AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯನ್ನು ಚುಡಾಯಿಸಿದ ಯುವಕನಿಗೆ ಸಾರ್ವಜನಿಕರಿಂದ ಗೂಸಾ; ಯುವಕನನ್ನು ವಶಕ್ಕೆ ಪಡೆದ ವಿದ್ಯಾಗಿರಿ ಪೊಲೀಸ್

ಹೊಲದಲ್ಲಿ ಕಟ್ಟಿದ್ದ ಎತ್ತುಗಳನ್ನು ಕಳ್ಳತನ ಮಾಡಿದ್ದ ಯುವಕನನ್ನು ಗ್ರಾಮಸ್ಥರು ಬಂಧಿಸಿರುವಂತಹ ಘಟನೆ ಕಲ್ಲಾಪುರ ಗ್ರಾಮದ ಬಳಿ ನಡೆದಿದೆ.

ಯುವತಿಯನ್ನು ಚುಡಾಯಿಸಿದ ಯುವಕನಿಗೆ ಸಾರ್ವಜನಿಕರಿಂದ ಗೂಸಾ; ಯುವಕನನ್ನು ವಶಕ್ಕೆ ಪಡೆದ ವಿದ್ಯಾಗಿರಿ ಪೊಲೀಸ್
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Apr 13, 2022 | 6:23 AM

Share

ಧಾರವಾಡ: ಹಿಂದೂ ಯುವತಿ ಚುಡಾಯಿಸಿದ ಮುಸ್ಲಿಂ ಯುವಕನಿಗೆ ಸಾರ್ವಜನಿಕರಿಂದ ಗೂಸಾ ನೀಡಿರುವಂತಹ ಘಟನೆ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಇರ್ಷಾದ್, ಗೂಸಾ ತಿಂದ ಯುವಕ. ಯುವತಿಗೆ ನಿರಂತರ ಕಿರುಕುಳ (Harassment) ನೀಡಿದ್ದು, ಎಚ್ಚರಿಕೆ ಕೊಟ್ಟರೂ ಇರ್ಷಾದ್ ಬೆನ್ನು ಬಿದಿದ್ದ. ಗೌಳಿ ಗಲ್ಲಿ ಬಡಾವಣೆಯ ಯುವತಿ ತನ್ನ ತಾಯಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ. ಇರ್ಷಾದ್​ನಿಗೆ ಸಾರ್ವಜನಿಕವಾಗಿ ಯುವತಿ ತಾಯಿ ಥಳಿಸಿದ್ದು, ಬಳಿಕ ಘಟನೆ ಅರಿತ ಸಾರ್ವಜನಿಕರಿಂದಲೂ ಗೂಸಾ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ವಿದ್ಯಾಗಿರಿ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಹೊಲದಲ್ಲಿ ಕಟ್ಟಿದ ಎತ್ತುಗಳು ಕಳವು; ಕಳನನ್ನು ಹಿಡಿದ ಗ್ರಾಮಸ್ಥರು:

ಧಾರವಾಡ: ಹೊಲದಲ್ಲಿ ಕಟ್ಟಿದ್ದ ಎತ್ತುಗಳನ್ನು ಕಳ್ಳತನ ಮಾಡಿದ್ದ ಯುವಕನನ್ನು ಗ್ರಾಮಸ್ಥರು ಬಂಧಿಸಿರುವಂತಹ ಘಟನೆ ಕಲ್ಲಾಪುರ ಗ್ರಾಮದ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ನಿವಾಸಿ ಸುಭಾನಿ ಅನ್ನೋ ಯುವಕನಿಂದ ಕೃತ್ಯ ಎಸಗಲಾಗಿದೆ. ಕೇದಾರಿಗೌಡ ಪಾಟೀಲ್ ಅನ್ನೋರಿಗೆ ಸೇರಿದ ಒಂದು ಲಕ್ಷ ರೂ.‌ ಮೌಲ್ಯದ ಎತ್ತುಗಳನ್ನು ಬೊಲೆರೋ ವಾಹನದಲ್ಲಿ 2 ಎತ್ತುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದು. ಓರ್ವ ಕಳ್ಳನನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಫಲವತ್ತಾದ ಭೂ ಸ್ವಾಧೀನ ಕೈಬಿಡುವಂತೆ ರೈತರು ಪಟ್ಟು; ಮನವಿ ನೀಡಲು ಬಂದ ರೈತರನ್ನು ತಡೆದ ಪೊಲೀಸರು:

ಬೆಳಗಾವಿ: ಕಣಬರ್ಗಿಯಲ್ಲಿ ನೂತನ ಬಡಾವಣೆಗಾಗಿ ಬುಡಾದಿಂದ‌ ಭೂಸ್ವಾಧೀನ ಮಾಡಲಾಗಿದ್ದು, ಬಿಜೆಪಿ ನಾಯಕರು ತಂಗಿರುವ ಹೋಟೆಲ್‌ಗೆ ರೈತರು ಮುತ್ತಿಗೆಗೆ ಯತ್ನಿಸಿದ್ದಾರೆ. ಫಲವತ್ತಾದ ಭೂ ಸ್ವಾಧೀನ ಕೈಬಿಡುವಂತೆ ರೈತರು ಪಟ್ಟು ಹಿಡಿದಿದ್ದಾರೆ. ಬಿಎಸ್‌ವೈ, ಅರುಣ್ ಸಿಂಗ್​ಗೆ ಮನವಿ ನೀಡಲು ಅವಕಾಶ ನೀಡುವಂತೆ ರೈತರು ಪಟ್ಟು ಹಿಡಿದಿದ್ದಾರೆ. ರೈತರನ್ನು ಗೇಟ್ ಆವರಣದಲ್ಲಿ ತಡೆದ ಪೊಲೀಸರು ಮರಳಿ ಕಳುಹಿಸಲು ಹರಸಾಹಸ ಪಟ್ಟರು. ಪೊಲೀಸರ ಮಾತಿಗೆ ಬೆಲೆ ಕೊಡದೇ ಹೋಟೆಲ್ ಮುತ್ತಿಗೆಗೆ ರೈತರು ಯತ್ನಿಸಿದ್ದಾರೆ. ಮಾಳ ಮಾರುತಿ ಠಾಣೆ ಪೊಲೀಸರು ರೈತರನ್ನು ‌ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:

ಹೊಟ್ಟೆಯ ಕೊಬ್ಬನ್ನು ಕರಗಿಸಲು ಸಹಾಯಕಾರಿ ಈ 5 ಯೋಗಾಸನಗಳು; ಇಲ್ಲಿದೆ ನೋಡಿ ಮಾಹಿತಿ

ಮೊಟ್ಟೆ ಸೇವನೆ ಮತ್ತು ಕೊಲೆಸ್ಟ್ರಾಲ್ ನಡುವೆ ಸಂಬಂಧವಿದೆಯೇ? ಆಹಾರ ತಜ್ಞರು ಏನಂತಾರೆ?

Published On - 5:52 pm, Tue, 12 April 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್