AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೋಟಿ ವಿಮೆ ಹಣಕ್ಕಾಗಿ ಓರ್ವನ ಮರ್ಡರ್​: ಖತರ್ನಾಕ್​ ಜಾಲ ಭೇದಿಸಿದ ಖಾಕಿ

5 ಕೋಟಿ 25 ಲಕ್ಷ ರೂಪಾಯಿಗಳ ವಿಮೆ ಹಣಕ್ಕಾಗಿ ವ್ಯಕ್ತಿಯನ್ನ ಕೊಲೆ ಮಾಡಿ, ಅದನ್ನ ಅಪಘಾತ ಎಂದು ಬಿಂಬಿಸಿದ್ದ ಗ್ಯಾಂಗ್​ ಅಂದರ್​ ಆಗಿದೆ. ಓರ್ವ ಮಹಿಳೆ ಸೇರಿ 6 ಜನ ಆರೋಪಿಗಳನ್ನ ಹೊಸಪೇಟೆ ಪೊಲೀಸರು ಹೆಡೆಮುರಿ ಕಟ್ಟಿದ್ದು, ಆರೋಪಿಗಳ ಪ್ಲ್ಯಾನ್​ ಎಂತವರ ಎದೆಯನ್ನೂ ಒಮ್ಮೆ ನಡುಗಿಸುವಂತಿದೆ.

5 ಕೋಟಿ ವಿಮೆ ಹಣಕ್ಕಾಗಿ ಓರ್ವನ ಮರ್ಡರ್​: ಖತರ್ನಾಕ್​ ಜಾಲ ಭೇದಿಸಿದ ಖಾಕಿ
ಆರೋಪಿಗಳ ಬಂಧನ
ವಿನಾಯಕ ಬಡಿಗೇರ್​
| Edited By: |

Updated on:Oct 03, 2025 | 4:46 PM

Share

ಬಳ್ಳಾರಿ, ಅಕ್ಟೋಬರ್​ 03: ಅನಾಥರು ಮತ್ತು ತೀವ್ರ ಅನಾರೋಗ್ಯ ಪೀಡಿತರ ಹೆಸರಲ್ಲಿ ಕೋಟ್ಯಂತ ರೂಪಾಯಿ ವಿಮೆ ಮಾಡಿಸಿ, ವಿಮೆ ಹಣಕ್ಕಾಗಿ ಸಿನಿಮಾ ಸ್ಟೈಲ್​ನಲ್ಲಿ ಕೊಲೆ ಮಾಡುತ್ತಿದ್ದ ಜಾಲವೊಂದನ್ನ ಹೊಸಪೇಟೆ (Hospet) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ಶುರೆನ್ಸ್​ ಹಣಕ್ಕಾಗಿ ಕೊಲೆ ಮಾಡಿ, ಅದನ್ನ ಅಪಘಾತ ಎಂದು ಈ ಗ್ಯಾಂಗ್​ ಬಿಂಬಿಸುತ್ತಿತ್ತು ಎಂಬ ಆಘಾತಕಾರಿ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದ್ದು, ಓರ್ವ ಮಹಿಳೆ ಸೇರಿ 6 ಜನರನ್ನ ಅರೆಸ್ಟ್​ ಮಾಡಲಾಗಿದೆ.

ಕಳೆದ ತಿಂಗಳ ಸೆಪ್ಟೆಂಬರ್​ 28ರಂದು ಸಂಜೆ 6 ಗಂಟೆ ಸುಮಾರಿಗೆ ಸಂಡೂರು ರಸ್ತೆಯ ಎಚ್‌ಎಲ್‌ಸಿ ಕೆನಾಲ್ ಬಳಿ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಕೌಲ್‌ಪೇಟೆ ನಿವಾಸಿ ಗಂಗಾಧರ ಕೆ. ಎಂಬುವವರು ಮೃತಪಟ್ಟಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ್ದ ಸಂಚಾರಿ ಠಾಣೆ ಪೊಲೀಸರು, ಮೋಟರ್​ ಸೈಕಲ್​ ಬಿದ್ದಿದ್ದು ಸೇರಿ ಹಲವು ಅಂಶಗಳನ್ನ ಗಮನಿಸಿ ಇದು ಕೊಲೆಯಾಗಿರಬಹುದು ಎಂದು ಅನುಮಾನಿಸಿದ್ದರು. ಮೃತನ ಗುರುತು ಪತ್ತೆಯಾಗುತ್ತಿದ್ದಂತೆ ಆತನ ಪತ್ನಿ ಶಾರದಾಳನ್ನ ಕರೆಸಿ ಈ ಬಗ್ಗೆ ವಿಚಾರಣೆ ಮಾಡಲಾಗಿದೆ. ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ ಶಾರದಾ, ಗಂಗಾಧರ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ರೋಗಿಯಾಗಿದ್ದರು. ನಡೆದಾಡಲೂ ಕಷ್ಟ ಎಂಬ ಸ್ಥಿತಿಯಲ್ಲಿದ್ದ ಅವರು, ಮೋಟರ್​ ಸೈಕಲ್ ಓಡಿಸುವುದಾದರೂ ಹೇಗೆ? ಅವರ ಬಳಿ ದ್ವಿಚಕ್ರ ವಾಹನವೇ ಇಲ್ಲ ಎಂಬ ವಿಷಯ ತಿಳಿಸಿದ್ದಾರೆ. ಈ ವೇಳೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದನ್ನೂ ಓದಿ: ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಮಹಿಳೆ

ಖತರ್ನಾಕ್​ ಪ್ಲ್ಯಾನ್​

ಇದೊಂದು ಕೊಲೆ ಎಂದು ಗೊತ್ತಾಗುತ್ತಿದ್ದಂತೆ ಪ್ರಕರಣದ ಬೆನ್ನತ್ತಿದ ಪೊಲೀಸರು 6 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿ ಕೃಷ್ಣಪ್ಪ, ಹೊಸಲಿಂಗಾಪುರದ ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಹೊಸಪೇಟೆ ನಿವಾಸಿಗಳಾದ ಅಜಯ್, ರಿಯಾಜ್, ಯೋಗರಾಜ್ ಸಿಂಗ್, ಹಾಗೂ ಹುಲಿಗೆಮ್ಮ ಬಂಧಿತ ಆರೋಪಿಗಳಾಗಿದ್ದಾರೆ. ಗಂಗಾಧರ್​ ಗೆ 5 ಕೋಟಿ 25 ಲಕ್ಷ ರೂಪಾಯಿಗಳ ವಿಮೆ ಮಾಡಿಸಿದ್ದ ಗ್ಯಾಂಗ್​, ನಾಮಿನ ಹಣ ಪಡೆಯಲು ರಿಜಿಸ್ಟರ್​ ಮ್ಯಾರೇಜ್​ ನ ನಕಲಿ ದಾಖಲೆಯನ್ನೂ ಸೃಷ್ಟಿ ಮಾಡಿತ್ತು ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:46 pm, Fri, 3 October 25

Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ