AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಮ್ಸ್ ಆಸ್ಪತ್ರೆಗೆ ನುಗ್ಗಿದ ಖದೀಮರಿಂದ ನಗದು, ಮೊಬೈಲ್ ಕಳ್ಳತನ

ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೆಮ್ಮದಿ ಮತ್ತು ಸೂಕ್ತ ರಕ್ಷಣೆ ಇಲ್ಲ ಎಂಬುದು ಕಳ್ಳತನ ಪ್ರಕರಣದಿಂದ ಬೆಳಕಿಗೆ ಬಂದಿದೆ.​​ ಆಸ್ಪತ್ರೆಯ ಹೆರಿಗೆ, ಮಕ್ಕಳ ವಿಭಾಗಕ್ಕೂ ನುಗ್ಗಿ ಕಳವು ಮಾಡಲಾಗಿದೆ. ಕಳ್ಳರ ಚಲನವಲನ ಪರಿಶೀಲನೆ ಮಾಡದೇ ವೈದ್ಯರ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೋಗಿಗಳ ಸಂಬಂಧಿಕರು ಆರೋಪಿಸಿದ್ದಾರೆ.

ಗದಗ ಜಿಮ್ಸ್ ಆಸ್ಪತ್ರೆಗೆ ನುಗ್ಗಿದ ಖದೀಮರಿಂದ ನಗದು, ಮೊಬೈಲ್ ಕಳ್ಳತನ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Oct 07, 2022 | 1:06 PM

Share

ಗದಗ: ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೆಮ್ಮದಿ ಮತ್ತು ಸೂಕ್ತ ರಕ್ಷಣೆ ಇಲ್ಲ ಎಂಬುದು ಕಳ್ಳತನ ಪ್ರಕರಣದಿಂದ ಬೆಳಕಿಗೆ ಬಂದಿದೆ.​​ ಆಸ್ಪತ್ರೆಯ ಹೆರಿಗೆ, ಮಕ್ಕಳ ವಿಭಾಗಕ್ಕೂ ನುಗ್ಗಿ ಕಳವು ಮಾಡಲಾಗಿದೆ. ಇದರೊಂದಿಗೆ ಮಕ್ಕಳ ಕಳ್ಳರ ಹಾವಳಿಯೊಂದಿಗೆ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿಯ ಭೀತಿ ಎದುರಾಗಿದೆ. ರಾತ್ರಿ ಬಾಣಂತಿಯರು ನಿದ್ರೆಯಲ್ಲಿದ್ದಾಗ ನಗದು ಮೊಬೈಲ್ ಕಳ್ಳತನ ಮಾಡಲಾಗಿದ್ದು, ಮಕ್ಕಳ ಕಳವು ಆತಂಕವೂ ಎದುರಾಗಿದೆ. ಆಸ್ಪತ್ರೆಯಲ್ಲಿ ಸಿಸಿಕ್ಯಾಮರಾ ಇದ್ದೂ ಇಲ್ಲದಂತಾಗಿದೆ ಎಂದು ರೋಗಿಗಳು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಆತಂಕದ ನಡುವೆ ರೋಗಿಗಳು ಆಸ್ಪತ್ರೆಯಲ್ಲಿ ದಿನ ಕಳೆಯುತ್ತಿದ್ದರೂ ಜಿಮ್ಸ್​ ಆಸ್ಪತ್ರೆ ಆಡಳಿತ ಕ್ಯಾರೇ ಅನ್ನುತ್ತಿಲ್ಲ ಎಂದು ರೋಗಿಗಳು ಹೇಳುತ್ತಿದ್ದಾರೆ. ಸಿಸಿ ಟಿವಿ ಪರಿಶೀಲನೆ ನಡೆಸುವಂತೆ ಕೇಳಿಕೊಂಡರೂ ಕಳ್ಳರ ಚಲನವಲನ ಪರಿಶೀಲನೆ ಮಾಡದೇ ವೈದ್ಯರ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೋಗಿಗಳ ಸಂಬಂಧಿಕರು ಆರೋಪಿಸಿದ್ದಾರೆ.

ಸುಲಿಗೆ ಪ್ರಕರಣದಲ್ಲಿ ಮೂವರ ಬಂಧನ

ಬೆಂಗಳೂರು: ನಗರದ ವಿದ್ಯಾರಣ್ಯಪುರ ಹಾಗೂ ಚಿಕ್ಕಜಾಲ ಪೊಲೀಸರು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೊಬೈಲ್ ಸುಲಿಗೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಲಿಗೆಕೋರರಿಂದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಖದೀಮರು ಅವರನ್ನು ಅಡ್ಡಗಟ್ಟಿ ಮೊಬೈಲ್​ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಪ್ರಕರಣ ಸಂಬಂಧ ಚಿಕ್ಕಜಾಲ ಪೊಲೀಸರು ನಾಗೇಶ ಎಂಬ ಆರೋಪಿಯನ್ನು ಬಂಧಿಸಿದರೆ, ವಿದ್ಯಾರಣ್ಯಪುರ ಪೊಲೀಸರಿಂದ ಸಮಾದ್ ಹಾಗೂ ಶಿವಕುಮಾರ್ ಎಂಬವರ ಬಂಧನವಾಗಿದೆ.

ಕೆಲಸ ಕೊಡಿಸುವ ನೆಪದಲ್ಲಿ ಕೋಟಿ ಕೋಟಿ ವಂಚನೆ

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಅಭ್ಯರ್ಥಿಗಳಿಗೆ ಪೊಲೀಸರು ಕೋಟಿ ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದ್ದು, ಚಿಕ್ಕಜಾಲ ಠಾಣೆಯ ಎಸ್​ಬಿ ಕಾನ್​ಸ್ಟೇಬಲ್ ರವಿಯನ್ನ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. BWSSB ನಲ್ಲಿ ಕೆಲಸ ಕೊಡಿಸೂದಾಗಿ‌ ಹೇಳಿ ಚಿಕ್ಕಜಾಲ ಠಾಣೆಯ ಎಸ್​ಬಿ ಕಾನ್​ಸ್ಟೇಬಲ್ ರವಿ ಮತ್ತು ಇನ್​ಸ್ಪೆಕ್ಟರ್ ಪ್ರವೀಣ್ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದೆ. ಸದ್ಯ ರವಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Fri, 7 October 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?