AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದ್ದ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಲ್ಲಿ 5 ಲಕ್ಷ ರೂ. ಮಾಲು ವಾಪಸ್ ಮಾಲೀಕರಿಗೆ ಕೊರಿಯರ್ ಮಾಡಿದ ಕಳ್ಳರು!

ಕದ್ದ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಲ್ಲಿ ಕಳ್ಳರು 5 ಲಕ್ಷ ರೂ. ಮಾಲು ಮಾಲೀಕರಿಗೆ ವಾಪಸ್ ಕೊರಿಯರ್ ಮಾಡಿರುವ ವಿಚಿತ್ರ ಘಟನೆ ವರದಿಯಾಗಿದೆ.

ಕದ್ದ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಲ್ಲಿ 5 ಲಕ್ಷ ರೂ. ಮಾಲು ವಾಪಸ್ ಮಾಲೀಕರಿಗೆ ಕೊರಿಯರ್ ಮಾಡಿದ ಕಳ್ಳರು!
Thieves Return stolen jewelry via courier
TV9 Web
| Edited By: |

Updated on: Nov 02, 2022 | 9:54 PM

Share

ಗಾಜಿಯಾಬಾದ್: ಕೆಲ ಕಳ್ಳರು ಹೇಗಿರ್ತಾರೆ? ಅವರು ಯಾಕೆ ಕಳ್ಳತನ ಮಾಡುತ್ತಾರೆ ಎನ್ನುವುದು ಊಹಿಸಲು ಅಸಾಧ್ಯ. ಯಾಕಂದ್ರೆ ಬೆಂಗಳೂರಿನಲ್ಲೊಬ್ಬ ಉಳ್ಳವರ ಮನೆಗೆ ಕನ್ನ ಹಾಕಿ ದಾನ ಧರ್ಮ ಮಾಡುತ್ತಿದ್ದ. ಇನ್ನು ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಿದ ವಸ್ತುಗಳನ್ನು ವಾರಸುದಾರರಿಗೆ ಕೋರಿಯರ್ ಮೂಲಕ ವಾಪಸ್ ಕಳುಹಿಸಿದ್ದಾರೆ. ಆದ್ರೆ, ಕದ್ದಿರುವ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣದಲ್ಲಿ ಕೇವಲ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾಪಸ್ ಕಳುಹಿಸಿದ್ದಾರೆ.

ಹೌದು… ಅಚ್ಚರಿ ಅನ್ನಿಸಿದರೂ ಸತ್ಯ. ಕಳ್ಳತನ ಮಾಡಿದ ವಸ್ತುಗಳನ್ನು ಕಳ್ಳರು ಕೊರಿಯರ್ ಮೂಲಕ ವಾಪಾಸ್ ಕಳುಹಿಸಿದ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಗಾಜಿಯಾಬಾದ್​ನ ರಾಜ್‍ನಗರದ ಫಾರ್ಚೂನ್ ಅಪಾರ್ಟ್‍ಮೆಂಟ್‍ನಲ್ಲಿ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳರು ವಾಪಾಸ್ ಕಳುಹಿಸಿದ್ದು ಕೇವಲ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು.

ಬೆಂಗಳೂರಿನಲ್ಲೊಬ್ಬ ರಾಬಿನ್ ಹುಡ್: ಉಳ್ಳವರ ಮನೆಗೆ ಕನ್ನ ಹಾಕಿ ದಾನ ಧರ್ಮ ಮಾಡುತ್ತಿದ್ದ ಕಳ್ಳನ ಬಂಧನ

ಅ.23ರಂದು ದೀಪಾವಳಿ ಹಿನ್ನೆಲೆಯಲ್ಲಿ ಮನೆ ಲಾಕ್ ಮಾಡಿಕೊಂಡು ಕುಟುಂಬದವರು ಹುಟ್ಟೂರಿಗೆ ತೆರಳಿದ್ದರು. ಅ.27ರಂದು ಸಂಜೆ ಬಂದು ನೋಡಿದಾಗ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಆ ಬಳಿಕ ಮನೆ ಮಾಲೀಕರಾದ ಪ್ರೀತಿ ಸಿರೋಹಿ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ನಂದಗ್ರಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಬಗ್ಗೆ ಮಾಧ್ಯಮದಲ್ಲಿ ಸುದ್ದಿ ಪ್ರಕಟವಾದ ಬಳಿಕ ಅ. 31ರಂದು ಸಂತ್ರಸ್ತರಿಗೆ ಕೊರಿಯರ್‌ ಬಂದಿದೆ. ಕೋರಿಯರ್​ನಲ್ಲಿ ಮನೆಯಲ್ಲಿ ಕಳ್ಳತನವಾದ ಚಿನ್ನಾಭರಣಗಳು ಇದ್ದವು. ಕಳುಹಿಸಿದವರ ವಿಳಾಸ ನೋಡಿದಾಗ ರಾಜದೀಪ್ ಜ್ಯುವೆಲ್ಲರ್ಸ್, ಸರಾಫ್ ಬಝಾರ್, ಹಾಪುರ ಎಂಬ ವಿಳಾಸ ಇತ್ತು. ಇದನ್ನು ತೆರೆದು ನೋಡಿದಾಗ ನಮ್ಮದೇ ಪೆಟ್ಟಿಗೆಯಲ್ಲಿದ್ದ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಇದ್ದವು. ಉಳಿದ ಆಭರಣ ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ಪ್ರೀತಿ ಸಿರೋಹಿ ಅವರ ಮಗ ಹರ್ಷ ಹೇಳಿದ್ದಾರೆ. ಘಟನೆ ಬಗ್ಗೆ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!