Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಸಿಗದಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಟಾಕೀಸ್​ಗೆ ಕಲ್ಲು ತೂರಾಟ ಕಿಟಕಿ ಗಾಜು ಪುಡಿ ಪುಡಿ

ಬೆಳಿಗ್ಗೆ 5 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಚಿತ್ರ ಮಂದಿರದ ಬಳಿ ಜನಸಾಗರ ಜಮಾವಣೆಗೊಂಡಿದ್ದು, ಈ ಮಧ್ಯೆ ಟಿಕೆಟ್​​ಗಾಗಿ ಅಭಿಮಾನಿಗಳು ಮುಗಿಬಿದಿದ್ದಾರೆ.

ಟಿಕೆಟ್​ ಸಿಗದಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಟಾಕೀಸ್​ಗೆ ಕಲ್ಲು ತೂರಾಟ ಕಿಟಕಿ ಗಾಜು ಪುಡಿ ಪುಡಿ
ಚಿತ್ರಮಂದಿರ ಮುಂದೆ ಜಮಾಯಿಸಿದ ಅಭಿಮಾನಿಗಳು.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Mar 17, 2022 | 8:57 AM

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಜೇಮ್ಸ್ (James) ಮೊದಲ ಶೋ ಆರಂಭವಾಗಿದೆ. ಟಿಕೆಟ್​ಗಾಗಿ ಅಭಿಮಾನಿಗಳು ಮುಗಿಬಿದಿದ್ದು, ಟಿಕೆಟ್ ಸಿಗದಿದ್ದಕ್ಕೆ ಟಾಕೀಸ್​ಗೆ ಕಲ್ಲು ತೂರಾಟ ಮಾಡಿದ್ದಾರೆ. ನಗರದ ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ ಘಟನೆ ನಡೆದಿದೆ. ಬೆಳಿಗ್ಗೆ 5 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಚಿತ್ರ ಮಂದಿರದ ಬಳಿ ಜನಸಾಗರ ಜಮಾವಣೆಗೊಂಡಿದ್ದು, ಈ ಮಧ್ಯೆ ಟಿಕೆಟ್​​ಗಾಗಿ ಅಭಿಮಾನಿಗಳು ಮುಗಿಬಿದಿದ್ದಾರೆ. ಟಿಕೆಟ್​ಗಾಗಿ ರಾತ್ರಿಯೆಲ್ಲ ಅಪ್ಪು ಅಭಿಮಾನಿಗಳು ಕಾದು ಕುಳಿತಿದ್ದು, ಟಿಕೆಟ್​ ಸಿಗದಿದ್ದಾಗ ಆಕ್ರೋಶಗೊಂಡ ಅಭಿಮಾನಿಗಳು, ಶಟರ್​​ಗೆ ಕಲ್ಲು ತೂರಿ, ಚಿತ್ರಮಂದಿರದ ಹಿಂಬಾಗ ಕಿಟಕಿಗಳನ್ನು ಪುಡಿ ಮಾಡಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ‌ ಪಟ್ಟಿದ್ದಾರೆ. ಚಿತ್ರಮಂದಿರದೊಳಗೆ ಅಭಿಮಾನಿಯೊಬ್ಬ ಅಪ್ಪು ಭಾವಚಿತ್ರ ಹಿಡಿದು ಬಂದಿದ್ದ. ಅದೇ ರೀತಿಯಾಗಿ ಅಂಗವಿಕಲನೊಬ್ಬ ಟಿಕೆಟ್ ತೆಗೆದುಕೊಳ್ಳಲು ಪರದಾಡಿದ್ದಾನೆ.

ಲಾಠಿ ಪ್ರಹಾರ:

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಎಲ್ಲ ಚಿತ್ರಮಂದಿರಗಳಲ್ಲೂ ಜೇಮ್ಸ್ ಜಾತ್ರೆ ನಡೆಯುತ್ತಿದೆ. ಜೇಮ್ಸ್ ಚಿತ್ರ ನೋಡಲು ರಾತ್ರಿಯಿಂದಲೇ ಅಭಿಮಾನಿಗಳು ಕಾಯ್ದು ಕುಳಿತಿದ್ದಾರೆ.  ಅಭಿಮಾನಿಗಳು ನೂಕು ನುಗ್ಗಲಿಂದ ರಸ್ತೆ ಜಾಮ್ ಕೂಡ ಆಗಿದೆ. ನಗರದ ಉಮಾ‌ ನಟರಾಜ, ಶಿವ ಗಂಗಾ ಚಿತ್ರ ಮಂದಿರಗಳಲ್ಲಿ ನಸುಕಿನ ಜಾವ್ 4 ಗಂಟೆಗೆ ಶೋ ಆರಂಭಗೊಂಡಿದೆ. ಪೇಕ್ಷಕರ ನೂಕುನುಗ್ಗಲಾಗಿದ್ದು, ಪೇಕ್ಷಕರನ್ನ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಪೇಕ್ಷಕರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಪಿಕ್ ಪಾಕೇಟ್​ರಗೆ ಧರ್ಮದೇಟು:

ಬೆಂಗಳೂರು: ಪುನೀತ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಹಲವು ಕಡೆ ಬೆಳಗಿನ ಜಾವ 4 ಗಂಟೆಗೆ ಶೋ ಆರಂಭಗೊಂಡಿವೆ. ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ಕಿಕ್ಕಿರಿದು ಅಪ್ಪು ಫ್ಯಾನ್ಸ್ ತುಂಬಿ ಕೊಂಡಿದ್ದಾರೆ. ಅದೇ ರೀತಿಯಾಗಿ ಈತ್ತ ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಅಭಿಮಾನಿಗಳಿಂದ ತುಂಬಿ ಹೋಗಿದ್ದು, ಅದರ ಮಧ್ಯೆ ವ್ಯಕ್ತಿಯೋರ್ವ ಪಿಕ್​ ಪಾಕೇಟ್​ ಮಾಡಲು ಹೋಗಿ ಸಿಕ್ಕಿಬಿದ್ದು ಧರ್ಮದೇಟು ತಿಂದಿದ್ದಾನೆ.

ಬೆಂಕಿಗಾಹುತಿಯಾದ ರಸಗೊಬ್ಬರ ಅಂಗಡಿ:

ವಿಜಯಪುರ: ರಸಗೊಬ್ಬರ ಸಂಗ್ರಹ ಮಾಡಿದ್ದ ಅಂಗಡಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಜಿಲ್ಲೆ ಇಂಡಿ ಪಟ್ಟಣದ ಅಗರಖೇಡ ರಸ್ತೆ ಬಳಿ ಅವಘಡ ಸಂಭವಿಸಿದೆ. ರಾಘು ಧನಶೆಟ್ಟಿ ಎಂಬುವರಿಗೆ ಸೇರಿದ ನಂದಿ ಅಗ್ರೊ ಟ್ರೇಡರ್ಸ್‌ ಅಂಗಡಿಗೆ ಬೆಂಕಿ ಬಿದಿದ್ದು, ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರಬೇಕು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಲಕ್ಷಾಂತರ ಮೌಲ್ಯದ ಗೊಬ್ಬರ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Published On - 8:55 am, Thu, 17 March 22

ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್