ಕೇರಳ: ಸಿನಿಮಾ ಶೈಲಿಯಲ್ಲಿ ಕಾರು ಸುತ್ತುವರಿದು 2.5 ಕೆಜಿ ಚಿನ್ನಾಭರಣ ದರೋಡೆ; ವಿಡಿಯೊ ವೈರಲ್

ಈ ಕೃತ್ಯವು ಖಾಸಗಿ ಬಸ್ಸೊಂದರ ಡ್ಯಾಶ್‌ಕ್ಯಾಮ್ ನಲ್ಲಿ ಸೆರೆಯಾಗಿದ್ದು,  ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಯ ಬದಿಯಲ್ಲಿ ಹೆದ್ದಾರಿ ಕಿರಿದಾದಾಗ ಕನಿಷ್ಠ ಮೂರು ಎಸ್‌ಯುವಿಗಳು ವಾಹನವೊಂದನ್ನು ಸುತ್ತುವರಿದು ದರೋಡೆ ನಡೆಸುತ್ತಿರುವುದು ವಿಡಿಯೊದಲ್ಲಿದೆ.

ಕೇರಳ: ಸಿನಿಮಾ ಶೈಲಿಯಲ್ಲಿ ಕಾರು ಸುತ್ತುವರಿದು 2.5 ಕೆಜಿ ಚಿನ್ನಾಭರಣ ದರೋಡೆ; ವಿಡಿಯೊ ವೈರಲ್
ಹಾಡಹಗಲೇ ರಸ್ತೆಯಲ್ಲಿ ಚಿನ್ನ ದೋಚಿ ದರೋಡೆ
Follow us
|

Updated on: Sep 27, 2024 | 6:18 PM

ತಿರುವನಂತಪುರಂ ಸೆಪ್ಟೆಂಬರ್ 27: ಕೇರಳದ ಪೀಚಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 12 ಸದಸ್ಯರ ತಂಡವೊಂದು ಹಗಲು ದರೋಡೆ ನಡೆಸಿದ್ದು, ಕಾರನ್ನು ಅಡ್ಡಗಟ್ಟಿ ಇಬ್ಬರನ್ನು ಅಪಹರಿಸಿ ಸುಮಾರು 2.5 ಕೆಜಿ ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ಕೃತ್ಯವು ಖಾಸಗಿ ಬಸ್ಸೊಂದರ ಡ್ಯಾಶ್‌ಕ್ಯಾಮ್ ನಲ್ಲಿ ಸೆರೆಯಾಗಿದ್ದು,  ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಯ ಬದಿಯಲ್ಲಿ ಹೆದ್ದಾರಿ ಕಿರಿದಾದಾಗ ಕನಿಷ್ಠ ಮೂರು ಎಸ್‌ಯುವಿಗಳು ವಾಹನವೊಂದನ್ನು ಸುತ್ತುವರಿದು ದರೋಡೆ ನಡೆಸುತ್ತಿರುವುದು ವಿಡಿಯೊದಲ್ಲಿದೆ.

ಬುಧವಾರ ಕೊಯಮತ್ತೂರಿನ ಆಭರಣ ತಯಾರಿಕಾ ಕೇಂದ್ರದಿಂದ ತ್ರಿಶೂರ್‌ಗೆ ಬಂದಿದ್ದ ಚಿನ್ನದ ವ್ಯಾಪಾರಿ ಅರುಣ್‌ ಸನ್ನಿ ಮತ್ತು ಆತನ ಸ್ನೇಹಿತ ರೆಜಿ ಥಾಮಸ್‌ ಅವರು ಪ್ರಯಾಣಿಸುತ್ತಿದ್ದ ಕಾರನ್ನು ನಿಲ್ಲಿಸಿ ಎಸ್ ಯುವಿಯಲ್ಲಿ ಬಂದ ದುಷ್ಕರ್ಮಿಗಳು ಚಿನ್ನಾಭರಣ ದೋಚಿದ್ದರು. ಬಳಿಕ ಅರುಣ್ ಸನ್ನಿ ಅವರ ಕಾರನ್ನು ಗ್ಯಾಂಗ್ ಹೈಜಾಕ್ ಮಾಡಿ ಪರಾರಿಯಾಗಿದ್ದಾರೆ.

ಕುದಿರಾನ್ ಹೆದ್ದಾರಿಯ ಕಲ್ಲಿಡುಕ್ ಎಂಬಲ್ಲಿ ಕಾರನ್ನು ನಿಲ್ಲಿಸಿ ಚಿನ್ನಾಭರಣ ದೋಚಿರುವ ಸಿಸಿಟಿವಿ ದೃಶ್ಯಾವಳಿ ಪೊಲೀಸರಿಗೆ ಸಿಕ್ಕಿದೆ. ದರೋಡೆಯ ದೃಶ್ಯಗಳು ಖಾಸಗಿ ಬಸ್‌ನ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಲೂಟಿ ಸಿನಿಮಾ ಶೈಲಿಯಲ್ಲಿತ್ತು. ಮೂರು ಕಾರುಗಳಲ್ಲಿ ಹತ್ತು ಸದಸ್ಯರ ಗುಂಪು ಈ ಕೃತ್ಯವೆಸಗಿತ್ತು. ಬುಧವಾರ ಬೆಳಗ್ಗೆ ಹನ್ನೊಂದು ಗಂಟೆಗೆ ಈ ಘಟನೆ ನಡೆದಿದೆ.

ಸಿನಿಮಾ ಶೈಲಿಯಲ್ಲಿ ಲೂಟಿ

ಎರಡು ಇನ್ನೋವಾ ಹಾಗೂ ಇನ್ನೊಂದು ವಾಹನ ಅರುಣ್ ಸನ್ನಿ ಕಾರನ್ನು ಹಿಂಬಾಲಿಸಿದೆ. ಅರುಣ್ ಕಾರಿನ ಮುಂದೆ ಇನ್ನೋವಾ ನಿಂತಿತ್ತು. ಅದರ ಬದಿಯಲ್ಲಿ ಎರಡನೇ ಇನ್ನೋವಾ ಮತ್ತು ಕಾರಿನ ಹಿಂದೆ ಮೂರನೇ ವಾಹನ ನಿಂತಿತ್ತು. ವಾಹನಗಳಿಂದ ಹೊರ ಬಂದ ದುಷ್ಕರ್ಮಿಗಳು ಅರುಣ್ ಸನ್ನಿಯ ಕಾರಿಗೆ ನುಗ್ಗಿದರು. ವಿಡಿಯೊದಲ್ಲಿ, ಅರುಣ್ ಮತ್ತು ರೆಜಿ ಅವರನ್ನು ಚಾಕು ಮತ್ತು ಸುತ್ತಿಗೆಯಿಂದ ಬೆದರಿಸಿ ಇನ್ನೊಂದು ವಾಹನಕ್ಕೆ ಹತ್ತುವಂತೆ ಬಲಪ್ರಯೋಗಿಸುತ್ತಿರುವುದು ವಿಡಿಯೊದಲ್ಲಿದೆ.

ದಾಳಿಕೋರರು ತಮ್ಮ ಮುಖಗಳನ್ನು ಮರೆಮಾಚಿಕೊಂಡು ಅಲಪ್ಪುಳ ಸ್ಥಳೀಯರ ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಅರುಣ್ ಹೇಳಿಕೆ ನೀಡಿದ್ದಾರೆ.

ಅಪಹರಣಕ್ಕೊಳಗಾಗಿದ್ದ ಕಾರು ಕುಟ್ಟನೆಲ್ಲೂರು ಪ್ರದೇಶವನ್ನು ಬಿಟ್ಟಿಲ್ಲ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಆಗ ಪುಚ್ಚಟ್ಟಿ ಪ್ರದೇಶದ ಖಾಲಿ ಮೈದಾನದಲ್ಲಿ ಕಾರು ಬಿದ್ದಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಒಲ್ಲೂರು ಪೊಲೀಸರು ಹಾಗೂ ಪೀಚಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪೀಚಿ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Crime News: 70 ವರ್ಷದ ಅರ್ಚಕನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆಮೇಲೆ ಆತ ಮಾಡಿದ್ದೇನು ಗೊತ್ತಾ?

ಘಟನೆಗೆ ಸಂಬಂಧಿಸಿದಂತೆ ಬುಧವಾರ ದೂರು ಸ್ವೀಕರಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಎಫ್‌ಐಆರ್‌ನಲ್ಲಿರುವ ದೂರುಗಳು ಅವರನ್ನು ಥಳಿಸಿ ₹ 1.84 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಗ್ಯಾಂಗ್ ದೋಚಿದೆ ಎಂದು ಆರೋಪಿಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ