AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು

ಕತ್ತಿಯಿಂದ ಹೊಡೆದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Feb 24, 2023 | 8:06 PM

Share

ಕಾರವಾರ: ಉತ್ತರ ಕನ್ನಡ(Uttara Kannada) ಜಿಲ್ಲೆ ಭಟ್ಕಳ ತಾಲೂಕಿನ ಹಾಡವಳ್ಳಿ(hadavalli Village) ಬಳಿ ಇಂದು(ಫೆ.24) ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ(murder) ಮಾಡಲಾಗಿದೆ. ಪತಿ ಶಂಭು ಭಟ್(65) ಪತ್ನಿ ಮಾದೇವಿ ಭಟ್(40) ಮಗ ರಾಜೀವ್ ಭಟ್(34) ಸೊಸೆ ಕುಸುಮಾ ಭಟ್(30) ಎನ್ನುವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಅದೃಷ್ಟವಶಾತ್ ಕುಸುಮಾ ದಂಪತಿಯ ಮಗು ಬಚಾವ್ ಆಗಿದೆ.

ಇದನ್ನೂ ಓದಿ: ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಲ್ಲಿ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.  ಹಿರಿಯ ಮಗನ ಪತ್ನಿ & ಆಕೆಯ ಕುಟುಂಬಸ್ಥರು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಶಂಭು ಭಟ್ ಹಿರಿಯ ಮಗ ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದರು. ಪತಿ ಸಾವಿನ ಬಳಿಕ ವಿದ್ಯಾ ಭಟ್ ತವರು ಮನೆ ಸೇರಿದ್ದಳು. ಬಳಿಕ ಜೀವನಾಂಶ ಹಾಗೂ ಆಸ್ತಿ ವಿಚಾರದಲ್ಲಿ ಶಂಭು ಭಟ್ ಹಾಗೂ ವಿದ್ಯಾ ಭಟ್ ತವರು ಮನೆಯವರ ನಡುವೆ ಗಲಾಟೆ ನಡೆದಿತ್ತು. ಜೀವನಾಂಶ ಕೊಡಲು ನಿರಾಕರಿಸಿದ್ದರಿಂದ ಕೊಲೆ ಮಾಡಲಾಗಿದೆ. ಸದ್ಯ ಶ್ರೀಧರ್ ಭಟ್​ನನ್ನು ಭಟ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಟ್ಟೆ ವ್ಯಾಪಾರಿ ಆತ್ಮಹತ್ಯೆಗೆ ಶರಣು

ಕೊಡಗು: ಮಡಿಕೇರಿ ತಾಲೂಕಿನ ನಾಪೋಕ್ಲು ಪಟ್ಟಣದಲ್ಲಿ ಬಟ್ಟೆ ವ್ಯಾಪಾರಿ ಹೆಚ್.ಕೆ.ಸಂದೀಪ್(40) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಸಕಲೇಶಪುರ ತಾಲೂಕಿನ ಹಡ್ಲಹಳ್ಳಿ ನಿವಾಸಿಯಾಗಿರುವ ಸಂದೀಪ್; ಕಳೆದ 20 ವರ್ಷಗಳಿಂದ ನಾಪೋಕ್ಲುವಿನಲ್ಲಿ ಆರ್​​ಹೆಚ್​ ಬಟ್ಟೆಮಳಿಗೆ ನಡೆಸುತ್ತಿದ್ದ. ಆದ್ರೆ, ವ್ಯಾಪಾರದಲ್ಲಿ ನಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:43 pm, Fri, 24 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು