AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಫ್ಎಸ್ಎಲ್ ವರದಿ ವಿಳಂಬವಾದ ಮಾತ್ರಕ್ಕೆ ಕಡ್ಡಾಯ ಜಾಮೀನಿಲ್ಲ; ಮಾದಕದ್ರವ್ಯ ಪ್ರಕರಣದಲ್ಲಿ ಹೈಕೋರ್ಟ್ ಆದೇಶ

ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಹೊಡೆದ ಪರಿಣಾಮ ಮದುಮಗ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಬಳಿ ಘಟನೆ ಸಂಭವಿಸಿದೆ.

ಎಫ್ಎಸ್ಎಲ್ ವರದಿ ವಿಳಂಬವಾದ ಮಾತ್ರಕ್ಕೆ ಕಡ್ಡಾಯ ಜಾಮೀನಿಲ್ಲ; ಮಾದಕದ್ರವ್ಯ ಪ್ರಕರಣದಲ್ಲಿ ಹೈಕೋರ್ಟ್ ಆದೇಶ
ಹೈಕೋರ್ಟ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 07, 2022 | 7:55 PM

Share

ಬೆಂಗಳೂರು: ಎಫ್ಎಸ್ಎಲ್ (FSL) ವರದಿ ವಿಳಂಬವಾದ ಮಾತ್ರಕ್ಕೆ ಕಡ್ಡಾಯ ಜಾಮೀನಿಲ್ಲ ಎಂದು ಮಾದಕದ್ರವ್ಯ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ನೀಡಿದೆ. ಆರೋಪಪಟ್ಟಿ ದಾಖಲಿಸುವಾಗ ಎಫ್ಎಸ್ಎಲ್ ವರದಿ ಸಲ್ಲಿಸಿರಲಿಲ್ಲ. ಹೀಗಾಗಿ ಸಿಆರ್​​ಪಿಸಿ ಸೆ.167(2) ಅಡಿ ಕಡ್ಡಾಯ ಜಾಮೀನು ಕೋರಿದ್ದ ಆರೋಪಿ ಸೈಯದ್ ಮೊಹಮ್ಮದ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ಎಫ್ಎಸ್ಎಲ್ ವರದಿ ವಿಳಂಬವಾದ ಮಾತ್ರಕ್ಕೆ ಆರೋಪಪಟ್ಟಿ ಅಪೂರ್ಣವಲ್ಲ. ನಂತರ ಹೆಚ್ಚುವರಿ ಚಾರ್ಜ್ ಷೀಟ್ ನಂತೆ ಎಫ್ಎಸ್ಎಲ್ ವರದಿ ಸಲ್ಲಿಸಬಹುದು ಎಂದು ನ್ಯಾ.ಎಂ. ನಾಗಪ್ರಸನ್ನರವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಮಾಡಿದೆ.

ಬೈಕ್ ಮತ್ತು ಕಾರು ನಡುವೆ ಅಪಘಾತ; ಸ್ಥಳದಲ್ಲೇ ಮದುಮಗ ಸೇರಿ ಇಬ್ಬರು ಸಾವು:

ಕಲಬುರಗಿ: ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಹೊಡೆದ ಪರಿಣಾಮ ಮದುಮಗ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಬಳಿ ಘಟನೆ ಸಂಭವಿಸಿದೆ. ಯಡ್ರಾಮಿ ತಾಲೂಕಿನ ಕೋಣಶಿರಸಗಿ ಗ್ರಾಮದ ದೇವೇಂದ್ರಪ್ಪ (30) ವಸ್ತಾರಿ ಗ್ರಾಮದ ಗುರುರಾಜ (30) ಮೃತರು. ಎಪ್ರಿಲ್ 17 ರಂದು ದೇವೇಂದ್ರಪ್ಪ ಅವರ ಮದುವೆ ನಿಶ್ಚಯವಾಗಿತ್ತು. ಸಂಬಂಧಿಕರಿಗೆ ಮದುವೆ ಆಹ್ವಾನ ಪತ್ರ ನೀಡಲು ಜೇರಟಗಿಯತ್ತ ತೆರಳುತ್ತಿದ್ದರು. ಓವರಟೇಕ್ ಮಾಡಿಕೊಂಡ ಬಂದ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಿಡಿಲು ಬಡಿದು ಹದಿನೈದು ವರ್ಷದ ಬಾಲಕ ಸಾವು:

ಹಾವೇರಿ: ಸಿಡಿಲು ಬಡಿದು ಹದಿನೈದು ವರ್ಷದ ಬಾಲಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಕಟ್ಟಿ ಗ್ರಾಮದ ಬಳಿ ಘಟನೆ ನಡೆದಿದೆ. ಮಹಾಂತೇಶ ಜಟ್ಟೆಪ್ಪನವರ 15 ವರ್ಷ ಮೃತ ಬಾಲಕ. ಮೃತ ಮಹಾಂತೇಶ, ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಚಂದಾಪುರ ಗ್ರಾಮದ ನಿವಾಸಿಯಾಗಿದ್ದಾನೆ. ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ. ಭಾರಿ ಗಾಳಿ ಮತ್ತು ಸಿಡಿಲಿನೊಂದಿಗೆ ಮಳೆಯಾಗುತ್ತಿದ್ದ ವೇಳೆ ಸಿಡಿಲಿಗೆ ಬಾಲಕ ಬಲಿಯಾಗಿದ್ದಾನೆ. ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈಜು ಬಾರದೇ ಯುವತಿ ಕೆರೆಯಲ್ಲಿ ಮುಳುಗಿ ಸಾವು:

ಯಾದಗಿರಿ: ಗೆಳತಿಯರೊಂದಿಗೆ ಈಜಲು ಹೋಗಿ ಯುವತಿ ನೀರುಪಾಲಾದಂತಹ ಘಟನೆ ನಡೆದಿದೆ. ಈಜು ಬಾರದೇ ಯುವತಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ತಾಲೂಕಿನ ಮೈಲಾಪುರ ಗ್ರಾಮದ ಕೆರೆಯಲ್ಲಿ ಘಟನೆ ನಡೆದಿದೆ. ವಸಂತ ದಾನಪ್ಪ(24) ನೀರುಪಾಲಾದ ಯುವತಿ. ಸಾವಿಗೀಡಾದ ಯುವತಿ ಕಲಬುರ್ಗಿ ಜಿಲ್ಲೆಯ ಶಹಾಬಾದ್ ನಿವಾಸಿವಳಾಗಿದ್ದಾಳೆ. ವಸಂತ ಕುಟುಂಬಸ್ಥರೆಲ್ಲರೂ ಮೈಲಾಪುರದ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬಂದಿದ್ದರು. ಆಗ 5 ಜನ ಸ್ನೇಹಿತೆಯರೊಂದಿಗೆ ಕೆರೆಯಲ್ಲಿ ಈಜಲು ಹೋದಾಗ ನಡೆದ ಘಟನೆ ಸಂಭವಿಸಿದೆ. ಕೆರೆಯ ಆಳ ಗೊತ್ತಿಲ್ಲದೇ ಈಜಲು ಹೋಗಿದ್ದ ಯುವತಿ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೋಲಿಸರ ದೌಡಾಯಿಸಿ ಯುವತಿ ಶವ ಹೊರತೆಗೆದಿದ್ದಾರೆ. ಯಾದಗಿರಿ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ:

Gold-Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 7ರ ಚಿನ್ನ, ಬೆಳ್ಳಿ ದರ ಇಲ್ಲಿದೆ

Second PU exams time table: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ

Published On - 7:36 pm, Thu, 7 April 22

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ