AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ

ಅತ್ಯಾಚಾರವೆಸಗಿದ ಮೂವರು ಕೂಡ ಬಾಲಕರಾಗಿದ್ದಾರೆ. ಮೂವರು ಸಂತ್ರಸ್ತೆಯನ್ನು ಪುಸಲಾಯಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇನ್ನು ಕಿರಾತಕರು ಅತ್ಯಾಚಾರವೆಸಗಿದನ್ನು ವಿಡಿಯೋ ಮಾಡಿಕೊಂಡು ವೈರಲ್​​ ಮಾಡಿದ್ದಾರೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ
ಮದ್ದೂರು ಪೊಲೀಸ್​ ಠಾಣೆ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on: Nov 10, 2023 | 12:53 PM

Share

ಮಂಡ್ಯ ನ.10: ಮದ್ದೂರು (Madduru) ಪಟ್ಟಣ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ (17) ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಅತ್ಯಾಚಾರವೆಸಗಿದ ಮೂವರು ಕೂಡ ಬಾಲಕರಾಗಿದ್ದಾರೆ. ಮೂವರು ಸಂತ್ರಸ್ತೆಯನ್ನು ಪುಸಲಾಯಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇನ್ನು ಕಿರಾತಕರು ಅತ್ಯಾಚಾರವೆಸಗಿದನ್ನು ವಿಡಿಯೋ ಮಾಡಿಕೊಂಡು ವೈರಲ್​​ ಮಾಡಿದ್ದಾರೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆ ತಂದೆ ದೂರಿನ ಆಧಾರದ ಮೇಲೆ ಪೊಲೀಸರು ಮೂವರನ್ನು ಬಂಧಸಿದ್ದಾರೆ. ಮೂವರು ಬಾಲಕರಾಗಿದ್ದು, ಮದ್ದೂರು ಮೂಲದವರು ಎಂದು ತಿಳಿದುಬಂದಿದೆ.

ಮೈಸೂರಿನ ಯುವ ದಸರಾದಲ್ಲಿ ಪರಿಚಯವಾಗಿದ್ದ ಸಂತ್ರಸ್ತೆ

ಅತ್ಯಾಚಾರವೆಸಗಿದ ಮೂವರಲ್ಲಿ ಓರ್ವ, ಸಂತ್ರಸ್ತೆಯನ್ನು ಮೈಸೂರಿನ ಯುವ ದಸರಾದಲ್ಲಿ ಪರಿಚಯಸಿಕೊಂಡಿದ್ದನು. ಬಳಿಕ ಬಾಲಕ, ಸಂಸತ್ರಸ್ತೆಯೊಂದಿಗೆ ಸಲುಗೆಯಿಂದ ವರ್ತಿಸಲು ಆರಂಭಿಸಿದನು. ಅಲ್ಲದೆ ಪ್ರೀತಿಸುತ್ತಿರುವುದಾಗಿ ನಂಬಿಸಿದನು. ಆನಂತರ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್ ಕರೆದುಕೊಂಡು ಹೋಗಿ ಬಾಲಕ ಮತ್ತು ಆತನ ಸ್ನೇಹಿತರು ಸಾಮೂಹಿಕ ಆತ್ಯಾಚಾರವೆಸಗಿದ್ದಾರೆ.

ಇದನ್ನೂ ಓದಿ: ಮಹಿಳೆಯ ಮನೆಯ ದರೋಡೆ ಮಾಡಿ, ಕೆಲಸದಾಕೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರು ಸೆಕ್ಯುರಿಟಿ ಗಾರ್ಡ್​ಗಳ ಬಂಧನ

ಈ ವೇಳೆ ಆರೋಪಿಗಳು ಆತ್ಯಾಚಾರದ ದೃಶ್ಯವನ್ನು ಮೊಬೈಲ್​ನಲ್ಲಿ ಸರೆಹಿಡಿದಿದ್ದಾರೆ. ಬಳಿಕ ಅಪ್ರಾಪ್ತೆ ಮೊಬೈಲ್​ಗೆ ವಿಡಿಯೋ ಕಳುಹಿಸಿ ಕರೆದಾಗೆಲ್ಲ ಬರುವಂತೆ ಬ್ಯ್ಲಾಕ್​ಮೇಲ್​ ಮಾಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೋಷಕರು ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆತ್ಯಾಚಾರ, ಪೋಕ್ಸೊ, ಆಟ್ರಾಸಿಟಿ ಸೆಕ್ಷನ್ ಅಡಿ‌ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!