ್ದರು. ಅಂತೆಯೇ, ಈ ಸಲ ಸಂತೆ ಅಂಗಡಿಗಳಿಗೆ ನೋಟು ನೀಡುತ್ತಿದ್ದಾಗ ಆರೋಪಿಗಳು ಅಂದರ್ ಆಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೂರ್ಯನಗರ ಠಾಣೆಯ ಪೊಲೀಸರು ಇಬ್ಬರನ್ನು ಅರೆಸ್ಟ್​ ಮಾಡಿದ್ದರು.

ಇದನ್ನೂ ಓದಿ:ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ