AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯತಮ ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮೆ ಮಸಣ ಸೇರಿದಳು

ಚಿತ್ರದುರ್ಗ: ಅವ್ನು ಸಿನಿಮಾ ಸ್ಟೈಲ್​ನಲ್ಲಿ ಬಂದು ಮದ್ವೆ ಮಾತುಕತೆಗೆ ಅಡ್ಡ ಹಾಕಿದ್ದ. ಅವಳು ಅಪ್ಪಟ ಪ್ರೇಮದಾಸಿಯಾಗಿ ಪೋಷಕರನ್ನ ಒಪ್ಪಿಸಿ ಇನಿಯನ ಜೊತೆ ಮದ್ವೆಗೆ ಸಜ್ಜಾಗಿದ್ಲು. ಆದ್ರೆ ಕೊನೇ ಗಳಿಗೆಯಲ್ಲಿ ಪ್ರಿಯತಮ ಅದೇನ್ ಹೇಳಿದ್ನೋ ಗೊತ್ತಿಲ್ಲ. ಪರಿಣಾಮ ಆಗಿದ್ದು ಮಾತ್ರ ಪ್ರೀತಿಯ ಸಾವು. ಹೀಗೆ ಪ್ರೀತಿಯ ಗುಂಗಲ್ಲಿ ಗುನುಗ್ತಿದ್ಲು.. ಖುಷಿಯ ಅಲೆಯಲ್ಲಿ ತೇಲ್ತಿದ್ಲು.. ರೆಕ್ಕೆ ಬಂದ ಪಕ್ಷಿಯಂತೆ ಹಾರಾಡ್ತಿದ್ಲು.. ಭವಿಷ್ಯದ ಬಗ್ಗೆ ನೂರಾರು ಕನಸು ಕಂಡು ನಾಚಿ ನೀರಾಗ್ತಿದ್ಲು.. ನಿನ್ನ ಒಲವು ಇನ್ನೂ ಬೇಕಾಗಿದೆ ಅಂತಾ ಚಡಪಡಿಸ್ತಿದ್ಲು. ಇದೇ […]

ಪ್ರಿಯತಮ ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮೆ ಮಸಣ ಸೇರಿದಳು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 23, 2019 | 1:20 PM

Share

ಚಿತ್ರದುರ್ಗ: ಅವ್ನು ಸಿನಿಮಾ ಸ್ಟೈಲ್​ನಲ್ಲಿ ಬಂದು ಮದ್ವೆ ಮಾತುಕತೆಗೆ ಅಡ್ಡ ಹಾಕಿದ್ದ. ಅವಳು ಅಪ್ಪಟ ಪ್ರೇಮದಾಸಿಯಾಗಿ ಪೋಷಕರನ್ನ ಒಪ್ಪಿಸಿ ಇನಿಯನ ಜೊತೆ ಮದ್ವೆಗೆ ಸಜ್ಜಾಗಿದ್ಲು. ಆದ್ರೆ ಕೊನೇ ಗಳಿಗೆಯಲ್ಲಿ ಪ್ರಿಯತಮ ಅದೇನ್ ಹೇಳಿದ್ನೋ ಗೊತ್ತಿಲ್ಲ. ಪರಿಣಾಮ ಆಗಿದ್ದು ಮಾತ್ರ ಪ್ರೀತಿಯ ಸಾವು.

ಹೀಗೆ ಪ್ರೀತಿಯ ಗುಂಗಲ್ಲಿ ಗುನುಗ್ತಿದ್ಲು.. ಖುಷಿಯ ಅಲೆಯಲ್ಲಿ ತೇಲ್ತಿದ್ಲು.. ರೆಕ್ಕೆ ಬಂದ ಪಕ್ಷಿಯಂತೆ ಹಾರಾಡ್ತಿದ್ಲು.. ಭವಿಷ್ಯದ ಬಗ್ಗೆ ನೂರಾರು ಕನಸು ಕಂಡು ನಾಚಿ ನೀರಾಗ್ತಿದ್ಲು.. ನಿನ್ನ ಒಲವು ಇನ್ನೂ ಬೇಕಾಗಿದೆ ಅಂತಾ ಚಡಪಡಿಸ್ತಿದ್ಲು. ಇದೇ ಥರ ಸಂತಸದಲ್ಲಿದ್ದ ರಾಜೇಶ್ವರಿ ಅನ್ನೋ ಹುಡ್ಗಿಗೆ ಪೋಷಕರು ಒಂದ್ ಶಾಕಿಂಗ್ ನ್ಯೂಸ್ ಕೊಟ್ಟಿದ್ರು. ಏಕಾಏಕಿ ರಾಜೇಶ್ವರಿಯನ್ನ ನೋಡೋಕೆ ಗಂಡಿನ ಕಡೆಯವ್ರು ಬಂದ್ಬಿಟ್ಟಿದ್ರು. ಆಗ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೆರೆಯಾಗಲಹಳ್ಳಿಯ ರಾಜೇಶ್ವರಿ ಮನೆಗೆ ಹೀರೋ ರೇಂಜ್​ಗೆ ಒಬ್ನು ಎಂಟ್ರಿ ಕೊಟ್ಟಿದ್ದ. ಆತ ಬೇರೆ ಯಾರೂ ಅಲ್ಲ ರಾಜೇಶ್ವರಿಯ ಲವ್ ಬಾಯ್ ತಿಪ್ಪೇಸ್ವಾಮಿ.

ಫಿಲ್ಮ್ ಸ್ಟೈಲ್​ನಲ್ಲಿ ಬಂದ ತಿಪ್ಪೇಸ್ವಾಮಿ ನಾನು ರಾಜೇಶ್ವರಿಯನ್ನ ಮದ್ವೆ ಆಗ್ತೀನಿ ಅಂದ. ಕೆಲ ದಿನಗಳು ಬಿಟ್ಟು ಮದ್ವೆ ಮಾತುಕತೆಗೆ ಕುಟುಂಬಸ್ಥರ ಜೊತೆಗೆ ಬಂದಿದ್ದ. ಆಗ 5 ಲಕ್ಷ ವರದಕ್ಷಿಣೆ, 3 ತೊಲೆ ಚಿನ್ನ ಹಾಗೂ ಛತ್ರದಲ್ಲಿ ಮದ್ವೆ ಮಾಡಿಕೊಡಿ ಅಂತಾ ಡಿಮ್ಯಾಂಡ್ ಮಾಡಿದ್ನಂತೆ. ಅಷ್ಟು ಕೊಡೋಕೆ ಆಗಲ್ಲ ಅಂದಾಗ ಎದ್ದು ಹೋದ್ರಂತೆ. ಬಳಿಕ ರಾಜೇಶ್ವರಿಗೆ ಫೋನ್ ಮಾಡಿದ ತಿಪ್ಪೇಸ್ವಾಮಿ, ನನ್ನ ಅಪ್ಪನ ಅಮ್ಮನ ಮಾತು ಮೀರಿ ನಿನ್ನ ಮದ್ವೆ ಆಗೋಕೆ ಆಗಲ್ಲ ಅಂದ್ನಂತೆ. ಇದ್ರಿಂದ ನೊಂದ ರಾಜೇಶ್ವರಿ ನೇಣಿಗೆ ಕೊರಳೊಡ್ಡಿದ್ಲು. ಆದ್ರೆ ಮಗ್ಳು ತೀರಿಕೊಂಡ 15 ದಿನಗಳ ಬಳಿಕ ಇದೀಗ ಪೋಷಕರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಇನ್ನು ಸಾವಿಗೂ ಮುನ್ನ ರಾಜೇಶ್ವರಿ ಡೆತ್​ನೋಟ್ ಬರೆದಿಟ್ಟಿದ್ದಾಳೆ. ನನ್ನ ಸಾವಿಗೆ ನನ್ನ ಗಂಡನೇ ಕಾರಣ, ಅವ್ನು ಮೋಸ ಮಾಡ್ತಾನೆ ಅನ್ಕೊಂಡಿರಲಿಲ್ಲ. ನಾನು ಅವನನ್ನ ಕ್ಷಮಿಸಲ್ಲ ಅಂದಿದ್ದಾಳೆ. ಈ ಬಗ್ಗೆ ಹೊಳಲ್ಕೆರೆ ಠಾಣೆಯಲ್ಲಿ ಕೇಸ್ ದಾಖಲಾಗಿ ಎರಡು ವಾರಗಳೇ ಆದ್ರೂ ತಿಪ್ಪೇಸ್ವಾಮಿ ಕುಟುಂಬಸ್ಥರನ್ನ ಬಂಧಿಸಿಲ್ಲ.

ಇಷ್ಟು ದಿನ ಸೈಲೆಂಟ್ ಇದ್ದ ರಾಜೇಶ್ವರಿ ಕುಟುಂಬಸ್ಥರು ಈಗ ಎಸ್​ಪಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ನಮ್ಗೆ ನ್ಯಾಯ ಬೇಕು ಅಂದ್ರು. ಈ ಬಗ್ಗೆ ಪ್ರತಿಕ್ರಿಯಿಸಿದ ಎಸ್​ಪಿ, ತಿಪ್ಪೇಸ್ವಾಮಿ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ. ಸಿಕ್ಕ ಮೇಲೆ ಅವ್ರ ವಿರುದ್ಧ ಸೂಕ್ತ ಕ್ರಮ ಕೈಗೊಳ್ತೀವಿ ಅಂತಿದ್ದಾರೆ. ಒಟ್ನಲ್ಲಿ ದುಡ್ಡಿನ ಮೇಲೆ ಆಸೆಗೋ, ಪೋಷಕರು ಏನಾದ್ರೂ ಹೇಳಿದ್ರೋ ಗೊತ್ತಿಲ್ಲ. ಆದ್ರೆ ತಿಪ್ಪೇಸ್ವಾಮಿ ಕೈಕೊಟ್ಟಿದ್ದಕ್ಕೆ ರಾಜೇಶ್ವರಿ ಸಾವಿನ ಕದ ತಟ್ಟಿದ್ದು ಮಾತ್ರ ದುರಂತ.

Published On - 8:10 am, Fri, 20 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ