AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ 2 ರೂ ನಾಣ್ಯ ಕೊಟ್ಟರೆ 31 ಲಕ್ಷ ರೂ ಕೊಡುವುದಾಗಿ ವೃದ್ಧನಿಗೆ ಟೋಪಿ ಹಾಕಿದ ವಂಚಕ

ಸ್ವಲ್ಪ ಸಮಯದ ನಂತರ, ಸೈಬರ್ ಅಪರಾಧಿಗಳು ವಿವಿಧ ಹೆಸರುಗಳು, ತೆರಿಗೆ ನಿಯಮಗಳನ್ನು ಉಲ್ಲೇಖಿಸುತ್ತಾ ವೃದ್ಧನ ಖಾತೆಯಿಂದ 2.3 ಲಕ್ಷ ರೂ. ಎಗರಿಸಿದ್ದಾರೆ. ಆದರೆ ಅಪರಾಧಿಗಳು ಇನ್ನೂ ಹೆಚ್ಚಿನ ಹಣ ಬೇಕಾದೀತು ಎಂದು ಕೇಳಿದಾಗ ವೃದ್ಧನಿಗೆ ಅನುಮಾನ ಬಂದಿದೆ. ವಂಚಕರು ಕೇಳಿದಷ್ಟು ಹಣ ಕಳುಹಿಸಲು ಆಗುವುದಿಲ್ಲ ಎಂದು ವೃದ್ದ ಹೇಳಿದ್ದಾರೆ.

ಹಳೇ 2 ರೂ ನಾಣ್ಯ ಕೊಟ್ಟರೆ 31 ಲಕ್ಷ ರೂ ಕೊಡುವುದಾಗಿ ವೃದ್ಧನಿಗೆ ಟೋಪಿ ಹಾಕಿದ ವಂಚಕ
2 ರೂ ನಾಣ್ಯ ಕೊಟ್ಟರೆ 31 ಲಕ್ಷ ರೂ ಕೊಡುವುದಾಗಿ ವೃದ್ಧನಿಗೆ ಟೋಪಿ ಹಾಕಿದ ವಂಚಕ
TV9 Web
| Edited By: |

Updated on:Jan 18, 2024 | 10:12 AM

Share

ನಿಮ್ಮ ಬಳಿ ಹಳೆಯ 2 ರೂ ನಾಣ್ಯಗಳು ಅಥವಾ 5 ರೂ. ನಾಣ್ಯಗಳಿದ್ದರೆ, ಅದಕ್ಕೆ ಬದಲಾಗಿ ಲಕ್ಷ ಲಕ್ಷ ರೂಪಾಯಿಗಳನ್ನು ನೀಡುವದಾಗಿ ಆಮಿಷವೊಡ್ಡಿ ಸೈಬರ್ ಅಪರಾಧಿಗಳು ನಕಲಿ ವೀಡಿಯೊ ಸೃಷ್ಟಿಸಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ವೀಡಿಯೋ ವೀಕ್ಷಿಸಿದ ವೃದ್ಧರೊಬ್ಬರು ದುರಾಸೆಗೆ ಬಲಿಯಾಗಿ ತನ್ನ ಬಳಿಯಿದ್ದದ್ದನ್ನೆಲ್ಲ ಕಳೆದುಕೊಂಡಿದ್ದಾರೆ. ಕೊನೆಗೆ ಸೈಬರ್ ಅಪರಾಧಿಗಳಿಂದ ವಂಚನೆಗೊಳಗಾಗಿ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಬೆಂಗಳೂರಿನ ಹಲಸೂರಿನಲ್ಲಿ ಈ ಘಟನೆ ನಡೆದಿದೆ.

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ನೋಡಿದ ವೃದ್ಧ ವಿಡಿಯೋದಲ್ಲಿರುವ ಫೋನ್ ನಂಬರ್ ಗೆ ಕರೆ ಮಾಡಿದ್ದಾನೆ. ತನ್ನ ಬಳಿ 2 ರೂಪಾಯಿ, 5 ರೂಪಾಯಿ ಇದೆ ಎಂದು ತಿಳಿಸಿದ್ದಾನೆ. ವೃದ್ಧನಿಂದ ಕರೆ ಸ್ವೀಕರಿಸಿದ ನಂತರ, ಸೈಬರ್ ಅಪರಾಧಿಗಳು ಇದು ಅಸಲಿ ವ್ಯವಹಾರವೆಂದು ನಂಬಿಸಿದ್ದಾರೆ. ವಿಡಿಯೋ ಕಾಲ್ ಮಾಡಿ ಕೆಲವು ಹಳೆಯ ನಾಣ್ಯಗಳನ್ನು ಎಣಿಸುವ ದೃಶ್ಯಗಳನ್ನು ತೋರಿಸಿದ್ದಾರೆ. ಇದೆ ಮಾದರಿ ನಾಣ್ಯಗಳ ಫೋಟೋ ತೆಗೆದು ಕಳುಹಿಸುವಂತೆ ವೃದ್ಧನಿಗೆ ಸೂಚಿಸಿದ್ದಾರೆ. ಅದರಂತೆ 2 ಮತ್ತು 5 ರೂ ನಾಣ್ಯಗಳು ಮತ್ತು 1 ರೂ ನಾಣ್ಯಗಳ ಫೋಟೋ ತೆಗೆದು ಕಳುಹಿಸಿದ್ದಾರೆ. ಈ ಹಳೆಯ ನಾಣ್ಯಗಳು 1980-1990ರ ಅವಧಿಯಲ್ಲಿ ಚಲಾವಣೆಯಲ್ಲಿದ್ದವು. ಈ ಹಳೆಯ ನಾಣ್ಯಗಳ ಮೇಲೆ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಆಕೃತಿಯ ಜೊತೆಗೆ ಭಾರತದ ನಕ್ಷೆಯೂ ಇತ್ತು. ಅದನ್ನು ಪರಿವೀಕ್ಷಿಸುವಂತೆ ಮಾಡಿದ ವಂಚಕರು ಆ ಹಳೆಯ ನಾಣ್ಯಗಳು 31 ಲಕ್ಷ ರೂ. ಬಾಳುತ್ತದೆ ಎಂದಿದ್ದಾರೆ.

ಸ್ವಲ್ಪ ಸಮಯದ ನಂತರ, ಸೈಬರ್ ಅಪರಾಧಿಗಳು ವಿವಿಧ ಹೆಸರುಗಳು, ತೆರಿಗೆ ನಿಯಮಗಳನ್ನು ಉಲ್ಲೇಖಿಸುತ್ತಾ ವೃದ್ಧನ ಖಾತೆಯಿಂದ 2.3 ಲಕ್ಷ ರೂ. ಎಗರಿಸಿದ್ದಾರೆ. ಆದರೆ ಅಪರಾಧಿಗಳು ಇನ್ನೂ ಹೆಚ್ಚಿನ ಹಣ ಬೇಕಾದೀತು ಎಂದು ಕೇಳಿದಾಗ ವೃದ್ಧನಿಗೆ ಅನುಮಾನ ಬಂದಿದೆ. ವಂಚಕರು ಕೇಳಿದಷ್ಟು ಹಣ ಕಳುಹಿಸಲು ಆಗುವುದಿಲ್ಲ ಎಂದು ವೃದ್ದ ಹೇಳಿದ್ದಾರೆ. ಸಂತ್ರಸ್ತೆಯಿಂದ ಹಣ ಪಡೆದ ನಂತರ ಆರೋಪಿಗಳು ಅಲರ್ಟ್ ಆಗಿದ್ದಾರೆ.

ಇದನ್ನೂ ಓದಿ: ಭಟ್ಕಳದಲ್ಲಿ ಮುಂದುವರಿದ ಹಿಂದೂ ಮುಸ್ಲಿಂ ಸಂಘರ್ಷ: ಹಿಂದೂ ಕಾರ್ಯಕರ್ತರಿಗೆ ದುಬೈನಿಂದ ಬೆದರಿಕೆ

ಆದರೂ ಅಷ್ಟಕ್ಕೆ ನಿಲ್ಲದೆ ಮುಂಬೈ ಪೊಲೀಸರ ಹೆಸರಿನಲ್ಲಿ ನಕಲಿ ಕರೆ ಮಾಡಿದ್ದಾರೆ. ತಾವು ಮುಂಬೈ ಪೊಲೀಸ್ ಅಧಿಕಾರಿಗಳು, ನಿಮ್ಮ ಮೇಲೆ ಮನಿ ಲಾಂಡ್ರಿಂಗ್​ ಕೇಸ್​ ಇದೆ ಎಂದು ಸಂತ್ರಸ್ತ ವೃದ್ಧನಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ನಿಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ನಕಲಿ ವಿಡಿಯೋ ಕರೆಯನ್ನೂ ಮಾಡಿ, ಹೆದರಿಸಿದ್ದಾರೆ. ಆಗ ವೃದ್ಧ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿದ್ದಾರೆ. ತಾನು ಯಾವುದೇ ತಪ್ಪು ಮಾಡಿಲ್ಲ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ನೋಡಿ ಹಣ ಕಳೆದುಕೊಂಡಿದ್ದು, ನೆರವು ನೀಡಿ ಎಂದು ಹಲಸೂರು ಪೊಲೀಸರ ಮೊರೆ ಹೋಗಿದ್ದಾರೆ.

ಸಂತ್ರಸ್ತ ವ್ಯಕ್ತಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪರಾಧಿಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ. ಆದರೆ ಮರುದಿನವೂ ಮತ್ತೆ ಸಂತ್ರಸ್ತ ವೃದ್ಧನಿಗೆ ಕರೆ ಮಾಡಿದ ಸೈಬರ್ ಕ್ರಿಮಿನಲ್‌ಗಳು ತಾವು ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಎಂದು ಹೇಳುತ್ತಾ, ಸ್ಥಳೀಯ ಪೊಲೀಸರಿಗೆ ಹೆದರುವುದಿಲ್ಲ. ಜನವರಿ 20ರೊಳಗೆ ನಿಮ್ಮನ್ನು (ವೃದ್ಧ) ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಆಗ ಪೊಲೀಸರು ಐಪಿಸಿ 420 ಅಡಿ ನತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:10 am, Thu, 18 January 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ