AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಸಿಗದಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಟಾಕೀಸ್​ಗೆ ಕಲ್ಲು ತೂರಾಟ ಕಿಟಕಿ ಗಾಜು ಪುಡಿ ಪುಡಿ

ಬೆಳಿಗ್ಗೆ 5 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಚಿತ್ರ ಮಂದಿರದ ಬಳಿ ಜನಸಾಗರ ಜಮಾವಣೆಗೊಂಡಿದ್ದು, ಈ ಮಧ್ಯೆ ಟಿಕೆಟ್​​ಗಾಗಿ ಅಭಿಮಾನಿಗಳು ಮುಗಿಬಿದಿದ್ದಾರೆ.

ಟಿಕೆಟ್​ ಸಿಗದಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಟಾಕೀಸ್​ಗೆ ಕಲ್ಲು ತೂರಾಟ ಕಿಟಕಿ ಗಾಜು ಪುಡಿ ಪುಡಿ
ಚಿತ್ರಮಂದಿರ ಮುಂದೆ ಜಮಾಯಿಸಿದ ಅಭಿಮಾನಿಗಳು.
TV9 Web
| Edited By: |

Updated on:Mar 17, 2022 | 8:57 AM

Share

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಜೇಮ್ಸ್ (James) ಮೊದಲ ಶೋ ಆರಂಭವಾಗಿದೆ. ಟಿಕೆಟ್​ಗಾಗಿ ಅಭಿಮಾನಿಗಳು ಮುಗಿಬಿದಿದ್ದು, ಟಿಕೆಟ್ ಸಿಗದಿದ್ದಕ್ಕೆ ಟಾಕೀಸ್​ಗೆ ಕಲ್ಲು ತೂರಾಟ ಮಾಡಿದ್ದಾರೆ. ನಗರದ ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ ಘಟನೆ ನಡೆದಿದೆ. ಬೆಳಿಗ್ಗೆ 5 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಚಿತ್ರ ಮಂದಿರದ ಬಳಿ ಜನಸಾಗರ ಜಮಾವಣೆಗೊಂಡಿದ್ದು, ಈ ಮಧ್ಯೆ ಟಿಕೆಟ್​​ಗಾಗಿ ಅಭಿಮಾನಿಗಳು ಮುಗಿಬಿದಿದ್ದಾರೆ. ಟಿಕೆಟ್​ಗಾಗಿ ರಾತ್ರಿಯೆಲ್ಲ ಅಪ್ಪು ಅಭಿಮಾನಿಗಳು ಕಾದು ಕುಳಿತಿದ್ದು, ಟಿಕೆಟ್​ ಸಿಗದಿದ್ದಾಗ ಆಕ್ರೋಶಗೊಂಡ ಅಭಿಮಾನಿಗಳು, ಶಟರ್​​ಗೆ ಕಲ್ಲು ತೂರಿ, ಚಿತ್ರಮಂದಿರದ ಹಿಂಬಾಗ ಕಿಟಕಿಗಳನ್ನು ಪುಡಿ ಮಾಡಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ‌ ಪಟ್ಟಿದ್ದಾರೆ. ಚಿತ್ರಮಂದಿರದೊಳಗೆ ಅಭಿಮಾನಿಯೊಬ್ಬ ಅಪ್ಪು ಭಾವಚಿತ್ರ ಹಿಡಿದು ಬಂದಿದ್ದ. ಅದೇ ರೀತಿಯಾಗಿ ಅಂಗವಿಕಲನೊಬ್ಬ ಟಿಕೆಟ್ ತೆಗೆದುಕೊಳ್ಳಲು ಪರದಾಡಿದ್ದಾನೆ.

ಲಾಠಿ ಪ್ರಹಾರ:

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಎಲ್ಲ ಚಿತ್ರಮಂದಿರಗಳಲ್ಲೂ ಜೇಮ್ಸ್ ಜಾತ್ರೆ ನಡೆಯುತ್ತಿದೆ. ಜೇಮ್ಸ್ ಚಿತ್ರ ನೋಡಲು ರಾತ್ರಿಯಿಂದಲೇ ಅಭಿಮಾನಿಗಳು ಕಾಯ್ದು ಕುಳಿತಿದ್ದಾರೆ.  ಅಭಿಮಾನಿಗಳು ನೂಕು ನುಗ್ಗಲಿಂದ ರಸ್ತೆ ಜಾಮ್ ಕೂಡ ಆಗಿದೆ. ನಗರದ ಉಮಾ‌ ನಟರಾಜ, ಶಿವ ಗಂಗಾ ಚಿತ್ರ ಮಂದಿರಗಳಲ್ಲಿ ನಸುಕಿನ ಜಾವ್ 4 ಗಂಟೆಗೆ ಶೋ ಆರಂಭಗೊಂಡಿದೆ. ಪೇಕ್ಷಕರ ನೂಕುನುಗ್ಗಲಾಗಿದ್ದು, ಪೇಕ್ಷಕರನ್ನ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಪೇಕ್ಷಕರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಪಿಕ್ ಪಾಕೇಟ್​ರಗೆ ಧರ್ಮದೇಟು:

ಬೆಂಗಳೂರು: ಪುನೀತ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಹಲವು ಕಡೆ ಬೆಳಗಿನ ಜಾವ 4 ಗಂಟೆಗೆ ಶೋ ಆರಂಭಗೊಂಡಿವೆ. ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ಕಿಕ್ಕಿರಿದು ಅಪ್ಪು ಫ್ಯಾನ್ಸ್ ತುಂಬಿ ಕೊಂಡಿದ್ದಾರೆ. ಅದೇ ರೀತಿಯಾಗಿ ಈತ್ತ ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಅಭಿಮಾನಿಗಳಿಂದ ತುಂಬಿ ಹೋಗಿದ್ದು, ಅದರ ಮಧ್ಯೆ ವ್ಯಕ್ತಿಯೋರ್ವ ಪಿಕ್​ ಪಾಕೇಟ್​ ಮಾಡಲು ಹೋಗಿ ಸಿಕ್ಕಿಬಿದ್ದು ಧರ್ಮದೇಟು ತಿಂದಿದ್ದಾನೆ.

ಬೆಂಕಿಗಾಹುತಿಯಾದ ರಸಗೊಬ್ಬರ ಅಂಗಡಿ:

ವಿಜಯಪುರ: ರಸಗೊಬ್ಬರ ಸಂಗ್ರಹ ಮಾಡಿದ್ದ ಅಂಗಡಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಜಿಲ್ಲೆ ಇಂಡಿ ಪಟ್ಟಣದ ಅಗರಖೇಡ ರಸ್ತೆ ಬಳಿ ಅವಘಡ ಸಂಭವಿಸಿದೆ. ರಾಘು ಧನಶೆಟ್ಟಿ ಎಂಬುವರಿಗೆ ಸೇರಿದ ನಂದಿ ಅಗ್ರೊ ಟ್ರೇಡರ್ಸ್‌ ಅಂಗಡಿಗೆ ಬೆಂಕಿ ಬಿದಿದ್ದು, ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರಬೇಕು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಲಕ್ಷಾಂತರ ಮೌಲ್ಯದ ಗೊಬ್ಬರ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Published On - 8:55 am, Thu, 17 March 22

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ