AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gang Rape: ಡ್ರಗ್ಸ್​ ನೀಡಿ ನ್ಯಾಯಾಧೀಶರಿಂದಲೇ ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ!

Crime News Today: ಕಳೆದ 1 ತಿಂಗಳಿನಿಂದ ಎಸಿಬಿ ವಿಶೇಷ ನ್ಯಾಯಾಧೀಶ ಮತ್ತಿತರ ಇಬ್ಬರು ನನ್ನ ಮಗನಿಗೆ ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು 14 ವರ್ಷದ ಬಾಲಕನ ತಾಯಿ ಆರೋಪಿಸಿದ್ದಾರೆ.

Gang Rape: ಡ್ರಗ್ಸ್​ ನೀಡಿ ನ್ಯಾಯಾಧೀಶರಿಂದಲೇ ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ!
ಸಾಂಕೇತಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Nov 01, 2021 | 6:57 PM

Share

ಜೈಪುರ: 14 ವರ್ಷದ ಅಪ್ರಾಪ್ತ ಬಾಲಕನ ಮೇಲೆ ನ್ಯಾಯಾಧೀಶರೇ ಅತ್ಯಾಚಾರ ನಡೆಸಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ರಾಜಸ್ಥಾನದ ಭರತ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ವಿಶೇಷ ನ್ಯಾಯಾಧೀಶರು ಸೇರಿ ಮೂವರು 14 ವರ್ಷ ವಯಸ್ಸಿನ ಹುಡುಗನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಅತ್ಯಾಚಾರ ಸಂತ್ರಸ್ತನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ 1 ತಿಂಗಳಿನಿಂದ ಎಸಿಬಿ ವಿಶೇಷ ನ್ಯಾಯಾಧೀಶ ಮತ್ತಿತರ ಇಬ್ಬರು ನನ್ನ ಮಗನಿಗೆ ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ಮಗ ಟೆನ್ನಿಸ್ ಆಡಲು ಒಂದು ಕ್ರೀಡಾಂಗಣಕ್ಕೆ ಹೋಗುತ್ತಿದ್ದ. ಅಲ್ಲಿ ಅನೇಕ ಪೋಲಿಸ್ ಅಧಿಕಾರಿಗಳು ಮತ್ತು ನ್ಯಾಯಾಧೀಶರು ಸಹ ಆಡಲು ಬರುತ್ತಿದ್ದರು. ಆರೋಪಿ ನ್ಯಾಯಾಧೀಶರಾದ ಜಿತೇಂದ್ರ ಸಿಂಗ್ ಗೋಲಿಯ ಮತ್ತಿತರ ಇಬ್ಬರು ಅಧಿಕಾರಿಗಳು ನನ್ನ ಮಗನನ್ನು ಕ್ರೀಡಾಂಗಣದಿಂದ ಮನೆಗೆ ಕರೆದುಕೊಂಡು ಹೋಗಿ ಅಲ್ಲಿ ಕೆಲವು ಮಾದಕದ್ರವ್ಯದ ವಸ್ತುಗಳನ್ನು ನೀಡಿ ಆತನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತನ ತಾಯಿ ಆರೋಪಿಸಿದ್ದಾರೆ.

ಎಸಿಬಿ ಸರ್ಕಲ್ ಆಫೀಸರ್ ಪರಮೇಶ್ವರ್ ಲಾಲ್ ಯಾದವ್ ಹಾಗೂ ಕಟಾರಾ ಕೂಡ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಈ ವಿಷಯ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರುಗಳ ಆಧಾರದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಇತರರ ಮೇಲೆ ಅತ್ಯಾಚಾರ ಮತ್ತು ಇತರ ಆರೋಪಗಳ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Crime News: ಹೋಂ ವರ್ಕ್ ಮಾಡದ 7ನೇ ಕ್ಲಾಸ್​ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ!

Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!

Published On - 6:56 pm, Mon, 1 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ