AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಮ್ಸ್ ಆಸ್ಪತ್ರೆಗೆ ನುಗ್ಗಿದ ಖದೀಮರಿಂದ ನಗದು, ಮೊಬೈಲ್ ಕಳ್ಳತನ

ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೆಮ್ಮದಿ ಮತ್ತು ಸೂಕ್ತ ರಕ್ಷಣೆ ಇಲ್ಲ ಎಂಬುದು ಕಳ್ಳತನ ಪ್ರಕರಣದಿಂದ ಬೆಳಕಿಗೆ ಬಂದಿದೆ.​​ ಆಸ್ಪತ್ರೆಯ ಹೆರಿಗೆ, ಮಕ್ಕಳ ವಿಭಾಗಕ್ಕೂ ನುಗ್ಗಿ ಕಳವು ಮಾಡಲಾಗಿದೆ. ಕಳ್ಳರ ಚಲನವಲನ ಪರಿಶೀಲನೆ ಮಾಡದೇ ವೈದ್ಯರ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೋಗಿಗಳ ಸಂಬಂಧಿಕರು ಆರೋಪಿಸಿದ್ದಾರೆ.

ಗದಗ ಜಿಮ್ಸ್ ಆಸ್ಪತ್ರೆಗೆ ನುಗ್ಗಿದ ಖದೀಮರಿಂದ ನಗದು, ಮೊಬೈಲ್ ಕಳ್ಳತನ
ಸಾಂಧರ್ಬಿಕ ಚಿತ್ರ
TV9 Web
| Updated By: Rakesh Nayak Manchi|

Updated on:Oct 07, 2022 | 1:06 PM

Share

ಗದಗ: ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೆಮ್ಮದಿ ಮತ್ತು ಸೂಕ್ತ ರಕ್ಷಣೆ ಇಲ್ಲ ಎಂಬುದು ಕಳ್ಳತನ ಪ್ರಕರಣದಿಂದ ಬೆಳಕಿಗೆ ಬಂದಿದೆ.​​ ಆಸ್ಪತ್ರೆಯ ಹೆರಿಗೆ, ಮಕ್ಕಳ ವಿಭಾಗಕ್ಕೂ ನುಗ್ಗಿ ಕಳವು ಮಾಡಲಾಗಿದೆ. ಇದರೊಂದಿಗೆ ಮಕ್ಕಳ ಕಳ್ಳರ ಹಾವಳಿಯೊಂದಿಗೆ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿಯ ಭೀತಿ ಎದುರಾಗಿದೆ. ರಾತ್ರಿ ಬಾಣಂತಿಯರು ನಿದ್ರೆಯಲ್ಲಿದ್ದಾಗ ನಗದು ಮೊಬೈಲ್ ಕಳ್ಳತನ ಮಾಡಲಾಗಿದ್ದು, ಮಕ್ಕಳ ಕಳವು ಆತಂಕವೂ ಎದುರಾಗಿದೆ. ಆಸ್ಪತ್ರೆಯಲ್ಲಿ ಸಿಸಿಕ್ಯಾಮರಾ ಇದ್ದೂ ಇಲ್ಲದಂತಾಗಿದೆ ಎಂದು ರೋಗಿಗಳು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಆತಂಕದ ನಡುವೆ ರೋಗಿಗಳು ಆಸ್ಪತ್ರೆಯಲ್ಲಿ ದಿನ ಕಳೆಯುತ್ತಿದ್ದರೂ ಜಿಮ್ಸ್​ ಆಸ್ಪತ್ರೆ ಆಡಳಿತ ಕ್ಯಾರೇ ಅನ್ನುತ್ತಿಲ್ಲ ಎಂದು ರೋಗಿಗಳು ಹೇಳುತ್ತಿದ್ದಾರೆ. ಸಿಸಿ ಟಿವಿ ಪರಿಶೀಲನೆ ನಡೆಸುವಂತೆ ಕೇಳಿಕೊಂಡರೂ ಕಳ್ಳರ ಚಲನವಲನ ಪರಿಶೀಲನೆ ಮಾಡದೇ ವೈದ್ಯರ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೋಗಿಗಳ ಸಂಬಂಧಿಕರು ಆರೋಪಿಸಿದ್ದಾರೆ.

ಸುಲಿಗೆ ಪ್ರಕರಣದಲ್ಲಿ ಮೂವರ ಬಂಧನ

ಬೆಂಗಳೂರು: ನಗರದ ವಿದ್ಯಾರಣ್ಯಪುರ ಹಾಗೂ ಚಿಕ್ಕಜಾಲ ಪೊಲೀಸರು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೊಬೈಲ್ ಸುಲಿಗೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಲಿಗೆಕೋರರಿಂದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಖದೀಮರು ಅವರನ್ನು ಅಡ್ಡಗಟ್ಟಿ ಮೊಬೈಲ್​ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಪ್ರಕರಣ ಸಂಬಂಧ ಚಿಕ್ಕಜಾಲ ಪೊಲೀಸರು ನಾಗೇಶ ಎಂಬ ಆರೋಪಿಯನ್ನು ಬಂಧಿಸಿದರೆ, ವಿದ್ಯಾರಣ್ಯಪುರ ಪೊಲೀಸರಿಂದ ಸಮಾದ್ ಹಾಗೂ ಶಿವಕುಮಾರ್ ಎಂಬವರ ಬಂಧನವಾಗಿದೆ.

ಕೆಲಸ ಕೊಡಿಸುವ ನೆಪದಲ್ಲಿ ಕೋಟಿ ಕೋಟಿ ವಂಚನೆ

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಅಭ್ಯರ್ಥಿಗಳಿಗೆ ಪೊಲೀಸರು ಕೋಟಿ ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದ್ದು, ಚಿಕ್ಕಜಾಲ ಠಾಣೆಯ ಎಸ್​ಬಿ ಕಾನ್​ಸ್ಟೇಬಲ್ ರವಿಯನ್ನ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. BWSSB ನಲ್ಲಿ ಕೆಲಸ ಕೊಡಿಸೂದಾಗಿ‌ ಹೇಳಿ ಚಿಕ್ಕಜಾಲ ಠಾಣೆಯ ಎಸ್​ಬಿ ಕಾನ್​ಸ್ಟೇಬಲ್ ರವಿ ಮತ್ತು ಇನ್​ಸ್ಪೆಕ್ಟರ್ ಪ್ರವೀಣ್ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದೆ. ಸದ್ಯ ರವಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Fri, 7 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!