KBK ರಾಜ್ಯಾಧ್ಯಕ್ಷನ ಮನೆ ಮುಂದೆ ಪುಡಿ ರೌಡಿಗಳ ದಾಂಧಲೆ

ಬೆಂಗಳೂರು: ರಾಜಗೋಪಾಲನಗರದ ಕಸ್ತೂರಿ ಬಡಾವಣೆಯಲ್ಲಿ ತಡರಾತ್ರಿ ಕರ್ನಾಟಕ ಬಹುಜನ ಕ್ರಾಂತಿದಳದ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮನೆ ಮುಂದೆ ಲಾಂಗು, ಮಚ್ಚುಗಳಿಂದ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳ ಮೇಲೆ ನಾಲ್ಕೈದು ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ. ಮಧ್ಯರಾತ್ರಿ 1.30ರ ಸುಮಾರಿಗೆ ಕಾರಿನಲ್ಲಿ ಎಂಟ್ರಿ ಕೊಟ್ಟ 4-5 ದುಷ್ಕರ್ಮಿಗಳ ಗ್ಯಾಂಗ್ ಎರಡು ಕಾರುಗಳನ್ನು ಜಖಂಗೊಳಿಸಿದ್ದಾರೆ. ಕೆಬಿಕೆ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮತ್ತು ಮಧುಕರ್ ಎಂಬುವರಿಗೆ ಸೇರಿದ ಕಾರುಗಳು. ಪುಡಿರೌಡಿಗಳ ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ […]

KBK ರಾಜ್ಯಾಧ್ಯಕ್ಷನ ಮನೆ ಮುಂದೆ ಪುಡಿ ರೌಡಿಗಳ ದಾಂಧಲೆ
ಸಾಧು ಶ್ರೀನಾಥ್​

Updated on: Jan 19, 2020 | 1:37 PM

ಬೆಂಗಳೂರು: ರಾಜಗೋಪಾಲನಗರದ ಕಸ್ತೂರಿ ಬಡಾವಣೆಯಲ್ಲಿ ತಡರಾತ್ರಿ ಕರ್ನಾಟಕ ಬಹುಜನ ಕ್ರಾಂತಿದಳದ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮನೆ ಮುಂದೆ ಲಾಂಗು, ಮಚ್ಚುಗಳಿಂದ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳ ಮೇಲೆ ನಾಲ್ಕೈದು ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ.

ಮಧ್ಯರಾತ್ರಿ 1.30ರ ಸುಮಾರಿಗೆ ಕಾರಿನಲ್ಲಿ ಎಂಟ್ರಿ ಕೊಟ್ಟ 4-5 ದುಷ್ಕರ್ಮಿಗಳ ಗ್ಯಾಂಗ್ ಎರಡು ಕಾರುಗಳನ್ನು ಜಖಂಗೊಳಿಸಿದ್ದಾರೆ. ಕೆಬಿಕೆ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮತ್ತು ಮಧುಕರ್ ಎಂಬುವರಿಗೆ ಸೇರಿದ ಕಾರುಗಳು. ಪುಡಿರೌಡಿಗಳ ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



 

Published On - 12:30 pm, Sun, 19 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us