ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷ-ಲಕ್ಷ ಹಣ ಪಡೆದು ಕಾಂಗ್ರೆಸ್​ ಯುವ ನಾಯಕಿಯಿಂದ ವಂಚನೆ ಆರೋಪ

ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಬೆಂಗಳೂರಿನ ಮಹಿಳೆ ಮತ್ತು ಯಾದಗಿರಿಯ ಯುವನಿಕನಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಕಾಂಗ್ರೆಸ್​ ಯುವ ನಾಯಕಿ ಸಂದ್ಯಾ ಪವಿತ್ರ ನಾಗರಾಜ್​ ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷ-ಲಕ್ಷ ಹಣ ಪಡೆದು ಕಾಂಗ್ರೆಸ್​ ಯುವ ನಾಯಕಿಯಿಂದ ವಂಚನೆ ಆರೋಪ
ಕಾಂಗ್ರೆಸ್​ ಯುವ ನಾಯಕಿ ಸಂದ್ಯಾ ಪವಿತ್ರಾ ನಾಗರಾಜ್​
Follow us
| Updated By: Digi Tech Desk

Updated on:Jan 29, 2024 | 3:21 PM

ಬೆಂಗಳೂರು, ಜನವರಿ 29: ಯುವ ಕಾಂಗ್ರೆಸ್ (Congress) ನಾಯಕಿ ವಿರುದ್ಧ ಆರೋಪವೊಂದು ಕೇಳಿಬಂದಿದೆ. ಯುವ ಕಾಂಗ್ರೆಸ್ ನಾಯಕಿ ಸಂದ್ಯಾ ಪವಿತ್ರಾ ನಾಗರಾಜ್ ಎಂಬುವರು ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷ-ಲಕ್ಷ ಹಣ ಪಡೆದು ವಂಚಿಸಿದ್ದಾರೆ ಎಂದು ಜಯನಗರ ಪೊಲೀಸ್​ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಮಾರುತಿ ನಗರದಲ್ಲಿ ವಾಸವಾಗಿರುವ ವೀಣಾ ಎಂಬುವರಿಗೆ ಸಂದ್ಯಾ ಪವಿತ್ರಾ ನಾಗರಾಜ್​​ ಅವರು ಫೇಸ್​ ಬುಕ್​ ಮೂಲಕ ಪರಿಚಯವಾಗಿದ್ದಾರೆ. ವೀಣಾ ಅವರು ಸರ್ಕಾರಿ ಕೆಲಸ ಹುಡುಕುತ್ತಿರುವ ವಿಚಾರ ಸಂದ್ಯಾ ಅವರಿಗೆ ತಿಳಿದಿದೆ. ನಂತರ ಸಂದ್ಯಾ ಎಮ್​ಎಸ್​ ಬಿಲ್ಡಿಂಗ್​​ನಲ್ಲಿ ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ವೀಣಾ ಅವರಿಂದ 20 ಲಕ್ಷ ರೂ. ಹಣ ಪಡೆದಿದ್ದಾರೆ. ಆದರೆ ಇದೀಗ ಸಂದ್ಯಾ ಸರ್ಕಾರಿ ಕೆಲಸ ಕೊಡಿಸದೆ ಮತ್ತು ಹಣವನ್ನು ವಾಪಸ್​ ನೀಡದೆ ವಂಚಿಸಿದ್ದಾರೆ ಎಂದು ವೀಣಾ ದೂರಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ 2021ರಲ್ಲಿ ರಂಗಸ್ವಾಮಿ ಎಂಬುವವರು ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದು ಆ ಸಮಯದಲ್ಲಿ ಭಾನುಪ್ರಕಾಶ ಎಂಬುವವರು ಪರಿಚಯವಾಗಿದ್ದಾರೆ. ಅವರು ರಂಗಸ್ವಾಮಿಗೆ ಸರಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹರೀಶ ಎಂಬುವವರನ್ನು ಪರಿಚಯ ಮಾಡಿಸಿಕೊಟ್ಟಿದ್ದಾರೆ. ಹರೀಶ್​ ರಂಗಸ್ವಾಮಿ ಅವರಿಂದ 3.50 ಲಕ್ಷ ಹಣವನ್ನು ಪಡೆದುಕೊಂಡು ಮತ್ತು ರಂಗಸ್ವಾಮಿ ಅವರ ಸಹೋದರಿ ರೂಪಾ. ಚಂದ್ರಶೇಖರ್ ಎಂಬುವುರಿಂದಲೂ 3.50 ಲಕ್ಷ ಹಣವನ್ನು ತೆಗೆದುಕೊಂಡಿದ್ದಾನೆ.

ಆದರೆ ಹರೀಶ್​ ಕೆಲಸ ಕೊಡಿಸಲಿಲ್ಲ. ಈ ಹಿನ್ನೆಲೆಯಲ್ಲಿ ರಂಗಸ್ವಾಮಿ ಅವರು ಹರೀಶ್​ಗೆ ಕರೆ ಮಾಡಿ ವಿಚಾರಿಸಿದಾಗ, ಹರೀಶ್​ “ನೀವು ನೀಡಿರುವ ಹಣವನ್ನು ನಾನು (ಹರೀಶ್​) ಸಂದ್ಯಾ ಪವಿತ್ರ ನಾಗರಾಜ್ ರವರಿಗೆ ನೀಡಿದ್ದೇನೆ” ಎಂದು ಹೇಳಿದ್ದಾರೆ. ಬಳಿಕ ಹರೀಶ್​ ರಂಗಸ್ವಾಮಿಯವರನ್ನು ಕರೆದುಕೊಂಡು ಹೋಗಿ ಸಂದ್ಯಾ ಪವಿತ್ರ ನಾಗರಾಜ್ ಅವರ ಪರಿಚಯ ಮಾಡಿಸಿದ್ದಾರೆ. ನಂತರ ಸಂದ್ಯಾ ನಾಗರಾಜ್ ಅವರು ನಿಮಗೆ ಹಣ ವಾಪಸ್ ಕೊಡುವುದಿಲ್ಲ.

ಇದನ್ನೂ ಓದಿ: ಸರ್ಕಾರಿ ವೆಬ್ ಸೈಟ್ ನಿಂದಲೇ ದಾಖಲೆ ಪಡೆದು ವಂಚನೆ; AEPS ಮೂಲಕ ವಂಚನೆ ಮಾಡ್ತಿದ್ದವರು ಅರೆಸ್ಟ್

ಇನ್ನೂ 7,70,000 ರೂ. ಹಣವನ್ನು ನೀಡಿದರೆ ನಿಮಗೂ (ರೂಪಾ. ಚಂದ್ರಶೇಖರ್) ಮತ್ತು ತಮ್ಮ ರಂಗಸ್ವಾಮಿಗೂ ಕೆಲಸ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಬಳಿಕ ರೂಪಾ ಮತ್ತು ರಂಗಸ್ವಾಮಿ ಹಂತ ಹಂತವಾಗಿ ಸುಮಾರು 7,70,000 ರೂ. ಹಣವನ್ನು ಸಂದ್ಯಾ ಪವಿತ್ರಾ ನಾಗರಾಜ್​ಗೆ ನೀಡಿದ್ದಾರೆ. ಬಳಿಕ ರಂಗಸ್ವಾಮಿ ಮತ್ತು ಪವಿತ್ರ ನಾಗರಾಜ್​ ಅವರು ಕೆಲಸದ ಬಗ್ಗೆ ಮತ್ತು ಹಣದ ಬಗ್ಗೆ ಸಂದ್ಯಾ ಅವರಿಗೆ ವಿಚಾರಿಸಿದ್ದಾರೆ. ಆಗ ಸಂದ್ಯಾ ಇಲ್ಲ, ಸಲದ ಸಬೂಬು ಹೇಳುತ್ತಾ ದಿನಗಳನ್ನು ಮುಂದೆ ಹಾಕಿದ್ದಾರೆ. ಪೋನ್ ಸ್ವಿಚ್ ಆಫ್ ಮಾಡಿದ್ದಾರೆ. ಅಲ್ಲದೇ ಕೊಟ್ಟಿರುವ ಹಣವನ್ನು ವಾಪಸ್ ಕೇಳಿದರೆ ನಿಮ್ಮ ಮೇಲೆ ಕೇಸ್ ಹಾಕುತ್ತೇನೆಂದು ಸಂದ್ಯಾ ರಂಗಸ್ವಾಮಿ ಮತ್ತು ರೂಪಾ. ಚಂದ್ರಶೇಖರ್​ಗೆ ಬೆದರಿಕೆ ಹಾಕಿದ್ದಾರೆ.

ಸಂದ್ಯಾ ಪವಿತ್ರ ನಾಗರಾಜ್​ ಸುಮಾರು 11,20,000 ರೂ. ಪಡೆದುಕೊಂಡು ಸರಕಾರಿ ಕೆಲಸವನ್ನು ಕೊಡಿಸದೆ ಹಣವನ್ನು ವಾಪಸ್ ನೀಡದೆ ನಂಬಿಸಿ ಮೋಸ ಮಾಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುಪ್ರಕಾಶ, ಹರೀಶ್ ಮತ್ತು ಸಂದ್ಯಾ ಪವಿತ್ರ ನಾಗರಾಜ್ ವಿರುದ್ಧ ರೂಪಾ. ಚಂದ್ರಶೇಖರ್​ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:11 pm, Mon, 29 January 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ