AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿವಾಳ: ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುವವರಿಂದಲೇ ಚಿನ್ನಾಭರಣ ಕಳ್ಳತನ; ಆರೋಪಿ ಅಮ್ಮು ಬಂಧನ

ಬೆಂಗಳೂರಿನ ವೈದ್ಯ ದಂಪತಿ ಮನೆಯಲ್ಲಿ ಚಿನ್ನಾಭರಣ ಕಳುವಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಮನೆಯಲ್ಲೇ ಕೆಲಸ ಮಾಡುತ್ತಿದ್ದ ಅಮ್ಮುವನ್ನು ಬಂಧಿಸಲಾಗಿದೆ.

ಮಡಿವಾಳ: ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುವವರಿಂದಲೇ ಚಿನ್ನಾಭರಣ ಕಳ್ಳತನ; ಆರೋಪಿ ಅಮ್ಮು ಬಂಧನ
ವಶಪಡಿಸಿಕೊಂಡ ಚಿನ್ನಾಭರಣ ಮತ್ತು ಆರೋಪಿಯೊಂದಿಗೆ ಮಡಿವಾಳ ಪೊಲೀಸ್ ಠಾಣೆ ಸಿಬ್ಬಂದಿ
TV9 Web
| Edited By: |

Updated on:Sep 01, 2021 | 10:22 AM

Share

ಮನೆಯಲ್ಲಿ ಕೆಲಸ ಮಾಡುವವರೇ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣವೊಂದು ದಾಖಲಾಗಿದೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೈದ್ಯ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮ್ಮು ಎಂಬುವವರನ್ನು ಬಂಧಿಸಲಾಗಿದೆ. ಬಂಧಿತ ಅಮ್ಮುಳಿಂದ 235 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣವೇನು?

ವೈದ್ಯ ದಂಪತಿಗಳು ವರಮಹಾಲಕ್ಷ್ಮಿ ಪೂಜೆಯ ಸಂದರ್ಭದಲ್ಲಿ ಚಿನ್ನ ಇಡಲು ಹೋದಾಗ ಚಿನ್ನ ಕಳ್ಳತನವಾಗಿದ್ದರ ಕೃತ್ಯ ಬಯಲಾಗಿದೆ. ಆಗ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಕಷ್ಟು ಭದ್ರತೆ ಇರುವ ಸ್ಥಳದಲ್ಲಿ ವೈದ್ಯ ದಂಪತಿಗಳು ವಾಸವಿದ್ದುದರಿಂದ ಮನೆಯ ಕೆಲಸದವರ ಮೇಲೆ ಅನುಮಾನ ಹೆಚ್ಚಾಗಿದೆ. ತನಿಖೆ ಕೈಗೊಂಡ ನಂತರ ಅಮ್ಮು ಕೃತ್ಯ ಬಯಲಾಗಿದೆ.

ವೈದ್ಯರ ಮನೆಯಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದ ಅಮ್ಮು, ಮನೆಯಲ್ಲಿದ್ದ ಚಿನ್ನವನ್ನು ಹಂತಹಂತವಾಗಿ ಕದ್ದೊಯ್ದಿದ್ದಳು. ಮನೆಯಲ್ಲಿ ನಾಲ್ವರು ಕೆಲಸಗಾರರಿದ್ದುದರಿಂದ ಅನುಮಾನ ಬಾರದಂತೆ ಕೃತ್ಯ ಎಸಗಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಬಂಧಿತಳಿಂದ ಸುಮಾರು 12 ಲಕ್ಷ ರೂ ಮೌಲ್ಯದ 235 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗದಲ್ಲಿ ಬಸ್​ಗಳಿಂದ ಡೀಸೆಲ್ ಕಳ್ಳತನ:

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಒಡೆತನ ಹೊಂದಿರುವ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್​ಗಳಿಂದ ಸುಮಾರು 580 ಲೀಟರ್​ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್​ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್​ಗಳಿಂದ ಡೀಸೆಲ್​ ಕದಿಯಲಾಗಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್​ಗಳಿಂದ ತಡರಾತ್ರಿ ವೇಳೆ ಡೀಸೆಲ್​ ಕದಿಯಲಾಗಿದೆ.

ಇದನ್ನೂ ಓದಿ:

ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ

ಮೋಸ ಮಾಡೋಕ್ಕೆ ತೂಕದ ಅಡ್ಜೆಸ್ಟ್​​ಮೆಂಟ್! 7 ಅಂಗಡಿಗಳಿಗೆ ನೋಟಿಸ್, ಮೂವರು ಅರೆಸ್ಟ್

(Gold theft by cleaning worker of the same house accused Ammu is arrested in Bengaluru)

Published On - 10:10 am, Wed, 1 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ