AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆ, ಆರೋಪಿಗಳು ಅಂದರ್

ಬೆಳಗಾವಿ: ಬಟ್ಟೆ ವ್ಯಾಪಾರಿಯನ್ನು ನಗ್ನ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸಹ ಇದ್ದಾನೆ. ಆಯೇಷಾ ಶೇಖ್, ಹೀನಾ ಅಕ್ಬರ್ ಸವಣೂರ, ಅಲೀಶಾನ್ ಶಾಬುದ್ದೀನ್, ಅಖೀಬ್ ಅಲ್ಲಾಭಕ್ಷ್ ಬೇಪಾರಿ ಮತ್ತು ಸಲ್ಮಾನ್ ಗುಲಾಜ್‌ಬೇಗ್ ಬಂಧಿತರು. ವ್ಯಾಪಾರಿ ಎಂ.ಎಂ. ಮುಜಾವರ್ ಬಳಿ ಆರೋಪಿ ಆಯೇಷಾ ₹6 ಲಕ್ಷ ಪಡೆದಿದ್ದರು. […]

ಹಣ ನೀಡದಿದ್ರೆ  ರೇಪ್ ಕೇಸ್ ದಾಖಲಿಸುವ ಬೆದರಿಕೆ, ಆರೋಪಿಗಳು ಅಂದರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 04, 2019 | 10:32 AM

Share

ಬೆಳಗಾವಿ: ಬಟ್ಟೆ ವ್ಯಾಪಾರಿಯನ್ನು ನಗ್ನ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ನೀಡದಿದ್ರೆ ರೇಪ್ ಕೇಸ್ ದಾಖಲಿಸುವ ಬೆದರಿಕೆಯೊಡ್ಡಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸಹ ಇದ್ದಾನೆ.

ಆಯೇಷಾ ಶೇಖ್, ಹೀನಾ ಅಕ್ಬರ್ ಸವಣೂರ, ಅಲೀಶಾನ್ ಶಾಬುದ್ದೀನ್, ಅಖೀಬ್ ಅಲ್ಲಾಭಕ್ಷ್ ಬೇಪಾರಿ ಮತ್ತು ಸಲ್ಮಾನ್ ಗುಲಾಜ್‌ಬೇಗ್ ಬಂಧಿತರು.

ವ್ಯಾಪಾರಿ ಎಂ.ಎಂ. ಮುಜಾವರ್ ಬಳಿ ಆರೋಪಿ ಆಯೇಷಾ ₹6 ಲಕ್ಷ ಪಡೆದಿದ್ದರು. ಹಣ ನೀಡುವುದಾಗಿ ಮನೆಗೆ ಕರೆಸಿಕೊಂಡು ಕೂಡಿಹಾಕಿದ್ರು. ಆ ವೇಳೆ ಅವರನ್ನ ನಗ್ನಗೊಳಿಸಿದ ಆಯೇಷಾ ಗ್ಯಾಂಗ್, 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದೆ. ಹಣ ನೀಡದಿದ್ರೆ ಅತ್ಯಾಚಾರ ಪ್ರಕರಣ ದಾಖಲಿಸುವ ಬೆದರಿಕೆಯನ್ನೂ ಹಾಕಿದ್ದಾರೆ.

ಮನೆಗೆ ಹೋಗಿ ಹಣವನ್ನು ತರುವುದಾಗಿ ಹೇಳಿದ್ದ ವ್ಯಾಪಾರಿ, ಅವರಿಂದ ತಪ್ಪಿಸಿಕೊಂಡು ಬಂದು ಮಾಳಮಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವ್ಯಾಪಾರಿಯ ದೂರು ಆಧರಿಸಿ 6 ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ