AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಗ್ಯಾಂಗ್​ಸ್ಟರ್​ನನ್ನು ಹೊಡೆದು ಕೊಂದ ವೈದ್ಯರು

ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಹೋಗಿದ್ದ ಗ್ಯಾಂಗ್​ಸ್ಟರ್​ನನ್ನು ವೈದ್ಯರು ಹಾಗೂ ಆಸ್ಪತ್ರೆಯ ಇತರೆ ಸಿಬ್ಬಂದಿ ಸೇರಿ ಹೊಡೆದು ಕೊಂದಿರುವ ಘಟನೆ ಬಿಹಾರದ ಬೇಗುಸರಾಯ್​ನಲ್ಲಿ ನಡೆದಿದೆ. ಘಟನೆಯ ನಂತರ ಆ ಗ್ಯಾಂಗ್​ಸ್ಟರ್​ನ ಅನುಯಾಯಿಗಳು ಆಸ್ಪತ್ರೆ ಹಾಗೂ ವೈದ್ಯರಿಗೆ ಸಂಬಂಧಿಸಿದ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಾರೆ.

ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಗ್ಯಾಂಗ್​ಸ್ಟರ್​ನನ್ನು ಹೊಡೆದು ಕೊಂದ ವೈದ್ಯರು
ಸಾವು
ನಯನಾ ರಾಜೀವ್
|

Updated on: Nov 10, 2023 | 11:20 AM

Share

ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಹೋಗಿದ್ದ ಗ್ಯಾಂಗ್​ಸ್ಟರ್​ನನ್ನು ವೈದ್ಯರು ಹಾಗೂ ಆಸ್ಪತ್ರೆಯ ಇತರೆ ಸಿಬ್ಬಂದಿ ಸೇರಿ ಹೊಡೆದು ಕೊಂದಿರುವ ಘಟನೆ ಬಿಹಾರದ ಬೇಗುಸರಾಯ್​ನಲ್ಲಿ ನಡೆದಿದೆ. ಘಟನೆಯ ನಂತರ ಆ ಗ್ಯಾಂಗ್​ಸ್ಟರ್​ನ ಅನುಯಾಯಿಗಳು ಆಸ್ಪತ್ರೆ ಹಾಗೂ ವೈದ್ಯರಿಗೆ ಸಂಬಂಧಿಸಿದ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಾರೆ.

ಗ್ಯಾಂಗ್​ಸ್ಟರ್ ಚಂದನ್ ಕುಮಾರ್ ಚಿಕಿತ್ಸೆಗೆಂದು ರೂಪನಗರ ಗ್ರಾಮದ ರಿಯಾ ಆಸ್ಪತ್ರೆಗೆ ಹೋಗಿದ್ದ, ವೈದ್ಯರೊಂದಿಗೆ ವಾಗ್ವಾದಕ್ಕಿಳಿದ ಬಳಿಕ ಆತನನ್ನು ವೈದ್ಯರು ಹಾಗೂ ಆಸ್ಪತ್ರೆಯ ಇತರೆ ಸಿಬ್ಬಂದಿ ಸೇರಿ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ವೈದ್ಯರು ಮತ್ತು ಇತರ ಸಿಬ್ಬಂದಿ ಹತ್ಯೆಗೆ ಸಂಚು ರೂಪಿಸಿದ್ದರು ಮತ್ತು ಗ್ಯಾಂಗ್​ಸ್ಟರ್​ನನ್ನು ಕೊಲ್ಲಲು ಹರಿತವಾದ ವಸ್ತುಗಳನ್ನು ಬಳಸಿದ್ದರು, ಆರೋಪಿ ವೈದ್ಯನನ್ನು ಅಜಿತ್ ಪಾಸ್ವಾನ್ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಬೆಳಗಾವಿ: ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದು ಸೀರೆ ಕಳ್ಳತನ; ಎಂಟು ಮಂದಿ ಅರೆಸ್ಟ್

ಆತನ ಬೆಂಬಲಿಗರು ಆಸ್ಪತ್ರೆ ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಗ್ಯಾಂಗ್​ಸ್ಟರ್ ಚಿಕಿತ್ಸೆಗೆಂದು ಆಸ್ಪತ್ರೆಗೆ ಭೇಟಿ ನೀಡಿದ್ದ, ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದರು, ಆಗ ಇಬ್ಬರ ನಡುವೆ ವಾಗ್ವಾದ ನಡೆದಿದೆ, ಅದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಎಸ್​ಪಿ ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ.

ಡಿಎಸ್​ಪಿ ಅಮಿತ್ ಕುಮಾರ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ವೈದ್ಯರು ಹಾಗೂ ಕಾಂಪೌಂಡರ್​ನನ್ನು ಬಂಧಿಸಲು ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ