AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಪ್ರೇಯಸಿಯ ಕತ್ತು ಕೊಯ್ದು ಕೊಂದು, ಅಂಬಾಲಿ ಘಾಟ್​​ನಲ್ಲಿ ಎಸೆದ ಪ್ರೇಮಿ

30 ವರ್ಷದ ತನ್ನ ಗೆಳತಿ ಕಾಮಾಕ್ಷಿ ಎಂಬಾಕೆಯನ್ನು ಕೊಂದ ನಂತರ 22 ವರ್ಷದ ಆರೋಪಿ ಫಕೀರ್ ಆಕೆಯ ದೇಹವನ್ನು ಕೊಲೆ ಮಾಡಿದ ಸ್ಥಳದಿಂದ 80 ಕಿ.ಮೀ ದೂರದಲ್ಲಿರುವ ಮಹಾರಾಷ್ಟ್ರದ ಅಂಬೋಲಿ ಘಾಟ್‌ನಲ್ಲಿ ಎಸೆದಿದ್ದಾನೆ.

Murder: ಪ್ರೇಯಸಿಯ ಕತ್ತು ಕೊಯ್ದು ಕೊಂದು, ಅಂಬಾಲಿ ಘಾಟ್​​ನಲ್ಲಿ ಎಸೆದ ಪ್ರೇಮಿ
ಮೃತ ಯುವತಿ ಕಾಮಾಕ್ಷಿ
Follow us
ಸುಷ್ಮಾ ಚಕ್ರೆ
|

Updated on: Sep 02, 2023 | 5:47 PM

ಗೋವಾ: ಪ್ರೇಯಸಿಯೊಂದಿಗೆ ಬ್ರೇಕಪ್ ಮಾಡಿಕೊಂಡ ಯುವಕನೊಬ್ಬ ಆಕೆಯನ್ನು ಕೊಲೆ (Murder) ಮಾಡಿ, ಆಕೆಯ ದೇಹವನ್ನು ತುಂಡು ಮಾಡಿ, ಆ ಭಾಗಗಳನ್ನು ಅಂಬೋಲಿ ಘಾಟ್​​ನಲ್ಲಿ (Amboli Ghat) ಬಿಸಾಡಿರುವ ಆಘಾತಕಾರಿ ಘಟನೆ ಗೋವಾದಲ್ಲಿ (Goa) ನಡೆದಿದೆ. ಈ ಕೊಲೆ ಆರೋಪದ ಮೇಲೆ 22 ವರ್ಷದ ಯುವಕನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. 30 ವರ್ಷದ ತನ್ನ ಗೆಳತಿ ಕಾಮಾಕ್ಷಿ ಶಂಕರ್ ಉದ್ದಪ್ನೋವ್ ಎಂಬಾಕೆಯನ್ನು ಕೊಂದ ನಂತರ 22 ವರ್ಷದ ಆರೋಪಿ ಫಕೀರ್ ಅಲಿಯಾಸ್ ಪ್ರಕಾಶ್ ಚುಂಚ್ವಾಡ್ ಆಕೆಯ ದೇಹವನ್ನು ಕೊಲೆ ಮಾಡಿದ ಸ್ಥಳದಿಂದ 80 ಕಿ.ಮೀ ದೂರದಲ್ಲಿರುವ  ಮಹಾರಾಷ್ಟ್ರದ ಅಂಬೋಲಿ ಘಾಟ್‌ನಲ್ಲಿ ಎಸೆದಿದ್ದಾನೆ.

ಅಂಬೋಲಿ ಘಾಟ್​ನಿಂದ ಸುಮಾರು 80 ಕಿ.ಮೀ. ದೂರವಿರುವ ಚುಂಚ್‌ವಾಡ್ ಕಾಮಾಕ್ಷಿ ಉದ್ದಪ್ನೋವ್ ಅವರ ಫ್ಲಾಟ್‌ನಲ್ಲಿ ಆತ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಗೋವಾದ ಪೊರ್ವೊರಿಮ್‌ನಲ್ಲಿ ಆಗಸ್ಟ್ 29ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಮುಂಬೈ: ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಆಕೆಯ ತಮ್ಮನನ್ನೇ ಹತ್ಯೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದ ವ್ಯಕ್ತಿಯ ಬಂಧನ

ಪ್ರೇಯಸಿಯನ್ನು ಕೊಂದ ನಂತರ ಆತ ತನ್ನ ಸ್ನೇಹಿತನ ಸಹಾಯದಿಂದ ಶವವನ್ನು ಅಂಬೋಲಿ ಘಾಟ್​​ಗೆ ತೆಗೆದುಕೊಂಡು ಹೋಗಿ ಎಸೆದಿದ್ದಾನೆ. ಕೊಲೆಗೂ ಮುನ್ನ ಯುವತಿಯೊಂದಿಗೆ ಜಗಳವಾಡಿದ್ದ ಆತನ ವಿರುದ್ಧ ಮಾಪುಸಾ ಪೊಲೀಸ್ ಠಾಣೆಯಲ್ಲಿ ನಾನ್-ಕಾಗ್ನಿಸೆಬಲ್ ಅಪರಾಧ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ಧ ಕೇಸ್ ದಾಖಲಿಸಿದ ಪ್ರೇಯಸಿಯ ಮೇಲೆ ಕೋಪದಿಂದ ಆಕೆಯನ್ನು ಪೊರ್ವೊರಿಮ್‌ನಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಗಂಡನಿಂದಲೇ ಹೆಂಡತಿಯ ಕೊಲೆ? 20 ದಿನಗಳ ನಂತರ ಶವ ಹೊರತೆಗೆದು ಶವಪರೀಕ್ಷೆ

ಪೋರ್ವೊರಿಮ್ ಪೊಲೀಸರು ಮೃತ ಕಾಮಾಕ್ಷಿಯ ಶವವನ್ನು ಸಾಗಿಸಲು ಬಳಸಿದ ಕಾರನ್ನು ವಶಕ್ಕೆ ಪಡೆದಿದ್ದಾರೆ. ಬೆಳಗ್ಗೆ ಕಾಮಾಕ್ಷಿಯ ಕುಟುಂಬದ ಸದಸ್ಯರು ಮನೆಗೆ ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಬಳಿಕ ಅವರು ಪೊರ್ವೊರಿಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ಕುರಿತು ತನಿಖೆ ನಡೆಸುವಾಗ ಮೃತ ಯುವತಿಯ ಪ್ರಿಯಕರನ ಮೇಲೆ ಅನುಮಾನ ಉಂಟಾಗಿ ವಿಚಾರಣೆ ನಡೆಸಿದಾಗ ಆತ ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಇನ್ನಷ್ಟು ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್