AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಪಾರ್ಶ್ವವಾಯು ಪೀಡಿತರಿಗೆ ಚಿಕಿತ್ಸೆ ನೀಡುತ್ತೇವೆಂದು ಹಣ ಪಡೆದು ವಂಚಿಸಿದ ಗ್ಯಾಂಗ್​

ಪಾರ್ಶ್ವವಾಯು ಪೀಡಿತರಿಗೆ ಚಿಕಿತ್ಸೆ ನೀಡಲು ಉತ್ತರ ಕನ್ನಡ ಜಿಲ್ಲೆಯಲ್ಲಿ ದೊಡ್ಡ ಆಸ್ಪತ್ರೆ ತೆಗೆಯುತ್ತಿದ್ದೆವೆ. ಅದಕ್ಕೂ ಮುನ್ನ ಮನೆ ಮನೆಗೆ ಚಿಕಿತ್ಸೆ ನೀಡಿ ಪ್ರಚಾರ ಮಾಡಲು ನಾವು ಬಂದಿದ್ದೆವೆ. ಪಾರ್ಶ್ವವಾಯುಗೆ ಪೀಡಿತರನ್ನು ಕೇವಲ 40 ದಿನದಲ್ಲಿ ಸರಿ ಮಾಡುತ್ತೇವೆ. ನಾವು ನೀಡುವ ಚಿಕಿತ್ಸೆಯಿಂದ ಬಹಳಷ್ಟು ಜನರು ವಾಸಿಯಾಗಿದ್ದಾರೆ ಎಂದು ಪಾರ್ಶ್ವವಾಯು ಪೀಡಿತರಿಂದ ಸಾವಿರಾರು ರೂಪಾಯಿ ಹಣ ಪಡೆದು ವಂಚಿಸಲಾಗಿದೆ.

ಉತ್ತರ ಕನ್ನಡ: ಪಾರ್ಶ್ವವಾಯು ಪೀಡಿತರಿಗೆ ಚಿಕಿತ್ಸೆ ನೀಡುತ್ತೇವೆಂದು ಹಣ ಪಡೆದು ವಂಚಿಸಿದ ಗ್ಯಾಂಗ್​
ಭಟ್ಕಳ ನಗರ ಪೊಲೀಸ್ ಠಾಣೆ
ವಿನಾಯಕ ಬಡಿಗೇರ್​
| Edited By: |

Updated on: Feb 09, 2024 | 11:54 AM

Share

ಕಾರವಾರ, ಫೆಬ್ರವರಿ 09: ಪಾರ್ಶ್ವವಾಯು (Paralysis) ಪೀಡಿತರಿಗೆ ಚಿಕಿತ್ಸೆ ನೀಡುತ್ತೇವೆಂದು ನಕಲಿ ವೈದ್ಯರ ಗ್ಯಾಂಗ್​ವೊಂದು ರೋಗಿಗಳಿಂದ ಸಾವಿರಾರು ರೂಪಾಯಿ ಹಣ ಪಡೆದು ವಂಚಿಸಿದೆ. ಆರೋಪಿಗಳು ಉತ್ತರ ಕನ್ನಡ (Uttar Kannada) ಜಿಲ್ಲೆಯ ಭಟ್ಕಳ (Batakal), ಹೊನ್ನಾವರ (Honnavar) ತಾಲೂಕಿನಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ವಂಚಿಸಿದ್ದಾರೆ. “ಪಾರ್ಶ್ವವಾಯು ಪೀಡಿತರಿಗೆ ಚಿಕಿತ್ಸೆ ನೀಡಲು ಉತ್ತರ ಕನ್ನಡ ಜಿಲ್ಲೆಯಲ್ಲಿ ದೊಡ್ಡ ಆಸ್ಪತ್ರೆ ತೆಗೆಯುತ್ತಿದ್ದೆವೆ. ಅದಕ್ಕೂ ಮುನ್ನ ಮನೆ ಮನೆಗೆ ಚಿಕಿತ್ಸೆ ನೀಡಿ ಪ್ರಚಾರ ಮಾಡಲು ನಾವು ಬಂದಿದ್ದೆವೆ.

ಪಾರ್ಶ್ವವಾಯುಗೆ ಪೀಡಿತರನ್ನು ಕೇವಲ 40 ದಿನದಲ್ಲಿ ಸರಿ ಮಾಡುತ್ತೇವೆ. ನಾವು ನೀಡುವ ಚಿಕಿತ್ಸೆಯಿಂದ ಬಹಳಷ್ಟು ಜನರು ವಾಸಿಯಾಗಿದ್ದಾರೆ” ಎಂದು ಹೇಳಿಕೊಂಡು ಆರೋಪಿಗಳು ಮನೆ ಮನೆ ಭೇಟಿ ನೀಡಿದ್ದಾರೆ. ಇವರಿಂದ ಚಿಕಿತ್ಸೆ ಪಡೆಯುವವರಿಗೆ “ನಾವೆ ನಿಮಗೆ ಖುದ್ದು ಮಸಾಜ್ ಮಾಡುತ್ತೇವೆ, ನಾವು ಔಷಧಿ ಕೊಡುತ್ತೇವೆ. ಅದನ್ನು ತೆಗೆದುಕೊಂಡು ನಾವು ಹೇಳಿದ ಹಾಗೆ ಆಸನಗಳನ್ನ ಮಾಡಿದರೆ, ಕೆವಲ 40 ದಿನದಲ್ಲಿ ಪಾರ್ಶ್ವ ವಾಯು ಪಿಡಿತರನ್ನ ಸರಿ ಮಾಡುತ್ತೇವೆ. ವೈದ್ಯರು ನೀಡಿದ ಔಷಧಿ ಪಡೆಯಬೇಡಿ” ಎಂದು ಜನರನ್ನ ನಂಬಿಸಿ ಸಾವಿರಾರು ರೂಪಾಯಿ ಪಡೆದು ಆರೋಪಿಗಳು ಪರಾರಿ ಆಗಿದ್ದಾರೆ. ರೋಗಿಗಳು ವೈದ್ಯರು ನೀಡಿದ ಔಷಧಿ ತೆಗೆದುಕೊಳ್ಳದೆ ಆರೋಗ್ಯ ಇನ್ನಷ್ಟು ಹಾಳಾಗುತ್ತಿದೆ. ಆರೋಪಿಗಳು ಚಿಕ್ಸಿತ್ಸೆ ನೀಡಿದೆ ಹಣ ಪಡೆದು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಯುವಕರಲ್ಲಿ ಉಂಟಾಗುವ ಪಾರ್ಶ್ವವಾಯುವಿನಲ್ಲಿ ಒತ್ತಡ, ಹೈಪರ್​ಟೆನ್ಷನ್ ಪಾತ್ರವೇನು?

ಭಟ್ಕಳ ನಗರದ ಖಾಸಗಿ ಶಾಲಾ ಶಿಕ್ಷಕ ಪದ್ಮಯ್ಯ ಎಂಬುವವರ ತಾಯಿಗೆ ಪಾರ್ಶ್ವ ವಾಯು ಆಗಿತ್ತು. ಇವರಿಗೆ ತಮ್ಮ ಮೋಡಿಯ ಮಾತುಗಳಿಂದ ನಂಬಿಸಿ ಕೇವಲ ಎರಡೆ ದಿನದಲ್ಲಿ 26 ಸಾವಿರ ಪಡೆದು ಪರಾರಿಯಾಗಿದ್ದಾರೆ. ವಂಚಕರ ಚಲನ-ವಲನಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಂಚನೆಗೊಳಗಾದ ಶಿಕ್ಷಕ ಪದ್ಮಯ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಮಗೆ ಆದ ವಂಚನೆ ಬೇರೆ ಯಾರಿಗೂ ಆಗಬಾರದು. ಹಣದ ಜೊತೆಗೆ ರೋಗಿಗಳ ಆರೋಗ್ಯವು ಹಾಳು ಮಾಡುತ್ತಾರೆ. ವಂಚಕರನ್ನು ಆದಷ್ಟು ಬೇಗ ಬಂಧಿಸುವಂತೆ ಪದ್ಮಯ್ಯ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ