Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು

ಕತ್ತಿಯಿಂದ ಹೊಡೆದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Feb 24, 2023 | 8:06 PM

ಕಾರವಾರ: ಉತ್ತರ ಕನ್ನಡ(Uttara Kannada) ಜಿಲ್ಲೆ ಭಟ್ಕಳ ತಾಲೂಕಿನ ಹಾಡವಳ್ಳಿ(hadavalli Village) ಬಳಿ ಇಂದು(ಫೆ.24) ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ(murder) ಮಾಡಲಾಗಿದೆ. ಪತಿ ಶಂಭು ಭಟ್(65) ಪತ್ನಿ ಮಾದೇವಿ ಭಟ್(40) ಮಗ ರಾಜೀವ್ ಭಟ್(34) ಸೊಸೆ ಕುಸುಮಾ ಭಟ್(30) ಎನ್ನುವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಅದೃಷ್ಟವಶಾತ್ ಕುಸುಮಾ ದಂಪತಿಯ ಮಗು ಬಚಾವ್ ಆಗಿದೆ.

ಇದನ್ನೂ ಓದಿ: ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಲ್ಲಿ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.  ಹಿರಿಯ ಮಗನ ಪತ್ನಿ & ಆಕೆಯ ಕುಟುಂಬಸ್ಥರು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಶಂಭು ಭಟ್ ಹಿರಿಯ ಮಗ ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದರು. ಪತಿ ಸಾವಿನ ಬಳಿಕ ವಿದ್ಯಾ ಭಟ್ ತವರು ಮನೆ ಸೇರಿದ್ದಳು. ಬಳಿಕ ಜೀವನಾಂಶ ಹಾಗೂ ಆಸ್ತಿ ವಿಚಾರದಲ್ಲಿ ಶಂಭು ಭಟ್ ಹಾಗೂ ವಿದ್ಯಾ ಭಟ್ ತವರು ಮನೆಯವರ ನಡುವೆ ಗಲಾಟೆ ನಡೆದಿತ್ತು. ಜೀವನಾಂಶ ಕೊಡಲು ನಿರಾಕರಿಸಿದ್ದರಿಂದ ಕೊಲೆ ಮಾಡಲಾಗಿದೆ. ಸದ್ಯ ಶ್ರೀಧರ್ ಭಟ್​ನನ್ನು ಭಟ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಟ್ಟೆ ವ್ಯಾಪಾರಿ ಆತ್ಮಹತ್ಯೆಗೆ ಶರಣು

ಕೊಡಗು: ಮಡಿಕೇರಿ ತಾಲೂಕಿನ ನಾಪೋಕ್ಲು ಪಟ್ಟಣದಲ್ಲಿ ಬಟ್ಟೆ ವ್ಯಾಪಾರಿ ಹೆಚ್.ಕೆ.ಸಂದೀಪ್(40) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಸಕಲೇಶಪುರ ತಾಲೂಕಿನ ಹಡ್ಲಹಳ್ಳಿ ನಿವಾಸಿಯಾಗಿರುವ ಸಂದೀಪ್; ಕಳೆದ 20 ವರ್ಷಗಳಿಂದ ನಾಪೋಕ್ಲುವಿನಲ್ಲಿ ಆರ್​​ಹೆಚ್​ ಬಟ್ಟೆಮಳಿಗೆ ನಡೆಸುತ್ತಿದ್ದ. ಆದ್ರೆ, ವ್ಯಾಪಾರದಲ್ಲಿ ನಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:43 pm, Fri, 24 February 23

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್