AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ

ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ. 

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ
ನೆಲಮಂಗಲ ಟೌನ್ ಠಾಣೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 08, 2024 | 4:43 PM

Share

ನೆಲಮಂಗಲ, ಜನವರಿ 08: ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ (Fraud) ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ಅಡವಿಟ್ಟ ಕಾರು ಬಿಡಿಸಿಕೊಳ್ಳಲು ರಾಜು ಬಳಿಯಿಂದ ಹಣ ಪಡೆದಿದ್ದ.

ಕಾರ್ತಿಕ್ ಮಾತು ನಂಬಿ ರಾಜು ಬ್ಯಾಂಕ್‌ನಲ್ಲೇ ಹಣ ಕೊಟ್ಟಿದ್ದ. ಸಾಕ್ಷಿಗಾಗಿ ಬ್ಯಾಂಕಿನಲ್ಲಿ ಹಣ ಎಣಿಸುವ ದೃಶ್ಯ ಸೆರೆ ಹಿಡಿಯಲಾಗಿದೆ. ಇದೀಗ ಕಾನ್ಸ್‌ಟೇಬಲ್ ಕಾರ್ತಿಕ್ ಹಣ ವಾಪಸ್ ಕೇಳಿದರೆ ಸಬೂಬು ಹೇಳುತ್ತಿದ್ದಾರೆ. ಈ ಕುರಿತಾಗಿ ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ.

ಇದನ್ನೂ ಓದಿ: ಕಲಬುರಗಿ ನಗರದಲ್ಲಿದೆ ಖತರ್ನಾಕ್​ ಗ್ಯಾಂಗ್​: ಜಮೀನು ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ ವಂಚನೆ

ಕಾನ್ಸ್‌ಟೇಬಲ್‌ ಕಾರ್ತಿಕ್‌ನಿಂದ ಹಣ ವಾಪಸ್ ಕೊಡಿಸುವುದಾಗಿ ನೆಲಮಂಗಲ ಸಂಚಾರಿ ಠಾಣೆ ಇನ್ಸ್‌ಪೆಕ್ಟರ್ ರವಿ ಭರವಸೆ ನೀಡಿದ್ದಾರೆ. ಈ ಹಿಂದೆಯೂ ಹಲವರ ಬಳಿ ಹಣ ಪಡೆದು ಕಾರ್ತಿಕ್‌ ವಂಚಿಸಿದ್ದ ಎನ್ನಲಾಗಿದೆ.

ಎಲೆಕ್ಟ್ರಿಕ್ ಬೈಕಿಗೆ ಕ್ಯಾಂಟರ್ ಡಿಕ್ಕಿ: ಬೈಕ್ ಸವಾರ ಪಾರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​​ನಲ್ಲಿ ಎಲೆಕ್ಟ್ರಿಕ್ ಬೈಕಿಗೆ ಕ್ಯಾಂಟರ್​ ವಾಹನ ಡಿಕ್ಕಿ ಹೊಡೆದಿದ್ದು, ಪವಾಡ ಸದೃಶ್ಯವಾಗಿ ಬೈಕ್ ಸವಾರ ಪಾರಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿ 4 ಅರಿಶಿನಕುಂಟೆ ಯಲ್ಲಿ ಘಟನೆ ಸಂಭವಿಸಿದೆ. ರವಿಕುಮಾರ್​ ಪಾರಾದ ಬೈಕ್ ಸವಾರ. ಕ್ಯಾಂಟರ್ ಸಮೇತವಾಗಿ ಚಾಲಕನನ್ನು ಪೊಲೀಸ್ ವಶಕ್ಕೆ ಪಡೆದಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಜಾಗರೂಕತೆ ಚಾಲನೆಯಿಂದ ಖಾಸಗಿ ಬಸ್ ಅಪಘಾತ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ 

ದೇವನಹಳ್ಳಿ: ಅತಿ ವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ಖಾಸಗಿ ಬಸ್​​ ಅಪಘಾತಕ್ಕೀಡಾಗಿದೆ. 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಅನಾಹುತ ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬನಹಳ್ಳಿ ಗೇಟ್​​ ಸಮೀಪ ನಡೆದಿದೆ.

ಸ್ಪೀಡ್ ಬ್ರೇಕರ್ ಜಂಪ್ ಮಾಡಿದ ಪರಿಣಾಮ ಖಾಸಗಿ ಬಸ್​​ ಪಲ್ಟಿಯಾಗಿದೆ. ಗಾಯಾಳುಗಳನ್ನು ಹೊಸಕೋಟೆ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ