AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೋಟಿ ವಿಮೆ ಹಣಕ್ಕಾಗಿ ಓರ್ವನ ಮರ್ಡರ್​: ಖತರ್ನಾಕ್​ ಜಾಲ ಭೇದಿಸಿದ ಖಾಕಿ

5 ಕೋಟಿ 25 ಲಕ್ಷ ರೂಪಾಯಿಗಳ ವಿಮೆ ಹಣಕ್ಕಾಗಿ ವ್ಯಕ್ತಿಯನ್ನ ಕೊಲೆ ಮಾಡಿ, ಅದನ್ನ ಅಪಘಾತ ಎಂದು ಬಿಂಬಿಸಿದ್ದ ಗ್ಯಾಂಗ್​ ಅಂದರ್​ ಆಗಿದೆ. ಓರ್ವ ಮಹಿಳೆ ಸೇರಿ 6 ಜನ ಆರೋಪಿಗಳನ್ನ ಹೊಸಪೇಟೆ ಪೊಲೀಸರು ಹೆಡೆಮುರಿ ಕಟ್ಟಿದ್ದು, ಆರೋಪಿಗಳ ಪ್ಲ್ಯಾನ್​ ಎಂತವರ ಎದೆಯನ್ನೂ ಒಮ್ಮೆ ನಡುಗಿಸುವಂತಿದೆ.

5 ಕೋಟಿ ವಿಮೆ ಹಣಕ್ಕಾಗಿ ಓರ್ವನ ಮರ್ಡರ್​: ಖತರ್ನಾಕ್​ ಜಾಲ ಭೇದಿಸಿದ ಖಾಕಿ
ಆರೋಪಿಗಳ ಬಂಧನ
ವಿನಾಯಕ ಬಡಿಗೇರ್​
| Updated By: ಪ್ರಸನ್ನ ಹೆಗಡೆ|

Updated on:Oct 03, 2025 | 4:46 PM

Share

ಬಳ್ಳಾರಿ, ಅಕ್ಟೋಬರ್​ 03: ಅನಾಥರು ಮತ್ತು ತೀವ್ರ ಅನಾರೋಗ್ಯ ಪೀಡಿತರ ಹೆಸರಲ್ಲಿ ಕೋಟ್ಯಂತ ರೂಪಾಯಿ ವಿಮೆ ಮಾಡಿಸಿ, ವಿಮೆ ಹಣಕ್ಕಾಗಿ ಸಿನಿಮಾ ಸ್ಟೈಲ್​ನಲ್ಲಿ ಕೊಲೆ ಮಾಡುತ್ತಿದ್ದ ಜಾಲವೊಂದನ್ನ ಹೊಸಪೇಟೆ (Hospet) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ಶುರೆನ್ಸ್​ ಹಣಕ್ಕಾಗಿ ಕೊಲೆ ಮಾಡಿ, ಅದನ್ನ ಅಪಘಾತ ಎಂದು ಈ ಗ್ಯಾಂಗ್​ ಬಿಂಬಿಸುತ್ತಿತ್ತು ಎಂಬ ಆಘಾತಕಾರಿ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದ್ದು, ಓರ್ವ ಮಹಿಳೆ ಸೇರಿ 6 ಜನರನ್ನ ಅರೆಸ್ಟ್​ ಮಾಡಲಾಗಿದೆ.

ಕಳೆದ ತಿಂಗಳ ಸೆಪ್ಟೆಂಬರ್​ 28ರಂದು ಸಂಜೆ 6 ಗಂಟೆ ಸುಮಾರಿಗೆ ಸಂಡೂರು ರಸ್ತೆಯ ಎಚ್‌ಎಲ್‌ಸಿ ಕೆನಾಲ್ ಬಳಿ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಕೌಲ್‌ಪೇಟೆ ನಿವಾಸಿ ಗಂಗಾಧರ ಕೆ. ಎಂಬುವವರು ಮೃತಪಟ್ಟಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ್ದ ಸಂಚಾರಿ ಠಾಣೆ ಪೊಲೀಸರು, ಮೋಟರ್​ ಸೈಕಲ್​ ಬಿದ್ದಿದ್ದು ಸೇರಿ ಹಲವು ಅಂಶಗಳನ್ನ ಗಮನಿಸಿ ಇದು ಕೊಲೆಯಾಗಿರಬಹುದು ಎಂದು ಅನುಮಾನಿಸಿದ್ದರು. ಮೃತನ ಗುರುತು ಪತ್ತೆಯಾಗುತ್ತಿದ್ದಂತೆ ಆತನ ಪತ್ನಿ ಶಾರದಾಳನ್ನ ಕರೆಸಿ ಈ ಬಗ್ಗೆ ವಿಚಾರಣೆ ಮಾಡಲಾಗಿದೆ. ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ ಶಾರದಾ, ಗಂಗಾಧರ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ರೋಗಿಯಾಗಿದ್ದರು. ನಡೆದಾಡಲೂ ಕಷ್ಟ ಎಂಬ ಸ್ಥಿತಿಯಲ್ಲಿದ್ದ ಅವರು, ಮೋಟರ್​ ಸೈಕಲ್ ಓಡಿಸುವುದಾದರೂ ಹೇಗೆ? ಅವರ ಬಳಿ ದ್ವಿಚಕ್ರ ವಾಹನವೇ ಇಲ್ಲ ಎಂಬ ವಿಷಯ ತಿಳಿಸಿದ್ದಾರೆ. ಈ ವೇಳೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದನ್ನೂ ಓದಿ: ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಮಹಿಳೆ

ಖತರ್ನಾಕ್​ ಪ್ಲ್ಯಾನ್​

ಇದೊಂದು ಕೊಲೆ ಎಂದು ಗೊತ್ತಾಗುತ್ತಿದ್ದಂತೆ ಪ್ರಕರಣದ ಬೆನ್ನತ್ತಿದ ಪೊಲೀಸರು 6 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿ ಕೃಷ್ಣಪ್ಪ, ಹೊಸಲಿಂಗಾಪುರದ ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಹೊಸಪೇಟೆ ನಿವಾಸಿಗಳಾದ ಅಜಯ್, ರಿಯಾಜ್, ಯೋಗರಾಜ್ ಸಿಂಗ್, ಹಾಗೂ ಹುಲಿಗೆಮ್ಮ ಬಂಧಿತ ಆರೋಪಿಗಳಾಗಿದ್ದಾರೆ. ಗಂಗಾಧರ್​ ಗೆ 5 ಕೋಟಿ 25 ಲಕ್ಷ ರೂಪಾಯಿಗಳ ವಿಮೆ ಮಾಡಿಸಿದ್ದ ಗ್ಯಾಂಗ್​, ನಾಮಿನ ಹಣ ಪಡೆಯಲು ರಿಜಿಸ್ಟರ್​ ಮ್ಯಾರೇಜ್​ ನ ನಕಲಿ ದಾಖಲೆಯನ್ನೂ ಸೃಷ್ಟಿ ಮಾಡಿತ್ತು ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:46 pm, Fri, 3 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ