ಅಪ್ರಾಪ್ತ ಬಾಲಕಿಯ ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಆ ಬಾಲಕಿಗೆ ಪರಿಚಯವಿದ್ದ, ಆತನೇ ಕರೆ ಮಾಡಿ ಆಕೆಯನ್ನು ಕರೆಸಿಕೊಂಡು ಸ್ನೇಹಿತನ ಜತೆ ಸೇರಿ ಅಪಹರಿಸಿದ್ದ. ಸ್ಮಶಾನಕ್ಕೆ ಕರೆದೊಯ್ದರೆ ಆಕಡೆಗೆ ಯಾರೂ ಬರುವುದಿಲ್ಲವೆಂದು ಅಲ್ಲಿಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ದೂರಿನ ಆಧಾರದ ಮೇಲೆ ಅಶ್ರಫ್ ಹಾಗೂ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ
ಅಪಹರಣ
Image Credit source: iStock

Updated on: Mar 27, 2025 | 11:12 AM

ಗಾಜಿಯಾಬಾದ್, ಮಾರ್ಚ್​ 27: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಆ ಬಾಲಕಿಗೆ ಪರಿಚಯವಿದ್ದ, ಆತನೇ ಕರೆ ಮಾಡಿ ಆಕೆಯನ್ನು ಕರೆಸಿಕೊಂಡು ಸ್ನೇಹಿತನ ಜತೆ ಸೇರಿ ಅಪಹರಿಸಿದ್ದ. ಸ್ಮಶಾನಕ್ಕೆ ಕರೆದೊಯ್ದರೆ ಆ ಕಡೆಗೆ ಯಾರೂ ಬರುವುದಿಲ್ಲವೆಂದು ಅಲ್ಲಿಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ದೂರಿನ ಆಧಾರದ ಮೇಲೆ ಅಶ್ರಫ್ ಹಾಗೂ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಮೋದಿ ನಗರದ ನಿವಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಲ್ಲಿ ಒಬ್ಬರು ಬಾಲಕಿಯನ್ನು ನೀರಿನ ಟ್ಯಾಂಕ್ ಬಳಿ ಕರೆದರು ಮತ್ತು ಸಂತ್ರಸ್ತೆ ಅಲ್ಲಿಗೆ ತಲುಪಿದಾಗ, ಆರೋಪಿ ಮತ್ತು ಆತನ ಸ್ನೇಹಿತ ಆಕೆಯನ್ನು ತಮ್ಮ ಮೋಟಾರ್ ಸೈಕಲ್‌ನಲ್ಲಿ ಬಲವಂತವಾಗಿ ಸ್ಮಶಾನಕ್ಕೆ ಕರೆದೊಯ್ದರು. ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಮತ್ತೊಬ್ಬ ಆರೋಪಿ ಸುತ್ತಮುತ್ತಲಿನ ಪ್ರದೇಶದ ಮೇಲೆ ಕಣ್ಣಿಟ್ಟಿದ್ದ.

ಸಂತ್ರಸ್ತೆ ಕೂಗಾಡಿದಾಗ ಆರೋಪಿ ಆಕೆಯ ಬಾಯಿಯನ್ನು ಬಟ್ಟೆಯಿಂದ ಮುಚ್ಚಿ ಥಳಿಸಿದ್ದಾನೆ ಎಂದು ಅವರು ಹೇಳಿದರು. ಆರೋಪಿಗಳು ಸಂತ್ರಸ್ತೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಗ್ರಾಮೀಣ) ಸುರೇಂದ್ರ ನಾಥ್ ತಿವಾರಿ ತಿಳಿಸಿದ್ದಾರೆ.

ಇದನ್ನೂ ಓದಿ
ತೋಟಕ್ಕೆ ಬಂದಿದ್ದ ಬಾಲಕಿಯನ್ನ ಗುಡ್ಡಕ್ಕೆ ಕರೆದ ಮಾಲೀಕ: ಪೋಕ್ಸೋ ಕೇಸ್ ದಾಖಲು
ಬೆಳಗಾವಿ: ಸಾರ್ವಜನಿಕವಾಗಿ ಬಟ್ಟೆ ಹರಿದು ಅತ್ತೆ ಮೇಲೆ ಅಳಿಯನಿಂದ ಹಲ್ಲೆ
ಗರ್ಭಿಣಿಯಾಗಿದ್ದಾಗ್ಲೇ ಬೇರೊಬ್ಬನ ಓಡಿಹೋಗಿದ್ದ ಮಹಿಳೆ, ಮಗುವಿನ ಕೊಂದ ಮಲತಂದೆ
ರೈಲ್ವೆ ನಿಲ್ದಾಣದಲ್ಲಿ ಬಾಲಕಿ ಮತ್ತವಳ ತಂದೆಯ ಹತ್ಯೆಗೈದು, ತಾನೂ ಆತ್ಮಹತ್ಯೆ

ಮತ್ತಷ್ಟು ಓದಿ: ದೆಹಲಿ: 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಮಾಡಿದ ಸ್ನೇಹಿತರು

ಸಂತ್ರಸ್ತೆ ತನ್ನ ಮೇಲೆ ನಡೆದ ದೌರ್ಜನ್ಯವನ್ನು ತನ್ನ ಪೋಷಕರಿಗೆ ವಿವರಿಸಿದಾಗ ಅವರು ತಕ್ಷಣ ಆಕೆಯನ್ನು ನಿವಾರಿ ಪೊಲೀಸ್ ಠಾಣೆಗೆ ಕರೆತಂದು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅವರು ಹೇಳಿದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ತಿವಾರಿ ಹೇಳಿದರು. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಅತ್ಯಾಚಾರ ಘಟನೆ ನಡೆದಿದೆ.

ಬಲ್ಲಿಯಾ ಜಿಲ್ಲೆಯ ಬನ್ಸ್ದಿಹ್ ಪ್ರದೇಶದಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಕೆಯ ಚಿಕ್ಕಪ್ಪನನ್ನು ಬಂಧಿಸಲಾಗಿದೆ. ಮಾರ್ಚ್ 21 ರಂದು ಬನ್ಸ್ದಿಹ್ ಕೊಟ್ವಾಲಿ ಪ್ರದೇಶದ ಹಳ್ಳಿಯಲ್ಲಿ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

ನಂತರ ಆಕೆಯ ಚಿಕ್ಕಪ್ಪ ಆಕೆಯ ಮೇಲೆ ಅತ್ಯಾಚಾರ ಎಸಗಿದರು. ಈ ಪ್ರಕರಣದಲ್ಲಿ, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ, ಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಹಲ್ಲೆಗಾಗಿ ಪ್ರಕರಣ ದಾಖಲಿಸಲಾಗಿದ್ದು, ಸೋಮವಾರ ಆತನನ್ನು ಬಂಧಿಸಲಾಗಿದೆ ಎಂದು ಕೊತ್ವಾಲಿಯ ಉಸ್ತುವಾರಿ ಸಂಜಯ್ ಸಿಂಗ್ ತಿಳಿಸಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಇದೇ ರೀತಿಯ ಪ್ರಕರಣ ಕಂಡುಬಂದಿತ್ತು.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us