AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ

ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ. 

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ
ನೆಲಮಂಗಲ ಟೌನ್ ಠಾಣೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 08, 2024 | 4:43 PM

Share

ನೆಲಮಂಗಲ, ಜನವರಿ 08: ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ (Fraud) ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ಅಡವಿಟ್ಟ ಕಾರು ಬಿಡಿಸಿಕೊಳ್ಳಲು ರಾಜು ಬಳಿಯಿಂದ ಹಣ ಪಡೆದಿದ್ದ.

ಕಾರ್ತಿಕ್ ಮಾತು ನಂಬಿ ರಾಜು ಬ್ಯಾಂಕ್‌ನಲ್ಲೇ ಹಣ ಕೊಟ್ಟಿದ್ದ. ಸಾಕ್ಷಿಗಾಗಿ ಬ್ಯಾಂಕಿನಲ್ಲಿ ಹಣ ಎಣಿಸುವ ದೃಶ್ಯ ಸೆರೆ ಹಿಡಿಯಲಾಗಿದೆ. ಇದೀಗ ಕಾನ್ಸ್‌ಟೇಬಲ್ ಕಾರ್ತಿಕ್ ಹಣ ವಾಪಸ್ ಕೇಳಿದರೆ ಸಬೂಬು ಹೇಳುತ್ತಿದ್ದಾರೆ. ಈ ಕುರಿತಾಗಿ ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ.

ಇದನ್ನೂ ಓದಿ: ಕಲಬುರಗಿ ನಗರದಲ್ಲಿದೆ ಖತರ್ನಾಕ್​ ಗ್ಯಾಂಗ್​: ಜಮೀನು ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ ವಂಚನೆ

ಕಾನ್ಸ್‌ಟೇಬಲ್‌ ಕಾರ್ತಿಕ್‌ನಿಂದ ಹಣ ವಾಪಸ್ ಕೊಡಿಸುವುದಾಗಿ ನೆಲಮಂಗಲ ಸಂಚಾರಿ ಠಾಣೆ ಇನ್ಸ್‌ಪೆಕ್ಟರ್ ರವಿ ಭರವಸೆ ನೀಡಿದ್ದಾರೆ. ಈ ಹಿಂದೆಯೂ ಹಲವರ ಬಳಿ ಹಣ ಪಡೆದು ಕಾರ್ತಿಕ್‌ ವಂಚಿಸಿದ್ದ ಎನ್ನಲಾಗಿದೆ.

ಎಲೆಕ್ಟ್ರಿಕ್ ಬೈಕಿಗೆ ಕ್ಯಾಂಟರ್ ಡಿಕ್ಕಿ: ಬೈಕ್ ಸವಾರ ಪಾರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​​ನಲ್ಲಿ ಎಲೆಕ್ಟ್ರಿಕ್ ಬೈಕಿಗೆ ಕ್ಯಾಂಟರ್​ ವಾಹನ ಡಿಕ್ಕಿ ಹೊಡೆದಿದ್ದು, ಪವಾಡ ಸದೃಶ್ಯವಾಗಿ ಬೈಕ್ ಸವಾರ ಪಾರಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿ 4 ಅರಿಶಿನಕುಂಟೆ ಯಲ್ಲಿ ಘಟನೆ ಸಂಭವಿಸಿದೆ. ರವಿಕುಮಾರ್​ ಪಾರಾದ ಬೈಕ್ ಸವಾರ. ಕ್ಯಾಂಟರ್ ಸಮೇತವಾಗಿ ಚಾಲಕನನ್ನು ಪೊಲೀಸ್ ವಶಕ್ಕೆ ಪಡೆದಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಜಾಗರೂಕತೆ ಚಾಲನೆಯಿಂದ ಖಾಸಗಿ ಬಸ್ ಅಪಘಾತ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ 

ದೇವನಹಳ್ಳಿ: ಅತಿ ವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ಖಾಸಗಿ ಬಸ್​​ ಅಪಘಾತಕ್ಕೀಡಾಗಿದೆ. 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಅನಾಹುತ ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬನಹಳ್ಳಿ ಗೇಟ್​​ ಸಮೀಪ ನಡೆದಿದೆ.

ಸ್ಪೀಡ್ ಬ್ರೇಕರ್ ಜಂಪ್ ಮಾಡಿದ ಪರಿಣಾಮ ಖಾಸಗಿ ಬಸ್​​ ಪಲ್ಟಿಯಾಗಿದೆ. ಗಾಯಾಳುಗಳನ್ನು ಹೊಸಕೋಟೆ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?