AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯತಮನೇ ದರೋಡೆ ಮಾಡಿದ್ದ, ತಿಳಿಯದೆ ಗರ್ಲ್​ಫ್ರೆಂಡೇ ದೂರು ನೀಡಿದ್ದಳು!

ತನ್ನ ಗರ್ಲ್ ಫ್ರೆಂಡ್​ನ ಸ್ನೇಹಿತೆಯ ಬಾಯ್ ಫ್ರೆಂಡ್ ತಂದಿದ್ದ ಚಿನ್ನಾಭರಣಕ್ಕೆ ಬಾಯಿಬಿಟ್ಟ ಖದೀಮ ಆತ ತಂದಿದ್ದ ಚಿನ್ನಾಭರಣವನ್ನು ದೋಚಿ ಜೈಲು ಸೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತನ್ನ ಲವರ್ ಸ್ನೇಹಿತೆಯ ಬಾಯ್ ಫ್ರೆಂಡ್​ಗೆ ಹೆದರಿಸಿ ಚಿನ್ನಾಭರಣ ದೋಚಿದ್ದು ಸ್ನೇಹಿತೆ ಜೊತೆಗೆ ಆಗಮಿಸಿ ತನ್ನ ಬಾಯ್ ಫ್ರೆಂಡ್ ವಿರುದ್ಧವೇ ಯುವತಿ ದೂರು ನೀಡಿದ್ದಾಳೆ.

ಪ್ರಿಯತಮನೇ ದರೋಡೆ ಮಾಡಿದ್ದ, ತಿಳಿಯದೆ ಗರ್ಲ್​ಫ್ರೆಂಡೇ ದೂರು ನೀಡಿದ್ದಳು!
ಚಂದ್ರಲೇಔಟ್ ಪೊಲೀಸರು ವಶಕ್ಕೆ ಪಡೆದುಕೊಂಡ ಚಿನ್ನಾಭರಣ
ಆಯೇಷಾ ಬಾನು
| Edited By: |

Updated on:Mar 23, 2021 | 12:40 PM

Share

ಬೆಂಗಳೂರು: ತನ್ನ ಗರ್ಲ್ ಫ್ರೆಂಡ್​ನ ಸ್ನೇಹಿತೆಯ ಬಾಯ್ ಫ್ರೆಂಡ್ ತಂದಿದ್ದ ಚಿನ್ನಾಭರಣಕ್ಕೆ ಬಾಯಿಬಿಟ್ಟ ಖದೀಮ ಆತ ತಂದಿದ್ದ ಚಿನ್ನಾಭರಣವನ್ನು ದೋಚಿ ಜೈಲು ಸೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತನ್ನ ಲವರ್ ಸ್ನೇಹಿತೆಯ ಬಾಯ್ ಫ್ರೆಂಡ್​ಗೆ ಹೆದರಿಸಿ ಚಿನ್ನಾಭರಣ ದೋಚಿದ್ದಾನೆ. ಆದರೆ ಸ್ನೇಹಿತೆಯ ಜೊತೆಗೆ ಆಗಮಿಸಿದ ಯುವತಿ.. ತನ್ನ ಬಾಯ್ ಫ್ರೆಂಡ್ ವಿರುದ್ಧ ದೂರು ನೀಡಿ, ಸ್ನೇಹಿತೆಗೆ ನ್ಯಾಯ ಒದಗಿಸಿದ್ದಾಳೆ.

ಈ ಸಂಬಂಧ ಜಾಕಿರ್ ಹುಸೇನ್ (30), ಶಾಬಾಜ್ ಖಾನ್(25), ಫಾಜಿಲ್ (23) ಸೇರಿ ಮೂವರನ್ನು ಚಂದ್ರ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 3 ಲಕ್ಷ ಬೆಲೆಬಾಳುವ 102.3 ಗ್ರಾಂ ಚಿನ್ನಾಭರಣ, ಒಂದು ಆ್ಯಕ್ಸಿಸ್ ಬೈಕ್ ವಶಕ್ಕೆ ಪಡೆಯಲಾಗಿದೆ. ಇದೇ ತಿಂಗಳ 13 ರಂದು ಚಂದ್ರ ಲೇಔಟ್​ನ ಭೈರವೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ.

ಘಟನೆ ವಿವರ: ಮಾಯಿ ಮತ್ತು ಆಕೆಯ ಬಾಯ್ ಫ್ರೆಂಡ್ ಆರೋಪಿ ಜಾಕಿರ್ ಹುಸೇನ್ ಇಬ್ಬರೂ ಮಾಯಿಯ ಸ್ನೇಹಿತೆ ನಯನಾಳನ್ನು ಭೇಟಿ ಮಾಡಿ ಅವಳ ಜೊತೆ ಕಾಲಕಳೆಯುತ್ತಿರುತ್ತಾರೆ. ಈ ವೇಳೆ ನಗರ್ತ ಪೇಟೆಯ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ, ಪಶ್ಚಿಮ ಬಂಗಾಳ ಮೂಲದ ಸಪನ್ ಮಿಥ್ಯ ಎಂಬ ಯುವಕ ತನ್ನ ಪ್ರೇಯಸಿಯನ್ನು ಭೇಟಿ ಮಾಡಲು ಬಂದಿರುತ್ತಾನೆ.

ಪಶ್ಚಿಮ ಬಂಗಾಳ ಚುನಾವಣೆಗೆ ಹೋಗೊ ಮುನ್ನ ತನ್ನ ಪ್ರೀತಿಯ ಪ್ರೇಯಸಿ ನಯನಾಳ ಭೇಟಿಗೆ ಬಂದ ಸಪನ್, 3 ಲಕ್ಷ ಮೌಲ್ಯದ 2 ನೆಕ್ಲೆಸ್ ಮತ್ತು ಒಂದು ಬ್ರೇಸ್ ಲೆಟ್ ಕೂಡ ತಂದಿದ್ದ. ಇದನ್ನು ಗಮನಿಸಿದ ಮಾಯಿ ಬಾಯ್ ಫ್ರೆಂಡ್ ಜಾಕಿರ್ ಹುಸೇನ್ ತನ್ನ ಇಬ್ಬರು ಸ್ನೇಹಿತರ ಜೊತೆ ಹೋಗಿ ಸಪನ್​ಗೆ ಬೆದರಿಸಿ ಅವನ ಬಳಿ ಇದ್ದ ಚಿನ್ನಾಭರಣ, ಹಣ ಕಿತ್ತು ಪರಾರಿಯಾಗಿದ್ದ. ಇದ್ಯಾವುದೂ ತಿಳಿಯದ, ಗಮನಿಸಿ.. ಇದ್ಯಾವುದೂ ತಿಳಿಯದ ಮಾಯಿ ತನ್ನ ಸ್ನೇಹಿತೆ ನಯನ ಜೊತೆಗೆ ಬಂದು ಚಂದ್ರ ಲೇಔಟ್ ಠಾಣೆಯಲ್ಲಿ ದರೋಡೆ ಸಂಬಂಧ ದೂರು ದಾಖಲಿಸುತ್ತಾರೆ. ಬಳಿಕ ತನಿಖೆಗೆ ಇಳಿದ ಚಂದ್ರ ಲೇಔಟ್ ಠಾಣೆ ಪೊಲೀಸರು ಜಾಕೀರ್ ಹುಸೇನ್ ಸೇರಿ ಮೂವರನ್ನು ಬಂಧಿಸಿದ್ದಾರೆ….

bengaluru robbery

ಶಾಬಾಜ್ ಖಾನ್, ಜಾಕಿರ್ ಹುಸೇನ್, ಫಾಜಿಲ್

ಇದನ್ನೂ ಓದಿ: ಬಾಗಲಗುಂಟೆ ಠಾಣೆ ಪೊಲೀಸರ ಕಾರ್ಯಾಚರಣೆ ಯಶಸ್ವಿ; ಇಬ್ಬರು ದರೋಡೆಕೋರರ ಬಂಧನ

Published On - 12:25 pm, Tue, 23 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ