AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gang Rape: ಡ್ರಗ್ಸ್​ ನೀಡಿ ನ್ಯಾಯಾಧೀಶರಿಂದಲೇ ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ!

Crime News Today: ಕಳೆದ 1 ತಿಂಗಳಿನಿಂದ ಎಸಿಬಿ ವಿಶೇಷ ನ್ಯಾಯಾಧೀಶ ಮತ್ತಿತರ ಇಬ್ಬರು ನನ್ನ ಮಗನಿಗೆ ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು 14 ವರ್ಷದ ಬಾಲಕನ ತಾಯಿ ಆರೋಪಿಸಿದ್ದಾರೆ.

Gang Rape: ಡ್ರಗ್ಸ್​ ನೀಡಿ ನ್ಯಾಯಾಧೀಶರಿಂದಲೇ ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ!
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 01, 2021 | 6:57 PM

Share

ಜೈಪುರ: 14 ವರ್ಷದ ಅಪ್ರಾಪ್ತ ಬಾಲಕನ ಮೇಲೆ ನ್ಯಾಯಾಧೀಶರೇ ಅತ್ಯಾಚಾರ ನಡೆಸಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ರಾಜಸ್ಥಾನದ ಭರತ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ವಿಶೇಷ ನ್ಯಾಯಾಧೀಶರು ಸೇರಿ ಮೂವರು 14 ವರ್ಷ ವಯಸ್ಸಿನ ಹುಡುಗನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಅತ್ಯಾಚಾರ ಸಂತ್ರಸ್ತನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ 1 ತಿಂಗಳಿನಿಂದ ಎಸಿಬಿ ವಿಶೇಷ ನ್ಯಾಯಾಧೀಶ ಮತ್ತಿತರ ಇಬ್ಬರು ನನ್ನ ಮಗನಿಗೆ ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ಮಗ ಟೆನ್ನಿಸ್ ಆಡಲು ಒಂದು ಕ್ರೀಡಾಂಗಣಕ್ಕೆ ಹೋಗುತ್ತಿದ್ದ. ಅಲ್ಲಿ ಅನೇಕ ಪೋಲಿಸ್ ಅಧಿಕಾರಿಗಳು ಮತ್ತು ನ್ಯಾಯಾಧೀಶರು ಸಹ ಆಡಲು ಬರುತ್ತಿದ್ದರು. ಆರೋಪಿ ನ್ಯಾಯಾಧೀಶರಾದ ಜಿತೇಂದ್ರ ಸಿಂಗ್ ಗೋಲಿಯ ಮತ್ತಿತರ ಇಬ್ಬರು ಅಧಿಕಾರಿಗಳು ನನ್ನ ಮಗನನ್ನು ಕ್ರೀಡಾಂಗಣದಿಂದ ಮನೆಗೆ ಕರೆದುಕೊಂಡು ಹೋಗಿ ಅಲ್ಲಿ ಕೆಲವು ಮಾದಕದ್ರವ್ಯದ ವಸ್ತುಗಳನ್ನು ನೀಡಿ ಆತನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತನ ತಾಯಿ ಆರೋಪಿಸಿದ್ದಾರೆ.

ಎಸಿಬಿ ಸರ್ಕಲ್ ಆಫೀಸರ್ ಪರಮೇಶ್ವರ್ ಲಾಲ್ ಯಾದವ್ ಹಾಗೂ ಕಟಾರಾ ಕೂಡ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಈ ವಿಷಯ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರುಗಳ ಆಧಾರದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಇತರರ ಮೇಲೆ ಅತ್ಯಾಚಾರ ಮತ್ತು ಇತರ ಆರೋಪಗಳ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Crime News: ಹೋಂ ವರ್ಕ್ ಮಾಡದ 7ನೇ ಕ್ಲಾಸ್​ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ!

Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!

Published On - 6:56 pm, Mon, 1 November 21

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ