ಸಿಲಿಕಾನ್ ಸಿಟಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್

ಬೆಂಗಳೂರು: ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ಪುಲಕೇಶಿ ನಗರದಲ್ಲಿ ನಡೆದಿದೆ. ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಜೆ.ಸಿ.ನಗರದ ನಿವಾಸಿ ಅಬು ಸೂಫಿಯಾ ಗಂಭೀರವಾಗಿ ಗಾಯಗೊಂಡಿದ್ದು, ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಟೀ ಕುಡಿಯುವ ಸಲುವಾಗಿ ತಡರಾತ್ರಿ ಜೆ.ಸಿ.ನಗರದಿಂದ ಪುಲಕೇಶಿ ನಗರಕ್ಕೆ ಅಬು ಸೂಫಿಯಾ ಅಗಮಿಸಿದ್ದ. ರಾತ್ರಿ 11 ಗಂಟೆ ಸುಮಾರಿಗೆ ನಾಲ್ವರು ದುಷ್ಕರ್ಮಿಗಳು ಮಚ್ಚು, ಲಾಂಗುಗಳಿಂದ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ. ಪರಿಚಯಸ್ಥರೇ ಹಲ್ಲೆ ಮಾಡಿರುವ ಸಾಧ್ಯತೆಯಿದೆ. ಗಂಭೀರ ಗಾಯಗೊಂಡ ಅಬುಗೆ ನಿಮ್ಹಾನ್ಸ್ ಅಸ್ಪತ್ರೆಯ ಐಸಿಯುನಲ್ಲಿ […]

ಸಿಲಿಕಾನ್ ಸಿಟಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್
ಸಾಧು ಶ್ರೀನಾಥ್​

Updated on: Jan 17, 2020 | 4:28 PM

ಬೆಂಗಳೂರು: ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ಪುಲಕೇಶಿ ನಗರದಲ್ಲಿ ನಡೆದಿದೆ. ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಜೆ.ಸಿ.ನಗರದ ನಿವಾಸಿ ಅಬು ಸೂಫಿಯಾ ಗಂಭೀರವಾಗಿ ಗಾಯಗೊಂಡಿದ್ದು, ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಟೀ ಕುಡಿಯುವ ಸಲುವಾಗಿ ತಡರಾತ್ರಿ ಜೆ.ಸಿ.ನಗರದಿಂದ ಪುಲಕೇಶಿ ನಗರಕ್ಕೆ ಅಬು ಸೂಫಿಯಾ ಅಗಮಿಸಿದ್ದ. ರಾತ್ರಿ 11 ಗಂಟೆ ಸುಮಾರಿಗೆ ನಾಲ್ವರು ದುಷ್ಕರ್ಮಿಗಳು ಮಚ್ಚು, ಲಾಂಗುಗಳಿಂದ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ. ಪರಿಚಯಸ್ಥರೇ ಹಲ್ಲೆ ಮಾಡಿರುವ ಸಾಧ್ಯತೆಯಿದೆ. ಗಂಭೀರ ಗಾಯಗೊಂಡ ಅಬುಗೆ ನಿಮ್ಹಾನ್ಸ್ ಅಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us