AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾಧೀನ ಗಾಯಾಳು ಖೈದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು

ಆರೋಪಿ ಡಾಲಿನನ್ನು ಸರಗಳ್ಳತನ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಂಧನಕ್ಕೂ ಮೊದಲೇ ಗಜೇಂದ್ರ ತೀವ್ರ ಕಾಲುಬೇನೆಯಿಂದ ಬಳಲುತಿದ್ದ. ಈ ವೇಳೆ ಪೊಲೀಸರು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾಧೀನ ಗಾಯಾಳು ಖೈದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು
ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾಧಿನ ಗಾಯಾಳು ಖೈದಿ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Aug 19, 2021 | 12:31 PM

Share

ಬೆಂಗಳೂರು: ಗಾಯಗೊಂಡಿದ್ದ ವಿಚಾರಣಾಧೀನ ಖೈದಿ, ಕುಖ್ಯಾತ ಕಳ್ಳ ಗಜೇಂದ್ರ ಅಲಿಯಾಸ್ ಡಾಲಿ (24) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಚಂದ್ರ ಲೇಔಟ್ ಪೊಲೀಸರು ಡಾಲಿನನ್ನು ಬಂಧಿಸಿದ್ದರು.

ಆರೋಪಿ ಡಾಲಿನನ್ನು ಸರಗಳ್ಳತನ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಂಧನಕ್ಕೂ ಮೊದಲೇ ಗಜೇಂದ್ರ ತೀವ್ರ ಕಾಲುಬೇನೆಯಿಂದ ಬಳಲುತಿದ್ದ. ಈ ವೇಳೆ ಪೊಲೀಸರು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಗಜೇಂದ್ರನನ್ನು ಇದೇ ತಿಂಗಳ 17 ರಂದು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲೂ ಸಹ ತೀವ್ರ ಕಾಲು ನೋವಿನಿಂದ ಗಜೇಂದ್ರ ಬಳಲುತಿದ್ದ. ನಿನ್ನೆ ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ಆತನನ್ನು ಶಿಫ್ಟ್ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ನಿನ್ನೆ ಸಂಜೆ ಗಜೇಂದ್ರ ಕೊನೆಯುಸಿರೆಳೆದಿದ್ದಾನೆ.

ಡಾಲಿ ಗಜೇಂದ್ರನ ಹಿನ್ನೆಲೆ ಡಾಲಿ ಗಜೇಂದ್ರ ಸರಗಳ್ಳತನ, ದರೋಡೆ, ಚೈನ್ ಸ್ನ್ಯಾಚ್ ಸೇರಿದಂತೆ 35ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಡಾಲಿ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಬಿಡುಗಡೆಯಾದ ದಿನವೇ ಆರು ಸರಗಳ್ಳತನ ಕೃತ್ಯ ಎಸಗಿ ಎಸ್ಕೇಪ್ ಆಗಿದ್ದ. ಬಳಿಕ ಇದೇ ತಿಂಗಳ 12 ರಂದು ಮೂರು ಸರಗಳ್ಳತನ ಕೃತ್ಯಗಳನ್ನು ಎಸಗಿದ್ದ. ಚಂದ್ರಾ ಲೇಔಟ್ ನಲ್ಲಿ ನಡೆದಿದ್ದ ಸರಗಳ್ಳತನ ಕೃತ್ಯದ ಸಂಬಂಧ ಬಂಧಿಸಲ್ಪಟ್ಟಿದ್ದ. ಕೆಪಿ ಅಗ್ರಹಾರ ನಿವಾಸಿಯಾಗಿದ್ದ ಗಜೇಂದ್ರನ ಮೃತದೇಹವನ್ನು ಈಗ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

(gajendra a chain snatcher in judicial custody died in victoria hospital)

Published On - 12:23 pm, Thu, 19 August 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು