AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ

ಅತ್ಯಾಚಾರವೆಸಗಿದ ಮೂವರು ಕೂಡ ಬಾಲಕರಾಗಿದ್ದಾರೆ. ಮೂವರು ಸಂತ್ರಸ್ತೆಯನ್ನು ಪುಸಲಾಯಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇನ್ನು ಕಿರಾತಕರು ಅತ್ಯಾಚಾರವೆಸಗಿದನ್ನು ವಿಡಿಯೋ ಮಾಡಿಕೊಂಡು ವೈರಲ್​​ ಮಾಡಿದ್ದಾರೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ
ಮದ್ದೂರು ಪೊಲೀಸ್​ ಠಾಣೆ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on: Nov 10, 2023 | 12:53 PM

Share

ಮಂಡ್ಯ ನ.10: ಮದ್ದೂರು (Madduru) ಪಟ್ಟಣ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ (17) ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಅತ್ಯಾಚಾರವೆಸಗಿದ ಮೂವರು ಕೂಡ ಬಾಲಕರಾಗಿದ್ದಾರೆ. ಮೂವರು ಸಂತ್ರಸ್ತೆಯನ್ನು ಪುಸಲಾಯಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇನ್ನು ಕಿರಾತಕರು ಅತ್ಯಾಚಾರವೆಸಗಿದನ್ನು ವಿಡಿಯೋ ಮಾಡಿಕೊಂಡು ವೈರಲ್​​ ಮಾಡಿದ್ದಾರೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆ ತಂದೆ ದೂರಿನ ಆಧಾರದ ಮೇಲೆ ಪೊಲೀಸರು ಮೂವರನ್ನು ಬಂಧಸಿದ್ದಾರೆ. ಮೂವರು ಬಾಲಕರಾಗಿದ್ದು, ಮದ್ದೂರು ಮೂಲದವರು ಎಂದು ತಿಳಿದುಬಂದಿದೆ.

ಮೈಸೂರಿನ ಯುವ ದಸರಾದಲ್ಲಿ ಪರಿಚಯವಾಗಿದ್ದ ಸಂತ್ರಸ್ತೆ

ಅತ್ಯಾಚಾರವೆಸಗಿದ ಮೂವರಲ್ಲಿ ಓರ್ವ, ಸಂತ್ರಸ್ತೆಯನ್ನು ಮೈಸೂರಿನ ಯುವ ದಸರಾದಲ್ಲಿ ಪರಿಚಯಸಿಕೊಂಡಿದ್ದನು. ಬಳಿಕ ಬಾಲಕ, ಸಂಸತ್ರಸ್ತೆಯೊಂದಿಗೆ ಸಲುಗೆಯಿಂದ ವರ್ತಿಸಲು ಆರಂಭಿಸಿದನು. ಅಲ್ಲದೆ ಪ್ರೀತಿಸುತ್ತಿರುವುದಾಗಿ ನಂಬಿಸಿದನು. ಆನಂತರ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್ ಕರೆದುಕೊಂಡು ಹೋಗಿ ಬಾಲಕ ಮತ್ತು ಆತನ ಸ್ನೇಹಿತರು ಸಾಮೂಹಿಕ ಆತ್ಯಾಚಾರವೆಸಗಿದ್ದಾರೆ.

ಇದನ್ನೂ ಓದಿ: ಮಹಿಳೆಯ ಮನೆಯ ದರೋಡೆ ಮಾಡಿ, ಕೆಲಸದಾಕೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರು ಸೆಕ್ಯುರಿಟಿ ಗಾರ್ಡ್​ಗಳ ಬಂಧನ

ಈ ವೇಳೆ ಆರೋಪಿಗಳು ಆತ್ಯಾಚಾರದ ದೃಶ್ಯವನ್ನು ಮೊಬೈಲ್​ನಲ್ಲಿ ಸರೆಹಿಡಿದಿದ್ದಾರೆ. ಬಳಿಕ ಅಪ್ರಾಪ್ತೆ ಮೊಬೈಲ್​ಗೆ ವಿಡಿಯೋ ಕಳುಹಿಸಿ ಕರೆದಾಗೆಲ್ಲ ಬರುವಂತೆ ಬ್ಯ್ಲಾಕ್​ಮೇಲ್​ ಮಾಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೋಷಕರು ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆತ್ಯಾಚಾರ, ಪೋಕ್ಸೊ, ಆಟ್ರಾಸಿಟಿ ಸೆಕ್ಷನ್ ಅಡಿ‌ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು