AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್​ ಹೆಸರಿನಲ್ಲಿ ವಂಚನೆ: 15 ದಿನದಲ್ಲಿ ಮೂರು ಕೋಟಿ ಕಳೆದುಕೊಂಡ ಏಳು ಜನರು, ಏನಿದು ಡಿಜಿಟಲ್ ಅರೆಸ್ಟ್?

ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್​ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಪ್ರಕರಣಗಳು ಬೆಳಕಿಗೆ ಬಂದಿವೆ. ಕಳೆದ 15 ದಿನಗಳಲ್ಲಿ ಸೈಬರ್ ಅಪರಾಧಿಗಳು ಏಳು ಮಂದಿಗೆ ಒಟ್ಟು ಮೂರು ಕೋಟಿ ರೂಪಾಯಿ ವಂಚಿಸಿದ್ದು, ಈ ಬಗ್ಗೆ ಆಗ್ನೇಯ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್​ ಹೆಸರಿನಲ್ಲಿ ವಂಚನೆ: 15 ದಿನದಲ್ಲಿ ಮೂರು ಕೋಟಿ ಕಳೆದುಕೊಂಡ ಏಳು ಜನರು, ಏನಿದು ಡಿಜಿಟಲ್ ಅರೆಸ್ಟ್?
ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್​ ಹೆಸರಿನಲ್ಲಿ ಏಳು ಜನರಿಗೆ ಮೂರು ಕೋಟಿ ವಂಚಿಸಿದ ಸೈಬರ್ ಅಪರಾಧಿಗಳು (ಸಾಂದರ್ಭಿಕ ಚಿತ್ರ)Image Credit source: Getty Images
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: Rakesh Nayak Manchi|

Updated on: Dec 15, 2023 | 9:47 AM

Share

ಬೆಂಗಳೂರು, ಡಿ.15: ನಗರದಲ್ಲಿ (Bengaluru) ಸೈಬರ್ ಕ್ರೈಂಗಳು (Cyber Crime) ಹೆಚ್ಚಾಗುತ್ತಿದ್ದು, ಇದನ್ನು ನಿಗ್ರಹಿಸಲು ಪೊಲೀಸರು ಶ್ರಮವಹಿಸುತ್ತಿದ್ದಾರೆ. ಈ ನಡುವೆ, ಡಿಜಿಟಲ್ ಅರೆಸ್ಟ್ (Digital Arrest)​ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಪ್ರಕರಣಗಳು ಬೆಳಕಿಗೆ ಬಂದಿದ್ದು, 15 ದಿನಗಳ ಅಂತರದಲ್ಲಿ 7 ಜನರಿಗೆ 3 ಕೋಟಿ ವಂಚಿಸಲಾಗಿದೆ. ಈ ಬಗ್ಗೆ ಆಗ್ನೇಯ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಸೈಬರ್ ಅಪರಾಧಿಗಳು ಪೊಲೀಸರು ಅಥವಾ ತನಿಖಾಸಂಸ್ಥೆ ಹೆಸರು ಹೇಳಿಕೊಂಡು ಜನರಿಗೆ ಕರೆ ಮಾಡಿ ವಂಚಿಸುತ್ತಿದ್ದಾರೆ. ನಿಮ್ಮ ಮನೆಗೆ ಪಾರ್ಸಲ್​ ಬಂದಿದೆ ಎಂದು ಹೇಳುವ ಸೈಬರ್​ ವಂಚಕರು, ಪೆಡೆಕ್ಸ್ ಅಥವಾ ಬೇರೆ ಕಂಪನಿ ಕೊರಿಯರ್​​ನಲ್ಲಿ ಪಾರ್ಸಲ್ ಬಂದಿದೆ. ನಿಮ್ಮ ದಾಖಲಾತಿಗಳು ಡ್ರಗ್ಸ್ ವ್ಯವಹಾರದಲ್ಲಿ ತೊಡಗಿದೆ ಎಂದು ಹೇಳಿ ಭಯ ಹುಟ್ಟಿಸುತ್ತಾರೆ.

ಇದನ್ನೂ ಓದಿ: 11 ತಿಂಗಳಲ್ಲಿ 16 ಸಾವಿರ ಸೈಬರ್ ಪ್ರಕರಣಗಳು ದಾಖಲು! ಈ ವರ್ಷ ದೇಶದಲ್ಲೇ ಬೆಂಗಳೂರಿಗೆ ಅಗ್ರಸ್ಥಾನ ಸಾಧ್ಯತೆ

ಬಳಿಕ ಸ್ಕೈಪ್ ಲಿಂಕ್ ನೀಡಿ ಲಾಗ್​ಇನ್​ ಆಗುವಂತೆ ತಿಳಿಸುವ ವಂಚಕರು, ಬಳಿಕ ಪೊಲೀಸ್ ಸಮವಸ್ತ್ರದಲ್ಲೇ ಸಂಭಾಷಣೆ ನಡೆಸುತ್ತಾರೆ. ನೀವು ವಿಚಾರಣೆಗೆ ಹಾಜರಾಗಬೇಕೆಂದು ಬೆದರಿಕೆ ಹಾಕುತ್ತಾರೆ. ವಿಚಾರಣೆಗೆ ವಿನಾಯಿತಿ ಬೇಕಾದರೆ ಹಣ ಹಾಕಿ, ಇಲ್ಲದಿದ್ದರೆ ಬಂಧಿಸುತ್ತೇವೆ ಎಂದು ಬೇಡಿಕೆ ಇಡುತ್ತಾರೆ.

ಬಳಿಕ ಗಂಟೆಗಳ ಕಾಲ ಸ್ಕೈಪ್ ಬಿಟ್ಟು ಬೇರೆ ಕಡೆ ಹೋಗಲು ಬಿಡುವುದಿಲ್ಲ. ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿದೆ ಇಲ್ಲೇ ಇರಬೇಕೆಂದು ಬೆದರಿಕೆ ಹಾಕಲಾಗುತ್ತದೆ. ಇದೇ ರೀತಿ ಹೆಚ್​ಎಸ್​ಆರ್ ಲೇಔಟ್ ಮೂಲದ ವೃದ್ಧ ದಂಪತಿಗೆ 1 ಕೋಟಿ 97 ಲಕ್ಷ ರೂಪಾಯಿ ವಂಚನೆ ಎಸಗಿದ್ದಾರೆ. ಇದೇ ರೀತಿ 15 ದಿನಗಳ ಅಂತರದಲ್ಲಿ ಏಳು ಮಂದಿಗೆ 3 ಕೋಟಿ ವಂಚಿಸಲಾಗಿದೆ.

ಇದನ್ನೂ ಓದಿ: ಲೋಕಾ ಬಲೆಯಲ್ಲಿರುವ ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಮತ್ತೊಂದು ಆರೋಪ: ಶಿಕ್ಷಕರಿಗೆ 70 ಕೋಟಿ ರೂ. ವಂಚನೆ

ಆದರೆ, ಸೈಬರ್ ಖದೀಮರ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿಲ್ಲ. ರಸ್ತೆಯಲ್ಲಿ, ಮನೆಗಳಿಗೆ ನುಗ್ಗಿ ಹಲ್ಲೆ ಮಾಡಿ ದೋಚುವ ಹಣಕ್ಕಿಂತ ಹತ್ತು ಪಟ್ಟು ಹೆಚ್ಚು ಹಣವನ್ನು ಸೈಬರ್ ಕಳ್ಳರು ಕೊಳ್ಳೆ ಹೊಡೆಯುತ್ತಿದ್ದಾರೆ. ಸದ್ಯ, ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು