AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಸಿಗದಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಟಾಕೀಸ್​ಗೆ ಕಲ್ಲು ತೂರಾಟ ಕಿಟಕಿ ಗಾಜು ಪುಡಿ ಪುಡಿ

ಬೆಳಿಗ್ಗೆ 5 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಚಿತ್ರ ಮಂದಿರದ ಬಳಿ ಜನಸಾಗರ ಜಮಾವಣೆಗೊಂಡಿದ್ದು, ಈ ಮಧ್ಯೆ ಟಿಕೆಟ್​​ಗಾಗಿ ಅಭಿಮಾನಿಗಳು ಮುಗಿಬಿದಿದ್ದಾರೆ.

ಟಿಕೆಟ್​ ಸಿಗದಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಟಾಕೀಸ್​ಗೆ ಕಲ್ಲು ತೂರಾಟ ಕಿಟಕಿ ಗಾಜು ಪುಡಿ ಪುಡಿ
ಚಿತ್ರಮಂದಿರ ಮುಂದೆ ಜಮಾಯಿಸಿದ ಅಭಿಮಾನಿಗಳು.
TV9 Web
| Edited By: |

Updated on:Mar 17, 2022 | 8:57 AM

Share

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಜೇಮ್ಸ್ (James) ಮೊದಲ ಶೋ ಆರಂಭವಾಗಿದೆ. ಟಿಕೆಟ್​ಗಾಗಿ ಅಭಿಮಾನಿಗಳು ಮುಗಿಬಿದಿದ್ದು, ಟಿಕೆಟ್ ಸಿಗದಿದ್ದಕ್ಕೆ ಟಾಕೀಸ್​ಗೆ ಕಲ್ಲು ತೂರಾಟ ಮಾಡಿದ್ದಾರೆ. ನಗರದ ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ ಘಟನೆ ನಡೆದಿದೆ. ಬೆಳಿಗ್ಗೆ 5 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಚಿತ್ರ ಮಂದಿರದ ಬಳಿ ಜನಸಾಗರ ಜಮಾವಣೆಗೊಂಡಿದ್ದು, ಈ ಮಧ್ಯೆ ಟಿಕೆಟ್​​ಗಾಗಿ ಅಭಿಮಾನಿಗಳು ಮುಗಿಬಿದಿದ್ದಾರೆ. ಟಿಕೆಟ್​ಗಾಗಿ ರಾತ್ರಿಯೆಲ್ಲ ಅಪ್ಪು ಅಭಿಮಾನಿಗಳು ಕಾದು ಕುಳಿತಿದ್ದು, ಟಿಕೆಟ್​ ಸಿಗದಿದ್ದಾಗ ಆಕ್ರೋಶಗೊಂಡ ಅಭಿಮಾನಿಗಳು, ಶಟರ್​​ಗೆ ಕಲ್ಲು ತೂರಿ, ಚಿತ್ರಮಂದಿರದ ಹಿಂಬಾಗ ಕಿಟಕಿಗಳನ್ನು ಪುಡಿ ಮಾಡಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ‌ ಪಟ್ಟಿದ್ದಾರೆ. ಚಿತ್ರಮಂದಿರದೊಳಗೆ ಅಭಿಮಾನಿಯೊಬ್ಬ ಅಪ್ಪು ಭಾವಚಿತ್ರ ಹಿಡಿದು ಬಂದಿದ್ದ. ಅದೇ ರೀತಿಯಾಗಿ ಅಂಗವಿಕಲನೊಬ್ಬ ಟಿಕೆಟ್ ತೆಗೆದುಕೊಳ್ಳಲು ಪರದಾಡಿದ್ದಾನೆ.

ಲಾಠಿ ಪ್ರಹಾರ:

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಎಲ್ಲ ಚಿತ್ರಮಂದಿರಗಳಲ್ಲೂ ಜೇಮ್ಸ್ ಜಾತ್ರೆ ನಡೆಯುತ್ತಿದೆ. ಜೇಮ್ಸ್ ಚಿತ್ರ ನೋಡಲು ರಾತ್ರಿಯಿಂದಲೇ ಅಭಿಮಾನಿಗಳು ಕಾಯ್ದು ಕುಳಿತಿದ್ದಾರೆ.  ಅಭಿಮಾನಿಗಳು ನೂಕು ನುಗ್ಗಲಿಂದ ರಸ್ತೆ ಜಾಮ್ ಕೂಡ ಆಗಿದೆ. ನಗರದ ಉಮಾ‌ ನಟರಾಜ, ಶಿವ ಗಂಗಾ ಚಿತ್ರ ಮಂದಿರಗಳಲ್ಲಿ ನಸುಕಿನ ಜಾವ್ 4 ಗಂಟೆಗೆ ಶೋ ಆರಂಭಗೊಂಡಿದೆ. ಪೇಕ್ಷಕರ ನೂಕುನುಗ್ಗಲಾಗಿದ್ದು, ಪೇಕ್ಷಕರನ್ನ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಪೇಕ್ಷಕರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಪಿಕ್ ಪಾಕೇಟ್​ರಗೆ ಧರ್ಮದೇಟು:

ಬೆಂಗಳೂರು: ಪುನೀತ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಹಲವು ಕಡೆ ಬೆಳಗಿನ ಜಾವ 4 ಗಂಟೆಗೆ ಶೋ ಆರಂಭಗೊಂಡಿವೆ. ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ಕಿಕ್ಕಿರಿದು ಅಪ್ಪು ಫ್ಯಾನ್ಸ್ ತುಂಬಿ ಕೊಂಡಿದ್ದಾರೆ. ಅದೇ ರೀತಿಯಾಗಿ ಈತ್ತ ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಅಭಿಮಾನಿಗಳಿಂದ ತುಂಬಿ ಹೋಗಿದ್ದು, ಅದರ ಮಧ್ಯೆ ವ್ಯಕ್ತಿಯೋರ್ವ ಪಿಕ್​ ಪಾಕೇಟ್​ ಮಾಡಲು ಹೋಗಿ ಸಿಕ್ಕಿಬಿದ್ದು ಧರ್ಮದೇಟು ತಿಂದಿದ್ದಾನೆ.

ಬೆಂಕಿಗಾಹುತಿಯಾದ ರಸಗೊಬ್ಬರ ಅಂಗಡಿ:

ವಿಜಯಪುರ: ರಸಗೊಬ್ಬರ ಸಂಗ್ರಹ ಮಾಡಿದ್ದ ಅಂಗಡಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಜಿಲ್ಲೆ ಇಂಡಿ ಪಟ್ಟಣದ ಅಗರಖೇಡ ರಸ್ತೆ ಬಳಿ ಅವಘಡ ಸಂಭವಿಸಿದೆ. ರಾಘು ಧನಶೆಟ್ಟಿ ಎಂಬುವರಿಗೆ ಸೇರಿದ ನಂದಿ ಅಗ್ರೊ ಟ್ರೇಡರ್ಸ್‌ ಅಂಗಡಿಗೆ ಬೆಂಕಿ ಬಿದಿದ್ದು, ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರಬೇಕು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಲಕ್ಷಾಂತರ ಮೌಲ್ಯದ ಗೊಬ್ಬರ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Published On - 8:55 am, Thu, 17 March 22

Follow Us
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ