AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ವಂಚನೆ; ಕೊಟ್ಟ ದುಡ್ಡು ವಾಪಾಸ್​ ಕೇಳಲು ಬಂದಾಕೆಯನ್ನೇ ಕಿಡ್ನಾಪ್​ಗೆ​ ಯತ್ನ

ಶೇರ್ ಮಾರ್ಕೆಟ್​ನಲ್ಲಿ ಹಣ ಹಾಕಿ ಮೂರೇ ತಿಂಗಳಿಗೆ ಡಬಲ್ ಮಾಡಿ ಕೊಡುತ್ತೇವೆ ಎಂದು ಹೇಳಿ‌ ಅನೇಕರಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಗ್ಯಾಂಗ್​ನ್ನ ಪೊಲೀಸರು ಬಂಧಿಸಿದ್ದು, ಕೊಟ್ಟ ದುಡ್ಡು ವಾಪಾಸ್​ ಕೇಳಲು ಬಂದಾಕೆಯನ್ನೇ ಕಿಡ್ನಾಪ್​ ಮಾಡಲು ಯತ್ನಿಸಿದ್ದಾರೆ.

Kalaburagi: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ವಂಚನೆ; ಕೊಟ್ಟ ದುಡ್ಡು ವಾಪಾಸ್​ ಕೇಳಲು ಬಂದಾಕೆಯನ್ನೇ ಕಿಡ್ನಾಪ್​ಗೆ​ ಯತ್ನ
ಆರೋಪಿಗಳು
ಸಂಜಯ್ಯಾ ಚಿಕ್ಕಮಠ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jun 27, 2023 | 7:39 AM

Share

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಶೇರ್ ಮಾರ್ಕೆಟ್ ದಂಧೆ ಜೋರಾಗಿ ನಡೆಯುತ್ತಿದೆ. ಶೇರ್ ಮಾರ್ಕೆಟ್​(Share Market)ನಲ್ಲಿ ದುಡ್ಡು ಹಾಕಿ, ಮೂರೇ ತಿಂಗಳಿಗೆ ಡಬಲ್ ಮಾಡಿ ಕೊಡುತ್ತೇವೆ ಎಂದು ಹೇಳಿ‌ ಅನೇಕರಿಂದ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಗ್ಯಾಂಗ್​ನ್ನ ಪೊಲೀಸರು ಬಂಧಿಸಿದ್ದಾರೆ. ಹೌದು ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಗೌಡಗಾಂವ್ ಗ್ರಾಮದ ನಿವಾಸಿಗಳಾದ ಮಂಗಳಾ ಮತ್ತು ಮಹೇಶ್ ಎನ್ನುವ ದಂಪತಿಯಿಂದ‌ ವಂಚನೆ ಆರೋಪ ಕೇಳಿಬಂದಿದೆ. ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಎಫ್​ಡಿ‌ಎ ಆಗಿ ಮಂಗಳಾ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಮಧ್ಯೆ ಶೇರ್ ಮಾರ್ಕೆಟ್ ದಂಧೆಯನ್ನು ಮಾಡುತ್ತಾ ಜನರಿಗೆ ವಂಚಿಸುತ್ತಿದ್ದರು.

ಹಣ ಕೇಳಲು ಹೋಗಿದ್ದ ಮಹಿಳೆಯನ್ನೇ ಅಪಹರಿಸಿಕೊಂಡು ಹೋಗಲು ಮುಂದಾಗಿದ್ದ ಮಂಗಳಾ

ಇನ್ನು ನಿನ್ನೆ(ಜೂ.26) ಸಂಜೆ ಕಲಬುರಗಿ ನಗರದ ಸಾವಿತ್ರಿ ಎನ್ನುವ ಮಹಿಳೆ, ಆರೋಪಿ ಮಂಗಳಾಗೆ 21 ಲಕ್ಷ ‌ಹಣವನ್ನ ಕೊಟ್ಟಿದ್ದರಂತೆ. ಅನೇಕ ತಿಂಗಳಾದರೂ ಕೂಡ ಹಣ ಮರಳಿ ನೀಡಿರಲಿಲ್ಲ. ಇದೇ ಕಾರಣಕ್ಕೆ ಸಾವಿತ್ರಿ, ಮಂಗಳಾ ಕೆಲಸ ನಿರ್ವಹಿಸುವ ಶಾಲೆ ಬಳಿ ಹೋಗಿದ್ದಾಳೆ. ಈ ವೇಳೆ ಏಕಾಎಕಿ ಮಂಗಳಾ ಮತ್ತು ಆಕೆಯ ಗ್ಯಾಂಗ್ ಸಾವಿತ್ರಿಯನ್ನೇ ಅಪಹರಣ ಮಾಡಿಕೊಂಡು ಹೋಗಲು ಮುಂದಾಗಿದ್ದರು. ತಾವು ಪೊಲೀಸರು ಎಂದು ಹೇಳಿ ಆರೋಪಿಗಳಾದ ರಾಜಕುಮಾರ್​ ಮತ್ತು ದಯಾನಂದ್ ಇಬ್ಬರು ಸಾವಿತ್ರಿಗೆ ಬೆದರಿಸಿದ್ದರು. ತನ್ನ ಬಳಿಯಿದ್ದ ಲೈಸೆನ್ಸ್ ಪಿಸ್ತೂಲ್​ನಿಂದ ದಯಾನಂದ್ ಬೆದರಿಕೆ ಹಾಕಿದ್ದ.

ಇದನ್ನೂ ಓದಿ:ಕಾಗಿನೆಲೆ ಮಠದಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಗಟ್ಟಲೆ ಹಣ ಪಡೆದು ವಂಚನೆ: ಆರೋಪಿಗಳು ಅರೆಸ್ಟ್​

ಆರೋಪಿಗಳು ಅರೆಸ್ಟ್​

ಈ ವಿಷಯ ತಿಳಿಯುತ್ತಿದ್ದಂತೆ ಸಾವಿತ್ರಿ ಪುತ್ರ ಆಗಮಿಸಿ, ಮಂಗಳಾ ಮತ್ತು ಸಾವಿತ್ರಿಯಿದ್ದ ಕಾರ್​ನ್ನು ಕಲಬುರಗಿ ನಗರದ ಹೈಕೋರ್ಟ್ ಬಳಿ ಅಡ್ಡಗಟ್ಟಿ ತಡೆದಿದ್ದ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮಂಗಳಾ, ರಾಜಕುಮಾರ, ದಯಾನಂದ್, ನಭಿಸಾಬ್​ರನ್ನು ವಿಶ್ವವಿದ್ಯಾಲಯ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:30 am, Tue, 27 June 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ