AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಅನುಮೋದಿಸಿದ ಸಂಸ್ಥೆ ಎಂದು ನಂಬಿಸಿ ಬೆಂಗಳೂರಿನ ಉದ್ಯಮಿಗೆ ಆರು ಲಕ್ಷ ವಂಚನೆ

ಪ್ರಧಾನಿ ನರೇಂದ್ರ ಮೋದಿ ಅವರು ಅನುಮೋದಿಸಿರುವ ಸಂಸ್ಥೆ ನಮ್ಮದು ಎಂದು ನಂಬಿಸಿ ವ್ಯಕ್ತಿಯೊಬ್ಬ ಬೆಂಗಳೂರಿನ ಉದ್ಯಮಿಗೆ ಆರು ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಜನವರಿ 27 ರಂದು ವಂಚನೆಗೊಳಗಾದ ಜಿ ಹರೀಶ್ ಕಶ್ಯಪ್ ಅವರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಪ್ರಧಾನಿ ಮೋದಿ ಅನುಮೋದಿಸಿದ ಸಂಸ್ಥೆ ಎಂದು ನಂಬಿಸಿ ಬೆಂಗಳೂರಿನ ಉದ್ಯಮಿಗೆ ಆರು ಲಕ್ಷ ವಂಚನೆ
ಪ್ರಧಾನಿ ಮೋದಿ ಅನುಮೋದಿಸಿದ ಸಂಸ್ಥೆ ಎಂದು ನಂಬಿಸಿ ಬೆಂಗಳೂರಿನ ಉದ್ಯಮಿಗೆ ಆರು ಲಕ್ಷ ವಂಚಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on: Jan 30, 2024 | 6:49 AM

Share

ಬೆಂಗಳೂರು, ಜ.30: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅನುಮೋದಿಸಿರುವ ಸಂಸ್ಥೆಯನ್ನು ಪ್ರತಿನಿಧಿಸುತ್ತಿರುವುದಾಗಿ ಹೇಳಿ ವ್ಯಕ್ತಿಯೊಬ್ಬ ಬೆಂಗಳೂರಿನ (Bengaluru) ಉದ್ಯಮಿಯೊಬ್ಬರಿಗೆ 6.28 ಲಕ್ಷ ರೂಪಾಯಿ ವಂಚಿಸಿದ್ದಾರೆ. ಜನವರಿ 27 ರಂದು ವಂಚನೆ ಪ್ರಕರಣ ದಾಖಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಸಂತ್ರಸ್ತರನ್ನು ಚಿಕ್ಕಲಸಂದ್ರ ನಿವಾಸಿ ಜಿ ಹರೀಶ್ ಕಶ್ಯಪ್ (44) ಎಂದು ಗುರುತಿಸಲಾಗಿದೆ. ದತ್ತ ಪ್ರಸಾದ್ ಎಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬ 2023ರ ಅಕ್ಟೋಬರ್ 25 ರಂದು ಪದ್ಮನಾಭ ನಗರದ ಗೋಕುಲ್ ವೆಜ್ ಹೋಟೆಲ್‌ಗೆ ಕಶ್ಯಪ್ ಮತ್ತು ಇತರ ಹಲವರನ್ನು ಆಹ್ವಾನಿಸಿದ್ದಾನೆ.

ಹೊಸ ಇಂಧನ ಯೋಜನೆಗಳಲ್ಲಿ ಹೂಡಿಕೆ ಮಾಡುವ ಸೆನೀ ಟ್ರೇಡರ್ಸ್ ಎಂಬ ಅಂತಾರಾಷ್ಟ್ರೀಯ ಸಂಸ್ಥೆಯನ್ನು ತಾನು ನಡೆಸುತ್ತಿದ್ದೇನೆ ಎಂದು ಪ್ರಸಾದ್ ಹೇಳಿಕೊಂಡಿದ್ದಾನೆ. ನಂತರ ಯೋಜನೆಗಳಲ್ಲಿ ಹೂಡಿಕೆ ಮಾಡುವಂತೆ ಜನರಿಗೆ ಮನವಿ ಮಾಡಿದ್ದಾನೆ.

ಇದನ್ನೂ ಓದಿ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷ-ಲಕ್ಷ ಹಣ ಪಡೆದು ಕಾಂಗ್ರೆಸ್​ ಯುವ ನಾಯಕಿಯಿಂದ ವಂಚನೆ ಆರೋಪ

ನಂತರ ಕಶ್ಯಪ್ ಸೇರಿದಂತೆ ಹಲವರು ಪ್ರಸಾದ್ ಸೂಚಿಸಿದ ಖಾತೆಗಳಿಗೆ ಆನ್‌ಲೈನ್‌ ಮುಖಾಂತರ ಹಣ ವರ್ಗಾವಣೆ ಮಾಡಿದ್ದಾರೆ. ಕೆಲವು ದಿನಗಳ ನಂತರ, ಹೂಡಿಕೆಗಳು ಹೆಚ್ಚಿನ ಆದಾಯವನ್ನು ತಂದುಕೊಟ್ಟವು. ಆದರೆ ಮೊತ್ತವನ್ನು ಹಿಂದಿರುಗಿಸದೆ ಪ್ರಸಾದ್ ನಾಪತ್ತೆಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಗಿ ಸುದ್ದಿಸಂಸ್ಥೆ ದಿ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಕಶ್ಯಪ್ ನೀಡಿದ ದೂರಿನ ಮೇರೆಗೆ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66ಡಿ (ಕಂಪ್ಯೂಟರ್ ಸಂಪನ್ಮೂಲವನ್ನು ಬಳಸಿಕೊಂಡು ವ್ಯಕ್ತಿಗತವಾಗಿ ವಂಚನೆ) ಮತ್ತು 66ಸಿ (ಗುರುತಿನ ಕಳ್ಳತನ) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಯನ್ನು ಪ್ರೇರೇಪಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ