AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಜೈಲಿನಿಂದಲೇ ಕೊರಿಯರ್‌ಗಳ ಮೂಲಕ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ; ಗ್ಯಾಂಗ್‌ಸ್ಟರ್ ವಿರುದ್ಧ ಪ್ರಕರಣ ದಾಖಲು

ಸಾಗರ್ ಪುನಿತ್ ಬೈನ್ಸ್ ಗ್ಯಾಂಗ್ ಜೊತೆ ಸಂಬಂಧ ಹೊಂದಿದ್ದಾನೆ. ಈ ಹಿಂದೆಯೂ ಜೈಲಿನೊಳಗಿಂದ ಶಸ್ತ್ರಾಸ್ತ್ರ ಕಳ್ಳಸಾಗಣೆ ನಡೆಸಿರುವ ಘಟನೆ ನಡೆದಿದೆ. ಈತ ಜೈಲಿನಲ್ಲಿ ಕುಳಿತು ಶಸ್ತ್ರಾಸ್ತ್ರ ಕಳ್ಳಸಾಗಣೆದಾರನಾಗಿ ಕೆಲಸ ಮಾಡುತ್ತಾನೆ. ಯುವಕರು ಇನ್ಸ್ಟಾಗ್ರಾಮ್ ಮೂಲಕ ಸಾಗರ್ ಸಂಪರ್ಕಕ್ಕೆ ಬರುತ್ತಿದ್ದರು.

ಪಂಜಾಬ್: ಜೈಲಿನಿಂದಲೇ ಕೊರಿಯರ್‌ಗಳ ಮೂಲಕ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ; ಗ್ಯಾಂಗ್‌ಸ್ಟರ್ ವಿರುದ್ಧ ಪ್ರಕರಣ ದಾಖಲು
ಜೈಲು
ರಶ್ಮಿ ಕಲ್ಲಕಟ್ಟ
|

Updated on: Dec 18, 2023 | 5:40 PM

Share

ಲುಧಿಯಾನ ಡಿಸೆಂಬರ್ 18:  ಮಧ್ಯಪ್ರದೇಶದಿಂದ (Madhya pradesh) ಕೊರಿಯರ್‌ಗಳ ಮೂಲಕ ಅಕ್ರಮ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಗ್ಯಾಂಗ್‌ಸ್ಟರ್ ಸಾಗರ್ ನ್ಯೂಟ್ರಾನ್ (Sagar neutron) ವಿರುದ್ಧ ಲುಧಿಯಾನ (Ludhiana) ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಗ್ಯಾಂಗ್​​ಸ್ಟರ್​​ನ್ನು ವಿಚಾರಣೆಗಾಗಿ ಪ್ರೊಡಕ್ಷನ್ ವಾರಂಟ್ ಮೇಲೆ ಗೋಯಿಂಡ್ವಾಲ್ ಜೈಲಿನಿಂದ ಕರೆತಂದಿದ್ದಾರೆ. ಗ್ಯಾಂಗ್ ಸ್ಟರ್ ನ್ಯೂಟ್ರಾನ್ ಯುವಕರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕಿಸುತ್ತಿದ್ದ ಮತ್ತು ನಂತರ ಅಪರಾಧ ಜಗತ್ತಿನಲ್ಲಿ ತೊಡಗಿಸಿಕೊಂಡಿದ್ದ ಎಂಬುದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.

ಡಿಸೆಂಬರ್ 10 ರಂದು ಲೂಧಿಯಾನ ಪೊಲೀಸ್ ಕಮಿಷನರೇಟ್‌ನ ಸಿಐಎ-1 ಆರೋಪಿಯನ್ನು 6 ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸಿದೆ ಎಂದು ಹೇಳಲಾಗುತ್ತಿದೆ. ಈ ಆರೋಪಿಗಳಿಂದ 4 ಅಕ್ರಮ 32 ಬೋರ್ ಪಿಸ್ತೂಲ್, 14 ಲೈವ್ ಕಾಟ್ರಿಡ್ಜ್, 51 ಗ್ರಾಂ ಹೆರಾಯಿನ್ ಹಾಗೂ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳ ವಿಚಾರಣೆ ವೇಳೆ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಸೂಚನೆ ಮೇರೆಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಸಾಗಾಟ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೈನ್ಸ್ ತಂಡದ ಸದಸ್ಯ

ಸಾಗರ್ ಪುನಿತ್ ಬೈನ್ಸ್ ಗ್ಯಾಂಗ್ ಜೊತೆ ಸಂಬಂಧ ಹೊಂದಿದ್ದಾನೆ. ಈ ಹಿಂದೆಯೂ ಜೈಲಿನೊಳಗಿಂದ ಶಸ್ತ್ರಾಸ್ತ್ರ ಕಳ್ಳಸಾಗಣೆ ನಡೆಸಿರುವ ಘಟನೆ ನಡೆದಿದೆ. ಇದಕ್ಕೂ ಮೊದಲು ಫೆಬ್ರವರಿ 17 ರಂದು ಲುಧಿಯಾನ ಪೊಲೀಸರು ಮುನೀಶ್ ಅಲಿಯಾಸ್ ಲಾಲು ಮತ್ತು ಅನಿಕೇತ್ ತಲ್ವಾರ್ ಅವರನ್ನು 6 ಅಕ್ರಮ ಪಿಸ್ತೂಲ್‌ಗಳು, 8 ಮ್ಯಾಗಜೀನ್‌ಗಳು ಮತ್ತು 12 ಲೈವ್ ಕಾರ್ಟ್ರಿಡ್ಜ್‌ಗಳೊಂದಿಗೆ ಬಂಧಿಸಿದ್ದರು. ಆ ಸಮಯದಲ್ಲಿ ಸಾಗರ್‌ನನ್ನು ಪಂಜಾಬ್‌ನ ಹೆಚ್ಚಿನ ಭದ್ರತೆಯ ನಭಾ ಜೈಲಿನಲ್ಲಿ ಇರಿಸಲಾಗಿತ್ತು. ಇಂದೋರ್‌ನಿಂದ ಶಸ್ತ್ರಾಸ್ತ್ರಗಳನ್ನು ತರಲು ಈತ ಸಹಚರರನ್ನು ಕಳುಹಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿಪುಣೆ: ಹೋಟೆಲ್‌ನಿಂದ ಮೊಟ್ಟೆ ಕದ್ದಿದ್ದಾರೆ ಎಂದು ಶಂಕಿಸಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ

ಸಾಗರ್ ಜೈಲಿನಲ್ಲಿ ಕುಳಿತು ಶಸ್ತ್ರಾಸ್ತ್ರ ಕಳ್ಳಸಾಗಣೆದಾರನಾಗಿ ಕೆಲಸ ಮಾಡುತ್ತಾನೆ. ಯುವಕರು ಇನ್ಸ್ಟಾಗ್ರಾಮ್ ಮೂಲಕ ಸಾಗರ್ ಸಂಪರ್ಕಕ್ಕೆ ಬರುತ್ತಿದ್ದರು. ಸಾಗರ್ ಅವರಿಗೆ ಹಣದ ಆಮಿಷವೊಡ್ಡುತ್ತಾನೆ ಮತ್ತು ತನಗಾಗಿ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡುವಂತೆ ಕೇಳುತ್ತಾನೆ.. ಆರೋಪಿಗಳು ಕಳ್ಳಸಾಗಣೆ ಮಾಡಿದ ಶಸ್ತ್ರಾಸ್ತ್ರಗಳನ್ನು ಸಾಗರ್ ಅವರ ಕೆಲವು ಆಪ್ತರಿಗೆ ಹಸ್ತಾಂತರಿಸುವ ಮೊದಲು, ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ