ಮೂತ್ತೂಟ್ ಫೈನಾನ್ಸ್ ಗೋಡೆ ಕೊರೆದು 77 ಕೆಜಿ ಚಿನ್ನಾಭರಣ ಕಳವು

ಬೆಂಗಳೂರು: ಶನಿವಾರ ತಡರಾತ್ರಿ ಫ್ರೇಜರ್ ಟೌನ್​ನಲ್ಲಿರುವ ಮೂತ್ತೂಟ್ ಫೈನಾನ್ಸ್​ನ ಗೋಡೆ ಕೊರೆದು ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಸುಮಾರು 10 ಜನರ ಗ್ಯಾಂಗ್​ ಬಾತ್ ರೂಮ್ ಗೋಡೆ ಕೊರೆದು 77 ಕೆ.ಜಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಗ್ಯಾಸ್ ಕಟ್ಟರ್ ಬಳಸಿ ಗೋಡೆ ಕೊರೆದು ಆರೋಪಿಗಳು ಚಿನ್ನ ದೋಚಿದ್ದಾರೆ. ಮುತ್ತೂಟ್ ಫೈ‌ನಾನ್ಸ್​ನಲ್ಲಿ ನೇಪಾಳ ಮೂಲದ ವ್ಯಕ್ತಿ ಸೆಕ್ಯೂರಿಟಿ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಸೆಕ್ಯೂರಿಟಿ ಮೇಲೆಯೇ ಶಂಕೆ ವ್ಯಕ್ತವಾಗಿದ್ದು, ನಿನ್ನೆ ಪುಲುಕೇಶಿನಗರ ಪೊಲೀಸ್ ಠಾಣೆಯಲ್ಲಿ ಮುತ್ತೂಟ್ ಫೈನಾನ್ಸ್​ನವರು ದೂರು […]

ಮೂತ್ತೂಟ್ ಫೈನಾನ್ಸ್ ಗೋಡೆ ಕೊರೆದು 77 ಕೆಜಿ ಚಿನ್ನಾಭರಣ ಕಳವು
ಸಾಧು ಶ್ರೀನಾಥ್​

Updated on: Dec 24, 2019 | 5:38 PM

ಬೆಂಗಳೂರು: ಶನಿವಾರ ತಡರಾತ್ರಿ ಫ್ರೇಜರ್ ಟೌನ್​ನಲ್ಲಿರುವ ಮೂತ್ತೂಟ್ ಫೈನಾನ್ಸ್​ನ ಗೋಡೆ ಕೊರೆದು ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಸುಮಾರು 10 ಜನರ ಗ್ಯಾಂಗ್​ ಬಾತ್ ರೂಮ್ ಗೋಡೆ ಕೊರೆದು 77 ಕೆ.ಜಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.

ಗ್ಯಾಸ್ ಕಟ್ಟರ್ ಬಳಸಿ ಗೋಡೆ ಕೊರೆದು ಆರೋಪಿಗಳು ಚಿನ್ನ ದೋಚಿದ್ದಾರೆ. ಮುತ್ತೂಟ್ ಫೈ‌ನಾನ್ಸ್​ನಲ್ಲಿ ನೇಪಾಳ ಮೂಲದ ವ್ಯಕ್ತಿ ಸೆಕ್ಯೂರಿಟಿ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಸೆಕ್ಯೂರಿಟಿ ಮೇಲೆಯೇ ಶಂಕೆ ವ್ಯಕ್ತವಾಗಿದ್ದು, ನಿನ್ನೆ ಪುಲುಕೇಶಿನಗರ ಪೊಲೀಸ್ ಠಾಣೆಯಲ್ಲಿ ಮುತ್ತೂಟ್ ಫೈನಾನ್ಸ್​ನವರು ದೂರು ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Published On - 5:37 pm, Tue, 24 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us