AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಸಿಗದಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಟಾಕೀಸ್​ಗೆ ಕಲ್ಲು ತೂರಾಟ ಕಿಟಕಿ ಗಾಜು ಪುಡಿ ಪುಡಿ

ಬೆಳಿಗ್ಗೆ 5 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಚಿತ್ರ ಮಂದಿರದ ಬಳಿ ಜನಸಾಗರ ಜಮಾವಣೆಗೊಂಡಿದ್ದು, ಈ ಮಧ್ಯೆ ಟಿಕೆಟ್​​ಗಾಗಿ ಅಭಿಮಾನಿಗಳು ಮುಗಿಬಿದಿದ್ದಾರೆ.

ಟಿಕೆಟ್​ ಸಿಗದಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಟಾಕೀಸ್​ಗೆ ಕಲ್ಲು ತೂರಾಟ ಕಿಟಕಿ ಗಾಜು ಪುಡಿ ಪುಡಿ
ಚಿತ್ರಮಂದಿರ ಮುಂದೆ ಜಮಾಯಿಸಿದ ಅಭಿಮಾನಿಗಳು.
TV9 Web
| Edited By: |

Updated on:Mar 17, 2022 | 8:57 AM

Share

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಜೇಮ್ಸ್ (James) ಮೊದಲ ಶೋ ಆರಂಭವಾಗಿದೆ. ಟಿಕೆಟ್​ಗಾಗಿ ಅಭಿಮಾನಿಗಳು ಮುಗಿಬಿದಿದ್ದು, ಟಿಕೆಟ್ ಸಿಗದಿದ್ದಕ್ಕೆ ಟಾಕೀಸ್​ಗೆ ಕಲ್ಲು ತೂರಾಟ ಮಾಡಿದ್ದಾರೆ. ನಗರದ ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ ಘಟನೆ ನಡೆದಿದೆ. ಬೆಳಿಗ್ಗೆ 5 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಚಿತ್ರ ಮಂದಿರದ ಬಳಿ ಜನಸಾಗರ ಜಮಾವಣೆಗೊಂಡಿದ್ದು, ಈ ಮಧ್ಯೆ ಟಿಕೆಟ್​​ಗಾಗಿ ಅಭಿಮಾನಿಗಳು ಮುಗಿಬಿದಿದ್ದಾರೆ. ಟಿಕೆಟ್​ಗಾಗಿ ರಾತ್ರಿಯೆಲ್ಲ ಅಪ್ಪು ಅಭಿಮಾನಿಗಳು ಕಾದು ಕುಳಿತಿದ್ದು, ಟಿಕೆಟ್​ ಸಿಗದಿದ್ದಾಗ ಆಕ್ರೋಶಗೊಂಡ ಅಭಿಮಾನಿಗಳು, ಶಟರ್​​ಗೆ ಕಲ್ಲು ತೂರಿ, ಚಿತ್ರಮಂದಿರದ ಹಿಂಬಾಗ ಕಿಟಕಿಗಳನ್ನು ಪುಡಿ ಮಾಡಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ‌ ಪಟ್ಟಿದ್ದಾರೆ. ಚಿತ್ರಮಂದಿರದೊಳಗೆ ಅಭಿಮಾನಿಯೊಬ್ಬ ಅಪ್ಪು ಭಾವಚಿತ್ರ ಹಿಡಿದು ಬಂದಿದ್ದ. ಅದೇ ರೀತಿಯಾಗಿ ಅಂಗವಿಕಲನೊಬ್ಬ ಟಿಕೆಟ್ ತೆಗೆದುಕೊಳ್ಳಲು ಪರದಾಡಿದ್ದಾನೆ.

ಲಾಠಿ ಪ್ರಹಾರ:

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಎಲ್ಲ ಚಿತ್ರಮಂದಿರಗಳಲ್ಲೂ ಜೇಮ್ಸ್ ಜಾತ್ರೆ ನಡೆಯುತ್ತಿದೆ. ಜೇಮ್ಸ್ ಚಿತ್ರ ನೋಡಲು ರಾತ್ರಿಯಿಂದಲೇ ಅಭಿಮಾನಿಗಳು ಕಾಯ್ದು ಕುಳಿತಿದ್ದಾರೆ.  ಅಭಿಮಾನಿಗಳು ನೂಕು ನುಗ್ಗಲಿಂದ ರಸ್ತೆ ಜಾಮ್ ಕೂಡ ಆಗಿದೆ. ನಗರದ ಉಮಾ‌ ನಟರಾಜ, ಶಿವ ಗಂಗಾ ಚಿತ್ರ ಮಂದಿರಗಳಲ್ಲಿ ನಸುಕಿನ ಜಾವ್ 4 ಗಂಟೆಗೆ ಶೋ ಆರಂಭಗೊಂಡಿದೆ. ಪೇಕ್ಷಕರ ನೂಕುನುಗ್ಗಲಾಗಿದ್ದು, ಪೇಕ್ಷಕರನ್ನ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಪೇಕ್ಷಕರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಪಿಕ್ ಪಾಕೇಟ್​ರಗೆ ಧರ್ಮದೇಟು:

ಬೆಂಗಳೂರು: ಪುನೀತ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಹಲವು ಕಡೆ ಬೆಳಗಿನ ಜಾವ 4 ಗಂಟೆಗೆ ಶೋ ಆರಂಭಗೊಂಡಿವೆ. ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ಕಿಕ್ಕಿರಿದು ಅಪ್ಪು ಫ್ಯಾನ್ಸ್ ತುಂಬಿ ಕೊಂಡಿದ್ದಾರೆ. ಅದೇ ರೀತಿಯಾಗಿ ಈತ್ತ ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಅಭಿಮಾನಿಗಳಿಂದ ತುಂಬಿ ಹೋಗಿದ್ದು, ಅದರ ಮಧ್ಯೆ ವ್ಯಕ್ತಿಯೋರ್ವ ಪಿಕ್​ ಪಾಕೇಟ್​ ಮಾಡಲು ಹೋಗಿ ಸಿಕ್ಕಿಬಿದ್ದು ಧರ್ಮದೇಟು ತಿಂದಿದ್ದಾನೆ.

ಬೆಂಕಿಗಾಹುತಿಯಾದ ರಸಗೊಬ್ಬರ ಅಂಗಡಿ:

ವಿಜಯಪುರ: ರಸಗೊಬ್ಬರ ಸಂಗ್ರಹ ಮಾಡಿದ್ದ ಅಂಗಡಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಜಿಲ್ಲೆ ಇಂಡಿ ಪಟ್ಟಣದ ಅಗರಖೇಡ ರಸ್ತೆ ಬಳಿ ಅವಘಡ ಸಂಭವಿಸಿದೆ. ರಾಘು ಧನಶೆಟ್ಟಿ ಎಂಬುವರಿಗೆ ಸೇರಿದ ನಂದಿ ಅಗ್ರೊ ಟ್ರೇಡರ್ಸ್‌ ಅಂಗಡಿಗೆ ಬೆಂಕಿ ಬಿದಿದ್ದು, ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರಬೇಕು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಲಕ್ಷಾಂತರ ಮೌಲ್ಯದ ಗೊಬ್ಬರ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

Cyclone Asani: ಮುಂದಿನವಾರ ಅಪ್ಪಳಿಸಲಿದೆ ಅಸನಿ ಚಂಡಮಾರುತ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Published On - 8:55 am, Thu, 17 March 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!