AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಸಿಗದಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಟಾಕೀಸ್​ಗೆ ಕಲ್ಲು ತೂರಾಟ ಕಿಟಕಿ ಗಾಜು ಪುಡಿ ಪುಡಿ

ಬೆಳಿಗ್ಗೆ 5 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಚಿತ್ರ ಮಂದಿರದ ಬಳಿ ಜನಸಾಗರ ಜಮಾವಣೆಗೊಂಡಿದ್ದು, ಈ ಮಧ್ಯೆ ಟಿಕೆಟ್​​ಗಾಗಿ ಅಭಿಮಾನಿಗಳು ಮುಗಿಬಿದಿದ್ದಾರೆ.

ಟಿಕೆಟ್​ ಸಿಗದಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಟಾಕೀಸ್​ಗೆ ಕಲ್ಲು ತೂರಾಟ ಕಿಟಕಿ ಗಾಜು ಪುಡಿ ಪುಡಿ
ಚಿತ್ರಮಂದಿರ ಮುಂದೆ ಜಮಾಯಿಸಿದ ಅಭಿಮಾನಿಗಳು.
TV9 Web
| Edited By: |

Updated on:Mar 17, 2022 | 8:57 AM

Share

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಜೇಮ್ಸ್ (James) ಮೊದಲ ಶೋ ಆರಂಭವಾಗಿದೆ. ಟಿಕೆಟ್​ಗಾಗಿ ಅಭಿಮಾನಿಗಳು ಮುಗಿಬಿದಿದ್ದು, ಟಿಕೆಟ್ ಸಿಗದಿದ್ದಕ್ಕೆ ಟಾಕೀಸ್​ಗೆ ಕಲ್ಲು ತೂರಾಟ ಮಾಡಿದ್ದಾರೆ. ನಗರದ ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ ಘಟನೆ ನಡೆದಿದೆ. ಬೆಳಿಗ್ಗೆ 5 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಚಿತ್ರ ಮಂದಿರದ ಬಳಿ ಜನಸಾಗರ ಜಮಾವಣೆಗೊಂಡಿದ್ದು, ಈ ಮಧ್ಯೆ ಟಿಕೆಟ್​​ಗಾಗಿ ಅಭಿಮಾನಿಗಳು ಮುಗಿಬಿದಿದ್ದಾರೆ. ಟಿಕೆಟ್​ಗಾಗಿ ರಾತ್ರಿಯೆಲ್ಲ ಅಪ್ಪು ಅಭಿಮಾನಿಗಳು ಕಾದು ಕುಳಿತಿದ್ದು, ಟಿಕೆಟ್​ ಸಿಗದಿದ್ದಾಗ ಆಕ್ರೋಶಗೊಂಡ ಅಭಿಮಾನಿಗಳು, ಶಟರ್​​ಗೆ ಕಲ್ಲು ತೂರಿ, ಚಿತ್ರಮಂದಿರದ ಹಿಂಬಾಗ ಕಿಟಕಿಗಳನ್ನು ಪುಡಿ ಮಾಡಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ‌ ಪಟ್ಟಿದ್ದಾರೆ. ಚಿತ್ರಮಂದಿರದೊಳಗೆ ಅಭಿಮಾನಿಯೊಬ್ಬ ಅಪ್ಪು ಭಾವಚಿತ್ರ ಹಿಡಿದು ಬಂದಿದ್ದ. ಅದೇ ರೀತಿಯಾಗಿ ಅಂಗವಿಕಲನೊಬ್ಬ ಟಿಕೆಟ್ ತೆಗೆದುಕೊಳ್ಳಲು ಪರದಾಡಿದ್ದಾನೆ.

ಲಾಠಿ ಪ್ರಹಾರ:

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಎಲ್ಲ ಚಿತ್ರಮಂದಿರಗಳಲ್ಲೂ ಜೇಮ್ಸ್ ಜಾತ್ರೆ ನಡೆಯುತ್ತಿದೆ. ಜೇಮ್ಸ್ ಚಿತ್ರ ನೋಡಲು ರಾತ್ರಿಯಿಂದಲೇ ಅಭಿಮಾನಿಗಳು ಕಾಯ್ದು ಕುಳಿತಿದ್ದಾರೆ.  ಅಭಿಮಾನಿಗಳು ನೂಕು ನುಗ್ಗಲಿಂದ ರಸ್ತೆ ಜಾಮ್ ಕೂಡ ಆಗಿದೆ. ನಗರದ ಉಮಾ‌ ನಟರಾಜ, ಶಿವ ಗಂಗಾ ಚಿತ್ರ ಮಂದಿರಗಳಲ್ಲಿ ನಸುಕಿನ ಜಾವ್ 4 ಗಂಟೆಗೆ ಶೋ ಆರಂಭಗೊಂಡಿದೆ. ಪೇಕ್ಷಕರ ನೂಕುನುಗ್ಗಲಾಗಿದ್ದು, ಪೇಕ್ಷಕರನ್ನ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಪೇಕ್ಷಕರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಪಿಕ್ ಪಾಕೇಟ್​ರಗೆ ಧರ್ಮದೇಟು:

ಬೆಂಗಳೂರು: ಪುನೀತ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಹಲವು ಕಡೆ ಬೆಳಗಿನ ಜಾವ 4 ಗಂಟೆಗೆ ಶೋ ಆರಂಭಗೊಂಡಿವೆ. ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ಕಿಕ್ಕಿರಿದು ಅಪ್ಪು ಫ್ಯಾನ್ಸ್ ತುಂಬಿ ಕೊಂಡಿದ್ದಾರೆ. ಅದೇ ರೀತಿಯಾಗಿ ಈತ್ತ ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಅಭಿಮಾನಿಗಳಿಂದ ತುಂಬಿ ಹೋಗಿದ್ದು, ಅದರ ಮಧ್ಯೆ ವ್ಯಕ್ತಿಯೋರ್ವ ಪಿಕ್​ ಪಾಕೇಟ್​ ಮಾಡಲು ಹೋಗಿ ಸಿಕ್ಕಿಬಿದ್ದು ಧರ್ಮದೇಟು ತಿಂದಿದ್ದಾನೆ.

ಬೆಂಕಿಗಾಹುತಿಯಾದ ರಸಗೊಬ್ಬರ ಅಂಗಡಿ:

ವಿಜಯಪುರ: ರಸಗೊಬ್ಬರ ಸಂಗ್ರಹ ಮಾಡಿದ್ದ ಅಂಗಡಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಜಿಲ್ಲೆ ಇಂಡಿ ಪಟ್ಟಣದ ಅಗರಖೇಡ ರಸ್ತೆ ಬಳಿ ಅವಘಡ ಸಂಭವಿಸಿದೆ. ರಾಘು ಧನಶೆಟ್ಟಿ ಎಂಬುವರಿಗೆ ಸೇರಿದ ನಂದಿ ಅಗ್ರೊ ಟ್ರೇಡರ್ಸ್‌ ಅಂಗಡಿಗೆ ಬೆಂಕಿ ಬಿದಿದ್ದು, ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರಬೇಕು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಲಕ್ಷಾಂತರ ಮೌಲ್ಯದ ಗೊಬ್ಬರ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Published On - 8:55 am, Thu, 17 March 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?