AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ

ಒಂದೇ ಕುಟುಂಬದ ನಾಲ್ವರು ಭೀಕರವಾಗಿ ಕೊಲೆಯಾಗಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಕಾರ್ತಿಕ ಅವರ ಮದುವೆ ತಯಾರಿಗೆಂದು ಸಂಬಂಧಿಕರು ಕೊಪ್ಪಳದಿಂದ ಗದಗಕ್ಕೆ ಆಗಮಿಸಿದ್ದರು. ಆದರೆ ಗುರುವಾರ ರಾತ್ರಿ ಕೊಪ್ಪಳದಿಂದ ಆಗಮಿಸಿದ್ದ ಸಂಬಂಧಿಕರು ಹಾಗೂ ಕಾರ್ತಿಕ ಕೊಲೆಯಾಗಿದ್ದಾರೆ.

ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ
ಕೊಲೆಯಾದ ಕಾರ್ತಿಕ್​ ಪರಶುರಾಮ, ಆಕಾಂಕ್ಷಾ, ಲಕ್ಷ್ಮೀ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ವಿವೇಕ ಬಿರಾದಾರ|

Updated on:Apr 19, 2024 | 11:13 AM

Share

ಗದಗ, ಏಪ್ರಿಲ್​ 19: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ (Same Family) ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗದಗ (Gadag) ನಗರದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಕೊಪ್ಪಳದ ಭಾಗ್ಯ ನಗರ ನಿವಾಸಿ, ಹೋಟೆಲ್ ಉದ್ಯಮಿ ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್​ ಅವರ ಮದುವೆ ತಯಾರಿ ಸಂಬಂಧ ಏಪ್ರಿಲ್​ 17 ರಂದು ಸಂಬಂಧಿಕರಾದ ಪರಶುರಾಮ, ಪತ್ನಿ ಲಕ್ಷ್ಮೀ, ಪುತ್ರಿ ಆಕಾಂಕ್ಷಾ ಕೊಪ್ಪಳದಿಂದ ಗದಗ ನಗರಕ್ಕೆ ಆಗಮಿಸಿದ್ದಾರೆ.  ಗುರುವಾರ (ಏ.18) ರಂದು ರಾತ್ರಿ ಆಕಾಂಕ್ಷಾ ಹುಟ್ಟು ಹಬ್ಬವನ್ನು ಕುಟುಂಬಸ್ಥರು ಆಚರಿಸಿದ್ದಾರೆ. ಬಳಿಕ ಪರಶುರಾಮ ಕುಟುಂಬ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿತ್ತು.

ತಡರಾತ್ರಿ ಪರಶುರಾಮ ಕುಟುಂಬ ಮಲಗಿದ್ದ ಕೋಣೆಯ ಗಾಜಿನ ಕಿಟಕಿಯನ್ನು ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಿಟಿಕಿ ಒಡೆದ ಮತ್ತು ಕಿರಿಚಾಟದ ಸದ್ದು ಕೇಳಿ ಏನಾಯಿತೆಂದು ಕೆಳಗಿನ ಕೋಣೆಯಲ್ಲಿ ಮಲಗಿದ್ದ ಕಾರ್ತಿಕ್​ ಬಾಕಳೆ ನೋಡಲು ಮೇಲೆ ಹೋಗಿದ್ದಾರೆ. ಆಗ ದುಷ್ಕರ್ಮಿಗಳು ಕಾರ್ತಿಕ್​ನನ್ನೂ ಕೊಲೆ ಮಾಡಿದ್ದಾರೆ. ಬಳಿಕ ದುಷ್ಕರ್ಮಿಗಳು ಮನೆಯ ಮಾಲಿಕ ಪ್ರಕಾಶ್ ಬಾಕಳೆ ಮತ್ತು ಪತ್ನಿ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರು ಮಲಗಿದ್ದ ಕೋಣೆಯ ಬಾಗಲಿ ತಟ್ಟಿದ್ದಾರೆ.

ಕೊಲೆಯಾದ ಮನೆ

ಇದನ್ನೂ ಓದಿ: ನೇಹಾ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಆಕ್ರೋಶ, ಆರೋಪಿಯನ್ನು ಎನ್​ಕೌಂಟರ್ ಮಾಡುವಂತೆ ಒತ್ತಾಯ

ಆದರೆ ದಂಪತಿ ಬಾಗಿಲು ತೆಗೆಯದೆ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಹಿಂಬಾಗಿಲಿನಿಂದ ಪರಾರಿಯಾಗಿದ್ದಾರೆ. ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳನ್ನು ದುಷ್ಕರ್ಮಿಗಳು ಚರಂಡಿಯಲ್ಲಿ ಬಿಸಾಕಿದ್ದಾರೆ. ಸ್ಥಳಕ್ಕೆ ಶ್ವಾನದಳ, ವಿಧಿವಿಜ್ಞಾನ ಪ್ರಯೋಗಾಲಯ ತಂಡ, ಎಸ್ಪಿ ಬಿಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಭೇಟಿ ನೀಡಿದ್ದಾರೆ.

ಎಸ್​ಪಿ ನೇಮಗೌಡ ನೇತೃತ್ವದಲ್ಲಿ ಐವರ ತಂಡ ರಚನೆ: ಐಜಿಪಿ

ಮಧ್ಯರಾತ್ರಿ 2 ಗಂಟೆಗೆ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಗದಗ ಶಹರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕೊಲೆ ಮಾಡಿದವರು ದರೋಡೆಕೋರರು ಅಲ್ಲ ಅಂತ ಅನಿಸುತ್ತದೆ. ದರೋಡೆಕೋರರು ಆಗಿದ್ದರೆ ಚಿನ್ನಾಭರಣ ಲೂಟಿ ಮಾಡುತ್ತಿದ್ದರು. ಮೃತದೇಹಗಳ ಮೇಲೆ ಆಭರಣಗಳು ಹಾಗೆ ಇದೆ. ಕೆಳಮಹಡಿಯಲ್ಲಿದ್ದ ತಾಯಿ ಲಕ್ಷ್ಮೀ, ಮಗಳು ಆಕಾಂಕ್ಷಾರನ್ನು ಕೊಲೆ ಮಾಡಲಾಗಿದೆ. ಮೊದಲನೇ ಮಹಡಿಯಲ್ಲಿ ಪರಶುರಾಮ, ಕಾರ್ತಿಕ್ ಕೊಲೆ ಆಗಿದೆ. ತನಿಖೆಗೆ ಎಸ್​ಪಿ ನೇಮಗೌಡ ನೇತೃತ್ವದಲ್ಲಿ ಐವರ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಕೊಲೆ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಬೆಳಗಾವಿ ಐಜಿಪಿ ವಿಕಾಸ್​ಕುಮಾರ್ ಹೇಳಿದರು.

ಪ್ರಕಾಶ್ ಬಾಕಳೆ ಮನೆಗೆ ಹೆಚ್​ಕೆ ಪಾಟೀಲ್​ ಭೇಟಿ

ಕೊಲೆ ನಡೆದ ಪ್ರಕಾಶ್​ ಬಾಕಳೆ ಮನೆಗೆ ಸಚಿವ ಹೆಚ್.ಕೆ.ಪಾಟೀಲ್​​ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ ಹೇಳಿದರು. ಈ ವೇಳೆ ಕುಟುಂಬಸ್ಥರು  ಕೊಲೆಗಾರರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಆರೋಪಿಗಳನ್ನು ಕೂಡಲೆ ಬಂಧಿಸಲಾಗುವುದು ಎಂದು ಸಚಿವ ಹೆಚ್​.ಕೆ ಪಾಟೀಲ್​​ ಕುಟುಂಬಸ್ಥರಿಗೆ ವಿಶ್ವಾಸ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Fri, 19 April 24

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!