AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಲವರ್ ಜೊತೆ ಹೆಂಡತಿ ರೂಂನಲ್ಲಿದ್ದಾಗ ಮನೆಗೆ ಬಂದ ಗಂಡ; ಆಮೇಲೇನಾಯ್ತು?

ಘಜಿಯಾಬಾದ್​ನಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ರೂಂನಲ್ಲಿ ಸಲ್ಲಾಪದಲ್ಲಿ ತೊಡಗಿದ್ದಾಗ ಆಕೆಯ ಗಂಡ ಇದ್ದಕ್ಕಿದ್ದಂತೆ ಮನೆಗೆ ಬಂದಿದ್ದಾನೆ. ತನ್ನ ಹೆಂಡತಿ ಬೇರೊಬ್ಬನ ಜೊತೆ ಇರುವುದನ್ನು ಕಂಡ ಕೋಪಗೊಂಡ ಆತ ಹೆಂಡತಿಗೆ ಜೋರು ಮಾಡಿದ್ದಾನೆ. ಆದರೆ, ಅವನ ಮಾತಿಗೆ ಹೆದರದ ಆಕೆ ಗಂಡನನ್ನೇ ಥಳಿಸಿದ್ದಾಳೆ.

Shocking News: ಲವರ್ ಜೊತೆ ಹೆಂಡತಿ ರೂಂನಲ್ಲಿದ್ದಾಗ ಮನೆಗೆ ಬಂದ ಗಂಡ; ಆಮೇಲೇನಾಯ್ತು?
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 30, 2024 | 7:58 PM

Share

ಘಜಿಯಾಬಾದ್: ಉತ್ತರ ಪ್ರದೇಶದ ಘಜಿಯಾಬಾದ್‌ನಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಪತಿಗೆ ಥಳಿಸಿದ್ದಾರೆ. ಆ ಮಹಿಳೆ ತನ್ನ ಗಂಡ ಮನೆಯಲ್ಲಿ ಇಲ್ಲದಿದ್ದಾಗ ಪ್ರಿಯಕರನನ್ನು ಮನೆಗೆ ಕರೆಸಿಕೊಂಡಿದ್ದಳು. ಆದರೆ, ಆಕೆಯ ಗಂಡ ಬೇಗನೇ ಮನೆಗೆ ಬಂದಿದ್ದ. ಮನೆಗೆ ಬಂದಾಗ ಆಕೆ ತನ್ನ ಪ್ರೇಮಿಯನ್ನು ಅಪ್ಪಿಕೊಂಡು ಇರುವುದನ್ನು ಕಂಡು ಗಂಡ ಕೋಪಗೊಂಡಿದ್ದ.

ತನ್ನ ಹೆಂಡತಿ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಮಾಹಿತಿ ಸಿಕ್ಕಿ ಬೇಗ ಮನೆಗೆ ಬಂದಿದ್ದ ಗಂಡನ ಕೈಗೆ ಆತನ ಹೆಂಡತಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಳು. ಮನೆಯಿಂದ ಹೊರಗೆ ಆಕೆಯನ್ನು ಕರೆದುಕೊಂಡು ಹೋಗಿ ಎಲ್ಲರ ಮುಂದೆ ಆಕೆಯ ಅವಮಾನ ಮಾಡಿದ್ದ ಗಂಡನ ವಿರುದ್ಧ ಕೋಪಗೊಂಡ ಆಕೆ ತನ್ನ ಪ್ರಿಯಕರನ ಜೊತೆ ಸೇರಿ ಗಂಡನಿಗೆ ಥಳಿಸಿದ್ದಾಳೆ.

ಇದನ್ನೂ ಓದಿ: Shocking News: ನನ್ನ ಆರ್ಡರ್ ಇನ್ನೂ ರೆಡಿ ಆಗಿಲ್ಲವಾ? ಎಂದು ಕೇಳಿದ ಗ್ರಾಹಕನನ್ನು ಕೊಂದ ಹೋಟೆಲ್ ಮಾಲೀಕ!

ಎಲ್ಲರ ಮುಂದೆ ತಾನೇ ತನ್ನ ಗಂಡನಿಗೆ ಕಪಾಳಮೋಕ್ಷ ಮಾಡಲು ಪ್ರಾರಂಭಿಸಿದಳು. ಇದೇ ವೇಳೆ ಮಹಿಳೆಯ ಪ್ರಿಯಕರ ಕೂಡ ಮಹಿಳೆಯ ಪತಿಗೆ ಒದ್ದು ಗುದ್ದಲು ಆರಂಭಿಸಿದ್ದಾನೆ. ಅಲ್ಲಿಗೆ ಬಂದ ಪೊಲೀಸರು ಗಲಾಟೆ ಹೆಚ್ಚುತ್ತಿರುವುದನ್ನು ಕಂಡು ಕೂಡಲೇ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ವಶಕ್ಕೆ ತೆಗೆದುಕೊಂಡರು. ಬಳಿಕ ಮಹಿಳೆಯ ಪತಿ ನೀಡಿದ ದೂರಿನ ಮೇರೆಗೆ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime News: 9 ವರ್ಷದ ಮಗಳ ಮೇಲೆ ತಂದೆಯಿಂದ ಅತ್ಯಾಚಾರ; ಪೊಲೀಸರೆದುರು ದಾರುಣ ಕತೆ ಬಿಚ್ಚಿಟ್ಟ ತಾಯಿ

ಭೂಪೇಂದ್ರಪುರಿ ಕಾಲೋನಿಯಲ್ಲಿ ವಾಸವಾಗಿರುವ ಸಂತ್ರಸ್ತೆಯ ಪತಿ ಪೊಲೀಸರಿಗೆ ಹೇಳಿಕೆ ನೀಡಿದ್ದು, ಟಿಬ್ರಾ ರಸ್ತೆಯಲ್ಲಿ ವಾಸವಾಗಿರುವ ಅಮನ್‌ಕುಮಾರ್‌ ಎಂಬುವವರೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ. ಈ ವಿಚಾರವಾಗಿ ಇಬ್ಬರ ನಡುವೆ ಹಲವು ಬಾರಿ ಜಗಳ ನಡೆದಿದೆ. ಇದನ್ನು ವಿರೋಧಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಗಂಡ ದೂರು ನೀಡಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು