AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಿಯಾಬಾದ್: ಮೂರನೇ ಮಹಡಿಯಿಂದ ಪತ್ನಿಯನ್ನು ತಳ್ಳಿ ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ

ಪತಿ ಪತ್ನಿ ನಡುವೆ ಜಗಳ ನಡೆದಿದ್ದು, ಅದು ತಾರಕಕ್ಕೇರಿ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 3ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಬಳಿಕ ಮಹಿಳೆ ಸಾವನ್ನಪ್ಪಿದ್ದು, ಆರೋಪಿ ವಿಕಾಸ್​ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ, ಪೊಲೀಸರ ಪ್ರಕಾರ ಗೋವಿಂದಪುರಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.

ಗಾಜಿಯಾಬಾದ್: ಮೂರನೇ ಮಹಡಿಯಿಂದ ಪತ್ನಿಯನ್ನು ತಳ್ಳಿ ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Jan 28, 2024 | 9:10 AM

Share

ಪತಿ ಪತ್ನಿ ನಡುವೆ ಜಗಳ ನಡೆದಿದ್ದು, ಅದು ತಾರಕಕ್ಕೇರಿ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 3ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಬಳಿಕ ಮಹಿಳೆ ಸಾವನ್ನಪ್ಪಿದ್ದು, ಆರೋಪಿ ವಿಕಾಸ್​ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ, ಪೊಲೀಸರ ಪ್ರಕಾರ ಗೋವಿಂದಪುರಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.

ಪಾರ್ಕಿಂಗ್ ಗುತ್ತಿಗೆದಾರರಾದ ಕುಮಾರ್ ಅವರು ಮದ್ಯದ ಅಮಲಿನಲ್ಲಿ ಮನೆಗೆ ಬಂದಿದ್ದ ಮತ್ತು 30 ರ ಹರೆಯದ ಅವರ ಪತ್ನಿ ಜತೆಗೆ ತೀವ್ರ ಜಗಳವಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯನ್ನು ಮೂರನೇ ಮಹಡಿಯಿಂದ ಎಸೆದ ನಂತರ, ಆತನೇ ಪತ್ನಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದನು, ಅಲ್ಲಿ ವೈದ್ಯರು ಆಕೆ ಸತ್ತಿದ್ದಾಳೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಬಾಗಲಕೋಟೆ: ಆಸ್ತಿಗಾಗಿ ಅಪ್ಪನನ್ನೇ ಕೊಲೆ ಮಾಡಿಸಿದ್ದ ಮಗ, ಸೊಸೆ ಅರೆಸ್ಟ್

ಪೊಲೀಸರಿಗೆ ಮಾಹಿತಿ ನೀಡುವಂತೆ ವೈದ್ಯರು ಸಿಬ್ಬಂದಿಯನ್ನು ಕೇಳಿದಾಗ ಕುಮಾರ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಕೆಲವು ಗಂಟೆಗಳ ನಂತರ ಆತನನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ನಾವು ಕುಮಾರ್ ವಿರುದ್ಧ ಕೊಲೆ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಅವರನ್ನು ಶನಿವಾರ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ