AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದಲ್ಲಿ ನಡೆದಿದೆ

ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಪಬ್- ಸಾಂದರ್ಭಿಕ ಚಿತ್ರImage Credit source: Zomato
ನಯನಾ ರಾಜೀವ್
|

Updated on: Aug 10, 2023 | 12:52 PM

Share

ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದಲ್ಲಿ ನಡೆದಿದೆ. ಬಾಗಾ ಪಟ್ಟಣದ ಪಬ್​ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕುಡಿದ ಅಮಲಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಎ ಕೋನ್ ಎಂದು ಗುರುತಿಸಲ್ಪಟ್ಟ ಡಿಐಜಿ ಈ ಹಿಂದೆ ದೆಹಲಿ ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದರು. ಸೋಮವಾರ ರಾತ್ರಿ ಈ ಘಟನೆ ನಡೆದಿದೆ.

ಮೂಲಗಳ ಪ್ರಕಾರ, ಘಟನೆಯ ಸಮಯದಲ್ಲಿ ಕೋನ್ ಮದ್ಯದ ಅಮಲಿನಲ್ಲಿದ್ದರು. ಅವರು ರಾಜ್ಯದ ಪ್ರಮುಖ ರಾಜಕಾರಣಿಯೊಂದಿಗೆ ಸಂಬಂಧ ಹೊಂದಿದ್ದ ಕ್ಲಬ್‌ನಲ್ಲಿ ಮಹಿಳೆಯೊಂದಿಗೆ ಜಗಳವಾಡಿದರು ಮತ್ತು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ವರದಿಯಾಗಿದೆ.

ಘಟನೆಯ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಿಐಜಿ ಮತ್ತು ಮಹಿಳೆ ಜತೆ ಮಾತಿನ ಚಕಮಕಿಯಲ್ಲಿ ತೊಡಗಿರುವುದನ್ನು ಕಾಣಬಹುದು. ಮಹಿಳೆ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ ಬಳಿಕ ಗಲಾಟೆ ನಡೆದಿದೆ. ಪ್ರಕರಣದ ತನಿಖೆಯಿಂದ ಡಿಐಜಿ ಅವರು ಘಟನೆಯ ಸಮಯದಲ್ಲಿ ವೈದ್ಯಕೀಯ ರಜೆಯಲ್ಲಿದ್ದರು ಎಂದು ತಿಳಿದುಬಂದಿದೆ.

ಮತ್ತಷ್ಟು ಓದಿ: ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್​ ದಾಖಲು

ಘಟನೆಯನ್ನು ಗಮನಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಗೋವಾ ವಿಧಾನಸಭೆಯಲ್ಲೂ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂಬ ಬೇಡಿಕೆಯನ್ನು ಇಡಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​