AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾಧೀನ ಗಾಯಾಳು ಖೈದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು

ಆರೋಪಿ ಡಾಲಿನನ್ನು ಸರಗಳ್ಳತನ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಂಧನಕ್ಕೂ ಮೊದಲೇ ಗಜೇಂದ್ರ ತೀವ್ರ ಕಾಲುಬೇನೆಯಿಂದ ಬಳಲುತಿದ್ದ. ಈ ವೇಳೆ ಪೊಲೀಸರು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾಧೀನ ಗಾಯಾಳು ಖೈದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು
ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾಧಿನ ಗಾಯಾಳು ಖೈದಿ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಸಾವು
TV9 Web
| Updated By: ಸಾಧು ಶ್ರೀನಾಥ್​|

Updated on:Aug 19, 2021 | 12:31 PM

Share

ಬೆಂಗಳೂರು: ಗಾಯಗೊಂಡಿದ್ದ ವಿಚಾರಣಾಧೀನ ಖೈದಿ, ಕುಖ್ಯಾತ ಕಳ್ಳ ಗಜೇಂದ್ರ ಅಲಿಯಾಸ್ ಡಾಲಿ (24) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಚಂದ್ರ ಲೇಔಟ್ ಪೊಲೀಸರು ಡಾಲಿನನ್ನು ಬಂಧಿಸಿದ್ದರು.

ಆರೋಪಿ ಡಾಲಿನನ್ನು ಸರಗಳ್ಳತನ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಂಧನಕ್ಕೂ ಮೊದಲೇ ಗಜೇಂದ್ರ ತೀವ್ರ ಕಾಲುಬೇನೆಯಿಂದ ಬಳಲುತಿದ್ದ. ಈ ವೇಳೆ ಪೊಲೀಸರು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಗಜೇಂದ್ರನನ್ನು ಇದೇ ತಿಂಗಳ 17 ರಂದು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲೂ ಸಹ ತೀವ್ರ ಕಾಲು ನೋವಿನಿಂದ ಗಜೇಂದ್ರ ಬಳಲುತಿದ್ದ. ನಿನ್ನೆ ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ಆತನನ್ನು ಶಿಫ್ಟ್ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ನಿನ್ನೆ ಸಂಜೆ ಗಜೇಂದ್ರ ಕೊನೆಯುಸಿರೆಳೆದಿದ್ದಾನೆ.

ಡಾಲಿ ಗಜೇಂದ್ರನ ಹಿನ್ನೆಲೆ ಡಾಲಿ ಗಜೇಂದ್ರ ಸರಗಳ್ಳತನ, ದರೋಡೆ, ಚೈನ್ ಸ್ನ್ಯಾಚ್ ಸೇರಿದಂತೆ 35ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಡಾಲಿ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಬಿಡುಗಡೆಯಾದ ದಿನವೇ ಆರು ಸರಗಳ್ಳತನ ಕೃತ್ಯ ಎಸಗಿ ಎಸ್ಕೇಪ್ ಆಗಿದ್ದ. ಬಳಿಕ ಇದೇ ತಿಂಗಳ 12 ರಂದು ಮೂರು ಸರಗಳ್ಳತನ ಕೃತ್ಯಗಳನ್ನು ಎಸಗಿದ್ದ. ಚಂದ್ರಾ ಲೇಔಟ್ ನಲ್ಲಿ ನಡೆದಿದ್ದ ಸರಗಳ್ಳತನ ಕೃತ್ಯದ ಸಂಬಂಧ ಬಂಧಿಸಲ್ಪಟ್ಟಿದ್ದ. ಕೆಪಿ ಅಗ್ರಹಾರ ನಿವಾಸಿಯಾಗಿದ್ದ ಗಜೇಂದ್ರನ ಮೃತದೇಹವನ್ನು ಈಗ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

(gajendra a chain snatcher in judicial custody died in victoria hospital)

Published On - 12:23 pm, Thu, 19 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ